Homeಮುಖಪುಟಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಶನಿವಾರ ನಡೆದ ಹಿಂದೂಗಳ ಹೋಳಿ ಹಬ್ಬದ ಸಂದರ್ಭದಲ್ಲಿ ತನ್ನ ಮೇಲೆ ಬಣ್ಣ ಬಳಿಯುವುದನ್ನು ವಿರೋಧಿಸಿದ್ದಕ್ಕಾಗಿ 55 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಜೀವವನ್ನೇ ತೆತ್ತಿದ್ದಾನೆ.

ಶೀತ್ಲಾ ಮಾತಾ ಮಂದಿರ ಬಳಿಯ ಕೊಟ್ವಾಲಿ ಸದರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ ಸಂದರ್ಭದಲ್ಲಿ 55 ವರ್ಷದ ಮೊಹಮ್ಮದ್ ಷರೀಫ್ ಅವರನ್ನು ಹೋಳಿ ಹಬ್ಬದ ಸಂಭ್ರಮಾಚರಣೆ ಮಾಡುವವರ ಗುಂಪೊಂದು ತಡೆದು ಅವರ ಮೇಲೆ ಬಣ್ಣ ಬಳಿಯಲು ಎಳೆದೊಯ್ದಾಗ ಈ ಘಟನೆ ಸಂಭವಿಸಿದೆ.

ಬಲಿಪಶುವಿನ ಮೇಲೆ ಬಣ್ಣ ಬಳಿಯುವ ಈ ಗುಂಪಿನ ಪ್ರಯತ್ನಗಳನ್ನು ಬಲಿಪಶು ವಿರೋಧಿಸಿದನು ಮತ್ತು ಇದು ತೀವ್ರ ವಾಗ್ವಾದಗಳಿಗೆ ಕಾರಣವಾಯಿತು. ತಕ್ಷಣವೇ ಸಂಭ್ರಮಾಚರಣೆ ಮಾಡುವವರು ಕ್ರೋಧಗೊಂಡರು ಮತ್ತು ಅವರಿಂದ ತಪ್ಪಿಸಿಕೊಳ್ಳಲು ಮತ್ತು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ ವೃದ್ಧನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದರು.

ಬಲಿಪಶು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಷರೀಫ್ ಅವರ ಪುತ್ರಿ ಬುಶ್ರಾ ಹೇಳುವಂತೆ, ಸಂಭ್ರಮಿಸುವವರು ತಮ್ಮ ತಂದೆಯನ್ನು ಆಟೋರಿಕ್ಷಾದಿಂದ ಹೊರಗೆಳೆದು ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಅವರ ಕೈಚೀಲದಿಂದ 5,000 ರೂ. ಮೌಲ್ಯದ ಹಣವನ್ನು ದೋಚಿದ್ದಾರೆ ಎಂದು ಆರೋಪಿಸಿದ್ದಾರೆ.

“ಕೆಲವರು ಅವರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅವರ ಮೇಲೆ ಬಣ್ಣ ಎರಚಿದರು. ನಮ್ಮ ತಂದೆ ಅವರನ್ನು ತಡೆದಾಗ, ಅವರು ನಮ್ಮ ತಂದೆಯನ್ನು ತಳ್ಳಿ ಹೊಡೆದರು. ಅವರು ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರ ಕೈಚೀಲವನ್ನು ಕಸಿದುಕೊಳ್ಳಲಾಯಿತು ಮತ್ತು ಅದರ ಒಳಗಡೆ ಇದ್ದ ಹಣವನ್ನು ದೋಚಲಾಯಿತು” ಎಂದು ಸಂತ್ರಸ್ತನ ಪುತ್ರಿಯು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಷರೀಫ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಉನ್ನಾವೊಗೆ ಹಿಂತಿರುಗಿದ್ದರು.

ಷರೀಫ್ ಅವರ ಸೋದರಳಿಯ ಮೊಹಮ್ಮದ್ ಶಮೀಮ್, ತಮ್ಮ ಮಾವನನ್ನು ಮಧ್ಯಾಹ್ನದ ಸುಮಾರಿಗೆ ಡೈರಿಗೆ ಹೋಗುತ್ತಿದ್ದಾಗ ಅವರ ಆಟೋರಿಕ್ಷಾವನ್ನು ಸಂಭ್ರಮಿಸುವವರು ತಡೆದು ಈ ಕೃತ್ಯ ಎಸಗಿದರು ಎಂದು ಆರೋಪಿಸಿದ್ದಾನೆ.

