Homeಮುಖಪುಟಉನ್ನಾವೊ ಘಟನೆ: ಬಿಜೆಪಿಯ ಉಚ್ಛಾಟಿತ ಶಾಸಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉನ್ನಾವೊ ಘಟನೆ: ಬಿಜೆಪಿಯ ಉಚ್ಛಾಟಿತ ಶಾಸಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

2017 ರ ಉನ್ನಾವೊದಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ ಬಿಜೆಪಿಯಿಂದ ಹೊರಹಾಕಲ್ಪಟ್ಟ ಶಾಸಕ ಕುಲದೀಪ್ ಸೆಂಗಾರ್ ವಿರುದ್ಧ ದೆಹಲಿ ನ್ಯಾಯಾಲಯವು ಶುಕ್ರವಾರ ಪೋಕ್ಸೋ ಕಾಯ್ದೆಯಡಿ ಅಪಹರಣ ಮತ್ತು ಅತ್ಯಾಚಾರದ ಆರೋಪಗಳನ್ನು ಹೊರಿಸಿದೆ.

ಮೂವರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಐದು ಜನರೊಂದಿಗೆ ಸೆಂಗಾರ್ ಮತ್ತು ಆತನ ಸಹೋದರ ಸಂತ್ರಸ್ತ ಬಾಲಕಿಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ಸಿಬಿಐ ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಉನ್ನಾವ್ ಅತ್ಯಾಚಾರದ ಸಂತ್ರಸ್ತೆ ಕಾರು ಅಪಘಾತದಿಂದ ತೀವ್ರವಾದ ರಕ್ತ ಸೋಂಕಿನಿಂದ ಜೀವನ್ಮರನದ ನಡುವೆ ಹೋರಾಡುತ್ತಿದ್ದಾಳೆ. ಸದ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು ಆಕೆಗೆ ನೀಡಲಾಗುವ ಏಳು ಪ್ರತಿಜೀವಕಗಳಲ್ಲಿ ಆರು ನಿಷ್ಪರಿಣಾಮಕಾರಿಯಾಗಿವೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಬಾಲಕಿಯ ಬ್ಲಡ್ ಕಲ್ಚರ್ ಪರೀಕ್ಷೆಯ ವರದಿಯಲ್ಲಿ ಆಕೆಯ ರಕ್ತದಲ್ಲಿ ಗಂಭೀರ ಸೋಂಕು ಇದೆ ಎಂದು ತಿಳಿದುಬಂದಿದೆ. ಆಗಸ್ಟ್ 6 ರಂದು ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ (ಕೆಜಿಎಂಯು) ದೆಹಲಿಯ ಏಮ್ಸ್ ಗೆ ಸ್ಥಳಾಂತರಗೊಂಡ ನಂತರ ಈ ವರದಿ ಬಂದಿದೆ.

ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಸಂತ್ರಸ್ತೆಯ ಕುಟುಂಬದ ಮನವಿಯ ನಂತರ ರದ್ದುಪಡಿಸಲಾಗಿದೆ. ಈ ನಡುವೆ ಉನ್ನಾವ್ ಅತ್ಯಾಚಾರ ಆರೋಪಿ ಕುಲದೀಪ್ ಸಿಂಗ್ ಸೆಂಗರ್ ಅವರ ಸಂಬಂಧಿ ನಿಪೇಂದರ್ ಸಿಂಗ್ ಅವರು ಸತ್ಯದ ಬಗ್ಗೆ ತಿಳಿಯಲು ಪಾಲಿಗ್ರಾಫ್ ಮತ್ತು ನಾರ್ಕೊ-ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಬೇಕೆಂದು ಒತ್ತಾಯಿಸಿದರು.

“ಕುಲದೀಪ್ ಸಿಂಗ್ ಸೆಂಗರ್ ನಿರಪರಾಧಿ. ನಾವು ಅವರ ವರ್ತನೆ ನೋಡಿದ್ದೇವೆ. ಅವರು ಏನಾದರೂ ತಪ್ಪು ಮಾಡಿದ್ದರೆ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಬೇಕು. ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕು. ಸಂತ್ರಸ್ತೆ ಐದು ತಿಂಗಳ ನಂತರ ಘಟನೆಯ ಬಗ್ಗೆ ವರದಿ ಮಾಡಿದ್ದಾರೆ. ಆದ್ದರಿಂದ, ಡಿಎನ್‌ಎ ಪರೀಕ್ಷೆ ಈಗ ಸಾಧ್ಯವಿಲ್ಲ. ಪಾಲಿಗ್ರಾಫ್ ಅಥವಾ ನಾರ್ಕೊ ಪರೀಕ್ಷೆಯನ್ನು ಮಾತ್ರ ಈಗ ನಡೆಸಬಹುದು. ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ನಾವು ತೀರ್ಪಿಗೆ ಬರಬೇಕು “ಎಂದು ನಿಪೇಂದರ್ ಎಎನ್‌ಐಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಕ್ಷಿಗಳನ್ನು ಕೊಂದ ನಂತರ ಇನ್ಯಾವ ಸಾಕ್ಷಿ.
    ಅವಳು ಬದುಕಲಿ ಅಪರಾದಿಗೆ ಸಾವು ಶಿಕ್ಷೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...