Homeಮುಖಪುಟಉನ್ನಾವೊ ಘಟನೆ: ಬಿಜೆಪಿಯ ಉಚ್ಛಾಟಿತ ಶಾಸಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉನ್ನಾವೊ ಘಟನೆ: ಬಿಜೆಪಿಯ ಉಚ್ಛಾಟಿತ ಶಾಸಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

2017 ರ ಉನ್ನಾವೊದಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ ಬಿಜೆಪಿಯಿಂದ ಹೊರಹಾಕಲ್ಪಟ್ಟ ಶಾಸಕ ಕುಲದೀಪ್ ಸೆಂಗಾರ್ ವಿರುದ್ಧ ದೆಹಲಿ ನ್ಯಾಯಾಲಯವು ಶುಕ್ರವಾರ ಪೋಕ್ಸೋ ಕಾಯ್ದೆಯಡಿ ಅಪಹರಣ ಮತ್ತು ಅತ್ಯಾಚಾರದ ಆರೋಪಗಳನ್ನು ಹೊರಿಸಿದೆ.

ಮೂವರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಐದು ಜನರೊಂದಿಗೆ ಸೆಂಗಾರ್ ಮತ್ತು ಆತನ ಸಹೋದರ ಸಂತ್ರಸ್ತ ಬಾಲಕಿಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ಸಿಬಿಐ ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಉನ್ನಾವ್ ಅತ್ಯಾಚಾರದ ಸಂತ್ರಸ್ತೆ ಕಾರು ಅಪಘಾತದಿಂದ ತೀವ್ರವಾದ ರಕ್ತ ಸೋಂಕಿನಿಂದ ಜೀವನ್ಮರನದ ನಡುವೆ ಹೋರಾಡುತ್ತಿದ್ದಾಳೆ. ಸದ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು ಆಕೆಗೆ ನೀಡಲಾಗುವ ಏಳು ಪ್ರತಿಜೀವಕಗಳಲ್ಲಿ ಆರು ನಿಷ್ಪರಿಣಾಮಕಾರಿಯಾಗಿವೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಬಾಲಕಿಯ ಬ್ಲಡ್ ಕಲ್ಚರ್ ಪರೀಕ್ಷೆಯ ವರದಿಯಲ್ಲಿ ಆಕೆಯ ರಕ್ತದಲ್ಲಿ ಗಂಭೀರ ಸೋಂಕು ಇದೆ ಎಂದು ತಿಳಿದುಬಂದಿದೆ. ಆಗಸ್ಟ್ 6 ರಂದು ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ (ಕೆಜಿಎಂಯು) ದೆಹಲಿಯ ಏಮ್ಸ್ ಗೆ ಸ್ಥಳಾಂತರಗೊಂಡ ನಂತರ ಈ ವರದಿ ಬಂದಿದೆ.

ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಸಂತ್ರಸ್ತೆಯ ಕುಟುಂಬದ ಮನವಿಯ ನಂತರ ರದ್ದುಪಡಿಸಲಾಗಿದೆ. ಈ ನಡುವೆ ಉನ್ನಾವ್ ಅತ್ಯಾಚಾರ ಆರೋಪಿ ಕುಲದೀಪ್ ಸಿಂಗ್ ಸೆಂಗರ್ ಅವರ ಸಂಬಂಧಿ ನಿಪೇಂದರ್ ಸಿಂಗ್ ಅವರು ಸತ್ಯದ ಬಗ್ಗೆ ತಿಳಿಯಲು ಪಾಲಿಗ್ರಾಫ್ ಮತ್ತು ನಾರ್ಕೊ-ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಬೇಕೆಂದು ಒತ್ತಾಯಿಸಿದರು.

“ಕುಲದೀಪ್ ಸಿಂಗ್ ಸೆಂಗರ್ ನಿರಪರಾಧಿ. ನಾವು ಅವರ ವರ್ತನೆ ನೋಡಿದ್ದೇವೆ. ಅವರು ಏನಾದರೂ ತಪ್ಪು ಮಾಡಿದ್ದರೆ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಬೇಕು. ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕು. ಸಂತ್ರಸ್ತೆ ಐದು ತಿಂಗಳ ನಂತರ ಘಟನೆಯ ಬಗ್ಗೆ ವರದಿ ಮಾಡಿದ್ದಾರೆ. ಆದ್ದರಿಂದ, ಡಿಎನ್‌ಎ ಪರೀಕ್ಷೆ ಈಗ ಸಾಧ್ಯವಿಲ್ಲ. ಪಾಲಿಗ್ರಾಫ್ ಅಥವಾ ನಾರ್ಕೊ ಪರೀಕ್ಷೆಯನ್ನು ಮಾತ್ರ ಈಗ ನಡೆಸಬಹುದು. ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ನಾವು ತೀರ್ಪಿಗೆ ಬರಬೇಕು “ಎಂದು ನಿಪೇಂದರ್ ಎಎನ್‌ಐಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಕ್ಷಿಗಳನ್ನು ಕೊಂದ ನಂತರ ಇನ್ಯಾವ ಸಾಕ್ಷಿ.
    ಅವಳು ಬದುಕಲಿ ಅಪರಾದಿಗೆ ಸಾವು ಶಿಕ್ಷೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...