“ಅವರಿಗೆ ಕಿರುಕುಳ ಕೊಡಲಾಯಿತು ಮತ್ತು ಸಂಭ್ರಮಿಸುವವರು ನನ್ನ ಮಾವನಿಗೆ ಬಣ್ಣ ಬಳಿಯಲು ನಿರ್ಧರಿಸಿದ್ದರು. ನಾನು ಸ್ಥಳಕ್ಕೆ ತಲುಪಿದಾಗ ನನ್ನ ಮಾವ ಹಾಗೆ ಮಾಡದಂತೆ ವಿನಂತಿಸುತ್ತಿದ್ದರು. ಆಗ ಸಮಸ್ಯೆ ಇತ್ಯರ್ಥವಾಯಿತು. ಆದರೆ ನಂತರ ಅವರಲ್ಲಿ ಕೆಲವರು ಅವರನ್ನು ಮತ್ತೆ ಹಿಡಿದುಕೊಂಡರು. ಅವರು ಕುಸಿದು ಬೀಳುವ ಮೊದಲು ಅವರನ್ನು ಪದೇ ಪದೇ ಕಪಾಳಮೋಕ್ಷ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ನನಗೆ ಹೇಳಿದ್ದಾರೆ” ಎಂದು ಶಮೀಮ್ ತಿಳಿಸಿದ್ದಾರೆ.

ಷರೀಫ್ ಅವರ ಸಾವು ಅವರ ಹುಟ್ಟೂರು ಖಾಸಿಮ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಅಪರಾಧಿಗಳನ್ನು ಬಂಧಿಸುವವರೆಗೆ ಶವಪರೀಕ್ಷೆಗೆ ಅವಕಾಶ ನೀಡಲು ಷರೀಫ್ ಅವರ ಕುಟುಂಬ ನಿರಾಕರಿಸಿತು.

ಕಾನ್ಪುರ-ಲಕ್ನೋ ಮುಖ್ಯರಸ್ತೆ ಐಬಿಪಿ ಕ್ರಾಸಿಂಗ್‌ನಲ್ಲಿ ಷರೀಫ್ ಅವರ ಮೃತದೇಹವನ್ನು ಇರಿಸುವ ಮೂಲಕ ಶೋಕತಪ್ತರು ರಸ್ತೆ ತಡೆ ನಡೆಸಿದರು. ಆಡಳಿತ ಅಧಿಕಾರಿಗಳು ಷರೀಫ್ ಅವರ ಕುಟುಂಬವನ್ನು ವಿಳಂಬವಿಲ್ಲದೆ ಅವರ ಅಂತ್ಯಕ್ರಿಯೆಯನ್ನು ನಡೆಸುವಂತೆ ಮನವೊಲಿಸಿದರು, ಆದರೆ ಕುಟುಂಬವು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು.

ಉನ್ನಾವ್ ಉತ್ತರದ ಹೆಚ್ಚುವರಿ ಎಸ್‌ಪಿ ಅಖಿಲೇಶ್ ಸಿಂಗ್, “ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಇಲ್ಲ. ದೂರು ದಾಖಲಾದ ನಂತರ ನಾವು ಎಫ್‌ಐಆರ್ ದಾಖಲಿಸುತ್ತೇವೆ” ಎಂದು ಹೇಳಿದ್ದಾರೆ.

ಉನ್ನಾವ್ ಕೊಟ್ವಾಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನ್ಪುರದಿಂದ ಉನ್ನಾವ್‌ಗೆ ಪ್ರಯಾಣ ಬೆಳೆಸಿದ ಶಹರ್ ಖಾಜಿ ಸಾಕಿಬ್ ಅದೀಬ್ ಮಿಸ್ಬಾಹಿ ​​ಅಧಿಕಾರಿಗಳನ್ನು ಭೇಟಿಯಾಗಿ ಉದ್ರಿಕ್ತ ಜನಸಮೂಹವನ್ನು ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

“ಉನ್ನಾವ್‌ದ ಇತಿಹಾಸದಲ್ಲಿ ಇಂತಹ ಘಟನೆ ಹಿಂದೆಂದೂ ಸಂಭವಿಸಿರಲಿಲ್ಲ. ಇಲ್ಲಿ ಹೋಳಿಯನ್ನು ಯಾವಾಗಲೂ ಶಾಂತಿಯುತವಾಗಿ ಆಚರಿಸಲಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಆಡಳಿತವು ಭರವಸೆ ನೀಡಿದೆ ಮತ್ತು ಅವರು ಅದನ್ನು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...