Homeಮುಖಪುಟಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು...

ಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು ಭಾರತದಲ್ಲಿ ಮಾತ್ರ ಸಾಧ್ಯ..

- Advertisement -
- Advertisement -

ಉನ್ನಾವೋದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಯತ್ನದ ಆರೋಪಿ, ಸದಕ್ಕೆ ಜೈಲುವಾಸಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಿಂದಿ ದಿನಪತ್ರಿಕೆಯ ಸ್ಥಳೀಯ ಆವೃತ್ತಿಯ ಪೂರ್ಣ ಪುಟದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಸೆಂಗಾರ್, ಉನ್ನಾವೊದಲ್ಲಿನ ಉಗೂ ಪ್ರದೇಶದ ಪಂಚಾಯತ್ ಅಧ್ಯಕ್ಷರು ಧನಸಹಾಯ ನೀಡಿದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಆಗಸ್ಟ್ 15 ರಂದು ರಕ್ಷಾ ಬಂಧನ್ ಹಬ್ಬದ ಸಲುವಾಗಿ ಅಲ್ಲಿನ ನಿವಾಸಿಗಳನ್ನು ಹಾರೈಸುವ ಉದ್ದೇಶದಿಂದ ಕೂಡಿದ ಜಾಹೀರಾತುಗಳಲ್ಲಿ ಸೆಂಗಾರ್ ಅವರ ಪತ್ನಿಯ ಫೋಟೋಗಳೂ ಸಹ ಇವೆ.

ಈ ಶಾಸಕನ ಮೇಲೆ ಹಲವಾರು ಆರೋಪಗಳಿವೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆಯತ್ನ, ಸಾಕ್ಷ್ಯ ನಾಶ, ಆಕೆಯ ತಂದೆಯ ಕೊಲೆ, ಅಧಿಕಾರ ದುರುಪಯೋಗ ಸೇರಿ ಹಲವು ಮೊಕದ್ದಮೆಗಳು ಸಹ ದಾಖಲಾಗಿ ದೇಶದ ಗಮನಸೆಳೆದಿವೆ. ಇಂತಹ ಕುಖ್ಯಾತ ಶಾಸಕನ ಭಾವಚಿತ್ರವನ್ನು ಜಾಹಿರಾತುಗಳಲ್ಲಿ ಹಾಕುವ ಮೂಲಕ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪತ್ರಕರ್ತರೊಬ್ಬರು ಜಾಹೀರಾತು ನೀಡಿದವರಿಗೆ ಪ್ರಶ್ನಿಸಿದ್ದಾರೆ.

ಜಾಹೀರಾತನ್ನು ಕೊಟ್ಟಿದ್ದ ಉಗು ಪಂಚಾಯತ್ ಅಧ್ಯಕ್ಷ ಮತ್ತು ವಕೀಲ ಅನುಜ್ ಕುಮಾರ್ ದೀಕ್ಷಿತ್, ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವನ್ನು ಹೊಂದಿಲ್ಲ . “ಕುಲದೀಪ್ ಸಿಂಗ್ ನಮ್ಮ ಪ್ರದೇಶದ ಶಾಸಕರಾಗಿದ್ದಾರೆ ಮತ್ತು ಆದ್ದರಿಂದ ಅವರ ಚಿತ್ರವಿದೆ. ನಾನು ಯಾವುದೇ ಪಕ್ಷವನ್ನು ಜಾಹೀರಾತಿನಲ್ಲಿ ಉಲ್ಲೇಖಿಸಿಲ್ಲ. ಅವರು ಶಾಸಕರಾಗುವವರೆಗೂ ನಾವು ಅವರ ಚಿತ್ರಗಳನ್ನು ಹಾಕುತ್ತೇವೆ” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕಳೆದ ವಾರ ದೆಹಲಿ ನ್ಯಾಯಾಲಯವು ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸಿತ್ತು. ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲೂ ಆತನನ್ನು ಆರೋಪಿಯನ್ನಾಗಿಸಿದ್ದು ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿ ಕೋರ್ಟ್ ಗೆ ವರ್ಗಾಹಿಸಿದೆ ಮತ್ತು ಪ್ರತಿದಿನವೂ ವಿಚಾರಣೆ ನಡೆಸುತ್ತಿದೆ.

ಉನ್ನಾವೋ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಕಳೆದ ತಿಂಗಳು ಮಾರಣಾಂತಿಕ ಅಪಘಾತ ನಡೆದ ನಂತರ ಅದು ಸಹ ಈ ಶಾಸಕನ ಪಿತೂರಿ ಎಂದು ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರನ್ನು ದೆಹಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಹಳಷ್ಟು ದೇಶಗಳಲ್ಲಿ ಜನರಿಗೆ ಕೇವಲ ಸ್ವಾತಂತ್ರ್ಯವಲ್ಲ ಸ್ವೇಚ್ಛಾಚಾರಕ್ಕೂ ಅವಕಾಶವಿದೆ. ಆದರೆ ಅಲ್ಲಿ ಸಾರ್ವಜನಿಕ ಜೀವನದಲ್ಲಿರುವ ಆಳುವವರು, ಜನಪ್ರತಿನಿಧಿಗಳು ಮಾತ್ರ ಬಹಳ ಚಾರತ್ರ್ಯವಂತರಾಗಿ ನಡೆದುಕೊಳ್ಳಬೇಕಿರುತ್ತದೆ. ಯಾವುದೇ ಒಂದು ಸಣ್ಣ ಆರೋಪ ಕೇಳಿಬಂದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಅದರೆ ನಮ್ಮ ದೇಶದಲ್ಲಿ ಇಂತಹ ನಡೆತೆಗೆಟ್ಟ, ಮಾನಗೆಟ್ಟ ಶಾಸಕರು ಸಿಗುತ್ತಾರೆ ಮಾತ್ರವಲ್ಲ ಅವರ ಭಾವಚಿತ್ರ ನಮ್ಮ ಮನೆಗೆ ತಲುಪುವ ದಿನಪತ್ರಿಕೆ ಮುಖಪುಟದಲ್ಲಿ ದೊಡ್ಡದಾಗಿ ಮಿಂಚುತ್ತಿರುತ್ತದೆ!!! ಈಗ ಹೇಳಿ ಇದು ಭಾರತದಲ್ಲಿ ಮಾತ್ರ ಸಾಧ್ಯ ಅಲ್ಲವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...