Homeಮುಖಪುಟಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು...

ಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು ಭಾರತದಲ್ಲಿ ಮಾತ್ರ ಸಾಧ್ಯ..

- Advertisement -
- Advertisement -

ಉನ್ನಾವೋದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಯತ್ನದ ಆರೋಪಿ, ಸದಕ್ಕೆ ಜೈಲುವಾಸಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಿಂದಿ ದಿನಪತ್ರಿಕೆಯ ಸ್ಥಳೀಯ ಆವೃತ್ತಿಯ ಪೂರ್ಣ ಪುಟದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಸೆಂಗಾರ್, ಉನ್ನಾವೊದಲ್ಲಿನ ಉಗೂ ಪ್ರದೇಶದ ಪಂಚಾಯತ್ ಅಧ್ಯಕ್ಷರು ಧನಸಹಾಯ ನೀಡಿದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಆಗಸ್ಟ್ 15 ರಂದು ರಕ್ಷಾ ಬಂಧನ್ ಹಬ್ಬದ ಸಲುವಾಗಿ ಅಲ್ಲಿನ ನಿವಾಸಿಗಳನ್ನು ಹಾರೈಸುವ ಉದ್ದೇಶದಿಂದ ಕೂಡಿದ ಜಾಹೀರಾತುಗಳಲ್ಲಿ ಸೆಂಗಾರ್ ಅವರ ಪತ್ನಿಯ ಫೋಟೋಗಳೂ ಸಹ ಇವೆ.

ಈ ಶಾಸಕನ ಮೇಲೆ ಹಲವಾರು ಆರೋಪಗಳಿವೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆಯತ್ನ, ಸಾಕ್ಷ್ಯ ನಾಶ, ಆಕೆಯ ತಂದೆಯ ಕೊಲೆ, ಅಧಿಕಾರ ದುರುಪಯೋಗ ಸೇರಿ ಹಲವು ಮೊಕದ್ದಮೆಗಳು ಸಹ ದಾಖಲಾಗಿ ದೇಶದ ಗಮನಸೆಳೆದಿವೆ. ಇಂತಹ ಕುಖ್ಯಾತ ಶಾಸಕನ ಭಾವಚಿತ್ರವನ್ನು ಜಾಹಿರಾತುಗಳಲ್ಲಿ ಹಾಕುವ ಮೂಲಕ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪತ್ರಕರ್ತರೊಬ್ಬರು ಜಾಹೀರಾತು ನೀಡಿದವರಿಗೆ ಪ್ರಶ್ನಿಸಿದ್ದಾರೆ.

ಜಾಹೀರಾತನ್ನು ಕೊಟ್ಟಿದ್ದ ಉಗು ಪಂಚಾಯತ್ ಅಧ್ಯಕ್ಷ ಮತ್ತು ವಕೀಲ ಅನುಜ್ ಕುಮಾರ್ ದೀಕ್ಷಿತ್, ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವನ್ನು ಹೊಂದಿಲ್ಲ . “ಕುಲದೀಪ್ ಸಿಂಗ್ ನಮ್ಮ ಪ್ರದೇಶದ ಶಾಸಕರಾಗಿದ್ದಾರೆ ಮತ್ತು ಆದ್ದರಿಂದ ಅವರ ಚಿತ್ರವಿದೆ. ನಾನು ಯಾವುದೇ ಪಕ್ಷವನ್ನು ಜಾಹೀರಾತಿನಲ್ಲಿ ಉಲ್ಲೇಖಿಸಿಲ್ಲ. ಅವರು ಶಾಸಕರಾಗುವವರೆಗೂ ನಾವು ಅವರ ಚಿತ್ರಗಳನ್ನು ಹಾಕುತ್ತೇವೆ” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕಳೆದ ವಾರ ದೆಹಲಿ ನ್ಯಾಯಾಲಯವು ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸಿತ್ತು. ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲೂ ಆತನನ್ನು ಆರೋಪಿಯನ್ನಾಗಿಸಿದ್ದು ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿ ಕೋರ್ಟ್ ಗೆ ವರ್ಗಾಹಿಸಿದೆ ಮತ್ತು ಪ್ರತಿದಿನವೂ ವಿಚಾರಣೆ ನಡೆಸುತ್ತಿದೆ.

ಉನ್ನಾವೋ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಕಳೆದ ತಿಂಗಳು ಮಾರಣಾಂತಿಕ ಅಪಘಾತ ನಡೆದ ನಂತರ ಅದು ಸಹ ಈ ಶಾಸಕನ ಪಿತೂರಿ ಎಂದು ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರನ್ನು ದೆಹಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಹಳಷ್ಟು ದೇಶಗಳಲ್ಲಿ ಜನರಿಗೆ ಕೇವಲ ಸ್ವಾತಂತ್ರ್ಯವಲ್ಲ ಸ್ವೇಚ್ಛಾಚಾರಕ್ಕೂ ಅವಕಾಶವಿದೆ. ಆದರೆ ಅಲ್ಲಿ ಸಾರ್ವಜನಿಕ ಜೀವನದಲ್ಲಿರುವ ಆಳುವವರು, ಜನಪ್ರತಿನಿಧಿಗಳು ಮಾತ್ರ ಬಹಳ ಚಾರತ್ರ್ಯವಂತರಾಗಿ ನಡೆದುಕೊಳ್ಳಬೇಕಿರುತ್ತದೆ. ಯಾವುದೇ ಒಂದು ಸಣ್ಣ ಆರೋಪ ಕೇಳಿಬಂದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಅದರೆ ನಮ್ಮ ದೇಶದಲ್ಲಿ ಇಂತಹ ನಡೆತೆಗೆಟ್ಟ, ಮಾನಗೆಟ್ಟ ಶಾಸಕರು ಸಿಗುತ್ತಾರೆ ಮಾತ್ರವಲ್ಲ ಅವರ ಭಾವಚಿತ್ರ ನಮ್ಮ ಮನೆಗೆ ತಲುಪುವ ದಿನಪತ್ರಿಕೆ ಮುಖಪುಟದಲ್ಲಿ ದೊಡ್ಡದಾಗಿ ಮಿಂಚುತ್ತಿರುತ್ತದೆ!!! ಈಗ ಹೇಳಿ ಇದು ಭಾರತದಲ್ಲಿ ಮಾತ್ರ ಸಾಧ್ಯ ಅಲ್ಲವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...