Homeಮುಖಪುಟಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

ಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

- Advertisement -
- Advertisement -

ಕಳೆದ ಎರಡು ತಿಂಗಳಿನಿಂದ ಕೊರೊನಾ ಎರಡನೆ ಅಲೆಯ ಉಲ್ಬಣಕ್ಕೆ ಸಿಲುಕಿಕೊಂಡಿದ್ದ ದೇಶದ ಹಲವಾರು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇದೀಗ ಈ ರಾಜ್ಯಗಳು ಸೋಂಕಿನ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿ ಅನ್‌ಲಾಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.

ಈ ಬಗ್ಗೆ 10 ಪಾಯಿಂಟ್‌ಗಳು ಇಲ್ಲಿದೆ

  1. ದೆಹಲಿಯಲ್ಲಿ, ಮಾಲ್‌ಗಳು, ಮಾರುಕಟ್ಟೆಗಳು, ಮಾರುಕಟ್ಟೆ ಕಾಂಪ್ಲೆಕ್ಸ್‌ಗಳು, ಸ್ವತಂತ್ರವಾಗಿರುವ ಅಂಗಡಿಗಳು ಮತ್ತು ಅಕ್ಕಪಕ್ಕ ಇರುವ ಅಂಗಡಿಗಳು ಬೆಸ-ಸಮ ಆಧಾರದಲ್ಲಿ ಹಾಗೂ ಸಮಯದ ನಿರ್ಬಂಧಗಳೊಂದಿಗೆ ತೆರೆಯಲ್ಪಡುತ್ತವೆ. ಮೇ 10 ರಿಂದ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೋ ಕೂಡಾ 50% ದಷ್ಟು ಸಾಮರ್ಥ್ಯದೊಂದಿಗೆ ಸೇವೆಗಳನ್ನು ಪುನರಾರಂಭಿಸಲಿದೆ. ಖಾಸಗಿ ಕಚೇರಿಗಳಿಗೆ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಸೋಂಕಿನ ಪ್ರಮಾಣ ಮತ್ತು ಆಸ್ಪತ್ರೆಯ ಹಾಸಿಗೆಗೆ ಅನುಗುಣವಾಗಿ ನಿರ್ಬಂಧಗಳನ್ನು ತೆರವುಗೊಳಿಸುವ ಐದು ಹಂತದ ಯೋಜನೆಯನ್ನು ಮಹಾರಾಷ್ಟ್ರ ಹಮ್ಮಿಕೊಂಡಿದೆ.
  3. ಮುಂಬೈಯಲ್ಲಿ, ರೆಸ್ಟೋರೆಂಟ್‌ಗಳು, ಅತ್ಯಗತ್ಯವಲ್ಲದ(ನಾನ್‌-ಎಷೆನ್ಸಿಯಲ್) ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಇಂದು ತೆರೆಯಲಾಗುತ್ತದೆ. ಆದರೆ ಮಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳ ಮೇಲಿನ ನಿರ್ಬಂಧ ಹಾಗೆ ಇದೆ. ನಗರದ ಸ್ಥಳೀಯ ರೈಲುಗಳಿಗೆ ಅಗತ್ಯ ಕಾರ್ಮಿಕರನ್ನು ಮಾತ್ರ ಸಾಗಿಸಲು ಅನುಮತಿ ನೀಡಲಾಗಿದೆ. ಬಸ್ಸುಗಳಿಗೆ ತಮ್ಮ ಸೀಟುಗಳ ಪೂರ್ಣ ಸಾಮರ್ಥ್ಯದೊಂದಿಗೆ ಚಲಾಯಿಸಲು ಅನುಮತಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತೆ ಇಲ್ಲ.

    ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

  4. ಉತ್ತರ ಪ್ರದೇಶ ಸರ್ಕಾರವು ವಾರಣಸಿ, ಮುಜಫರ್‌‌ನಗರ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ ಜಿಲ್ಲೆಗಳಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 600 ಕ್ಕಿಂತ ಕಡಿಮೆಯಿರುವ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಂದಿನಿಂದ ವಾರದಲ್ಲಿ ಐದು ದಿನಗಳವರೆಗೆ ತೆರೆಯಲು ಅನುಮತಿ ನೀಡಿದೆ. ಈ ಲಾಕ್‌ಡೌನ್‌ ತೆರವು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರವಾಗಿದೆ. ಆದಾಗ್ಯೂ, ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳು ಮುಂದುವರಿಯಲಿವೆ.
  5. ಹರಿಯಾಣದಲ್ಲಿ ಜೂನ್ 14 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಲವಾರು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿಸಲಾಗಿದೆ. ಒಂದು ಸಮಯದಲ್ಲಿ ಗರಿಷ್ಠ 21 ಜನರಿಗೆ ಧಾರ್ಮಿಕ ಸ್ಥಳಗಳಲ್ಲಿ ಸೇರಲು ಅನುಮತಿ ನೀಡಲಾಗಿದೆ. ಕಾರ್ಪೊರೇಟ್ ಕಚೇರಿಗಳು 50% ಹಾಜರಾತಿಯೊಂದಿಗೆ ತೆರೆಯಬಹುದು. ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಕೊರೊನಾ ಮಾರ್ಗಸೂಚಿಗಳೊಂದಿಗೆ 50%  ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗಿದೆ.
  6. ಸಿಕ್ಕಿಂನಲ್ಲಿ, ದಿನಸಿ ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಹಾರ್ಡ್‌ವೇರ್ ಅಂಗಡಿಗಳು ಇಂದಿನಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿಡಬಹುದು. ಆದಾಗ್ಯೂ, ರಾಜ್ಯವ್ಯಾಪಿ ಲಾಕ್ಡೌನ್ ಅನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.
  7. ಜಮ್ಮು ಕಾಶ್ಮೀರ ಆಡಳಿತವು ಲಾಕ್‌ಡೌನ್ ಅನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಸುಮಾರು ಒಂದು ತಿಂಗಳ ಲಾಕ್‌ಡೌನ್ ನಂತರ ಜಮ್ಮು ತನ್ನ ಅನ್‌ಲಾಕ್ ಪ್ರಕ್ರಿಯೆಯನ್ನು ಹಂತಹಂತವಾಗಿ ಭಾನುವಾರದಿಂದ ಪ್ರಾರಂಭಿಸಿದೆ.

    ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

  8. ತಮಿಳುನಾಡು ತನ್ನ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಿದೆ. ಕೊಯಮತ್ತೂರು ಸೇರಿದಂತೆ 11 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲಿ, ಸ್ವತಂತ್ರ ದಿನಸಿ ಸರಬರಾಜು ಮಳಿಗೆಗಳನ್ನು ಇಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮನೆಗೆಲಸದ ಸಿಬ್ಬಂದಿಗಳು ಅಪಾರ್ಟ್ಮೆಂಟ್ ಮತ್ತು ಕಚೇರಿ ಕಾಂಪ್ಲೆಕ್ಸ್‌ಗಳಿಗೆ ಕೆಲಸಕ್ಕೆ ತೆರಳಬಹುದಾಗಿದೆಯಾದರೂ ಇದಕ್ಕೆ ಇ-ನೋಂದಣಿ ಅಗತ್ಯವಿದೆ. ಈ ಪಾಸ್‌ ಇರುವ ಇಬ್ಬರು ಪ್ರಯಾಣಿಕರನ್ನು ಹೊಂದಿರುವ ಆಟೊಗಳು ಮತ್ತು ಮೂವರೊಂದಿಗೆ ಕ್ಯಾಬ್‌ಗಳಿಗೆ ಕೂಡಾ ಅನುಮತಿಸಲಾಗಿದೆ.
  9. ಕೊರೊನಾ ಪಾಸಿಟಿವಿಟಿ ಪ್ರಮಾಣವು 5% ಕ್ಕಿಂತ ಕಡಿಮೆಯಾದ ನಂತರ ಮಾತ್ರ ನಿರ್ಬಂಧಗಳನ್ನು ಸರಾಗಗೊಳಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ತನ್ನ ಲಾಕ್‌ಡೌನ್ ಅನ್ನು ಇತ್ತೀಚೆಗೆ ಜೂನ್ 14 ರವರೆಗೆ ವಿಸ್ತರಿಸಿದೆ. ಆದರೆ ಯಾವುದೆ ವಿನಾಯಿಯನ್ನು ನೀಡಿಲ್ಲ.
  10. ದೇಶದಲ್ಲಿ ಕಳೆದ ಎರಡು ತಿಂಗಳ ನಂತರ 1 ಲಕ್ಷಕ್ಕಿಂತಲೂ ಕಡಿಮೆ ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಾ ಇರುವುದರಿಂದ ದೇಶಾದ್ಯಂತ ಲಾಕ್‌ಡೌನ್‌ ತೆರವುಗೊಳಿಸುವ ಭರವಸೆಯನ್ನು ಹುಟ್ಟುಹಾಕಿದೆ. ಇದರಿಂದಾಗಿ ಷೇರುಗಳು ಇಂದು ಬೆಳಿಗ್ಗೆ ಹೆಚ್ಚಿನ ಮಟ್ಟದಲ್ಲಿ ಏರಿದ್ದು, ಇದು ದಾಖಲೆಯ ಗರಿಷ್ಠ ಮಟ್ಟದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....