Homeದಲಿತ್ ಫೈಲ್ಸ್ಯುಪಿ: ಮಾಜಿ ಸಚಿವರ ಮಗನ ಆಶ್ರಮದಲ್ಲಿ ದಲಿತ ಯುವತಿಯ ಶವ ಪತ್ತೆ, ಮಾಯಾವತಿ ಆಕ್ರೋಶ

ಯುಪಿ: ಮಾಜಿ ಸಚಿವರ ಮಗನ ಆಶ್ರಮದಲ್ಲಿ ದಲಿತ ಯುವತಿಯ ಶವ ಪತ್ತೆ, ಮಾಯಾವತಿ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ದಲಿತ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮಾಜಿ ಸಚಿವರ ಮಗನ ಒಡೆತನದ ಆಶ್ರಮವೊಂದರಲ್ಲಿ ಪತ್ತೆಯಾಗಿದೆ. ಇದು ಚುನಾವಣೆ ಎದುರಿಸುತ್ತಿರುವ ಯುಪಿಯಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

2021 ರ ಡಿಸೆಂಬರ್‌ 8 ರಂದು ನಾಪತ್ತೆಯಾಗಿದ್ದ 22 ವರ್ಷದ ದಲಿತ ಯುವತಿಯ ಮೃತದೇಹ ಸಮಾಜವಾದಿ ಪಕ್ಷದ ಮಾಜಿ ನಾಯಕರಾಗಿದ್ದ ಫತೇಹ್ ಬಹದ್ದೂರ್ ಸಿಂಗ್ ಅವರ ಪುತ್ರ ರಾಜೋಲ್ ಸಿಂಗ್ ಒಡೆತನದ ಆಶ್ರಮದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರ (ಫೆ.10) ಪತ್ತೆಯಾಗಿದೆ.

ಮೃತ ಯುವತಿಯ ತಾಯಿ, ರಾಜೋಲ್ ಸಿಂಗ್ ಯುವತಿಯನ್ನು ಅಪಹರಿಸಿದ್ದಾರೆ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, ಜನವರಿ 24 ರಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ವಾಹನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದರು. ಬಳಿಕ ಪೊಲೀಸರು ಅದೇ ದಿನ ರಾಜೋಲ್ ಸಿಂಗ್ ಅವರನ್ನು ಬಂಧಿಸಿದ್ದರು.

ಇದನ್ನೂ ಓದಿ: ‘ಉತ್ತರಾಖಂಡದಲ್ಲಿ ಬಿಜೆಪಿ ಸೋಲಲಿದೆ’: ಬಿಜೆಪಿ ಸ್ಟಾರ್‌ ಪ್ರಚಾರಕ, ಮಧ್ಯಪ್ರದೇಶ ಸಿಎಂ ಚೌಹಾಣ್ ಹೇಳಿಕೆ

“ನಾವು ಆರೋಪಿ ರಾಜೋಲ್ ಸಿಂಗ್‌ನನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ವಿಚಾರಣೆ ನಂತರ ಎಸ್‌ಒಜಿ ತಂಡ ಗುರುವಾರ ಯುವತಿಯ ಮೃತದೇಹವನ್ನು ಹೊರತೆಗೆದಿದೆ. ಮೃತದೇಹವನ್ನು ಆಶ್ರಮದ ಬಳಿಯ ಜಾಗದಲ್ಲಿ ಹೂಳಲಾಗಿತ್ತು” ಎಂದು ಉನ್ನಾವೋದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ.

ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಆ ಪ್ರದೇಶದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಯುವತಿಯ ಮರಣೋತ್ತರ ಪರೀಕ್ಷಯಲ್ಲಿ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಹಾಗೂ ಆಕೆಯ ಕತ್ತು ಮುರಿದಿರುವುದು ಕಂಡುಬಂದಿದೆ.

ದಲಿತ ಯುವತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಉನ್ನಾವೊ ಜಿಲ್ಲೆಯ ಎಸ್‌ಪಿ ನಾಯಕರ ಕ್ಷೇತ್ರದಲ್ಲಿ ದಲಿತ ಯುವತಿಯ ಮೃತದೇಹ ದೊರೆತಿರುವುದು ಅತ್ಯಂತ ದುಃಖಕರ ಮತ್ತು ಗಂಭೀರ ವಿಷಯವಾಗಿದೆ. ಯುವತಿಯ ಅಪಹರಣ ಮತ್ತು ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಎಸ್‌ಪಿ ನಾಯಕರ ವಿರುದ್ಧ ಶಂಕೆ ವ್ಯಕ್ತಪಡಿಸಿದ್ದರು. ರಾಜ್ಯ ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ’ಪ್ರಕರಣಕ್ಕೂ ತಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಈ ದುರದೃಷ್ಟಕರ ಘಟನೆಯು ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಬಿಜೆಪಿ ಸರ್ಕಾರದ ಸುಳ್ಳು ಹೇಳಿಕೆಗಳನ್ನು ಬಹಿರಂಗಪಡಿಸಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ಇನ್ನು ತಮ್ಮ ಮಗಳು ನಾಪತ್ತೆಯಾದಾಗ ಪೊಲೀಸರು ತನ್ನ ದೂರುಗಳಿಗೆ ಕಿವಿಗೊಡಲಿಲ್ಲ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ನಿಮ್ಮ ಹುಡುಗಿ ಮನೆಯಿಂದ ಓಡಿ ಹೋಗಿದ್ದಾರೆ.  ಶೀಘ್ರದಲ್ಲೇ ಹಿಂತಿರುಗುತ್ತಾರೆ ಎಂದ ಪೊಲೀಸ್ ಅಧಿಕಾರಿಗಳು ನಮಗೆ ಎಸ್ಪಿಯನ್ನು ಭೇಟಿ ಮಾಡಲು ಸಹ ಬಿಡಲಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...