Homeಮುಖಪುಟಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು...

ಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು ಭಾರತದಲ್ಲಿ ಮಾತ್ರ ಸಾಧ್ಯ..

- Advertisement -
- Advertisement -

ಉನ್ನಾವೋದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಯತ್ನದ ಆರೋಪಿ, ಸದಕ್ಕೆ ಜೈಲುವಾಸಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಿಂದಿ ದಿನಪತ್ರಿಕೆಯ ಸ್ಥಳೀಯ ಆವೃತ್ತಿಯ ಪೂರ್ಣ ಪುಟದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಸೆಂಗಾರ್, ಉನ್ನಾವೊದಲ್ಲಿನ ಉಗೂ ಪ್ರದೇಶದ ಪಂಚಾಯತ್ ಅಧ್ಯಕ್ಷರು ಧನಸಹಾಯ ನೀಡಿದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಆಗಸ್ಟ್ 15 ರಂದು ರಕ್ಷಾ ಬಂಧನ್ ಹಬ್ಬದ ಸಲುವಾಗಿ ಅಲ್ಲಿನ ನಿವಾಸಿಗಳನ್ನು ಹಾರೈಸುವ ಉದ್ದೇಶದಿಂದ ಕೂಡಿದ ಜಾಹೀರಾತುಗಳಲ್ಲಿ ಸೆಂಗಾರ್ ಅವರ ಪತ್ನಿಯ ಫೋಟೋಗಳೂ ಸಹ ಇವೆ.

ಈ ಶಾಸಕನ ಮೇಲೆ ಹಲವಾರು ಆರೋಪಗಳಿವೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆಯತ್ನ, ಸಾಕ್ಷ್ಯ ನಾಶ, ಆಕೆಯ ತಂದೆಯ ಕೊಲೆ, ಅಧಿಕಾರ ದುರುಪಯೋಗ ಸೇರಿ ಹಲವು ಮೊಕದ್ದಮೆಗಳು ಸಹ ದಾಖಲಾಗಿ ದೇಶದ ಗಮನಸೆಳೆದಿವೆ. ಇಂತಹ ಕುಖ್ಯಾತ ಶಾಸಕನ ಭಾವಚಿತ್ರವನ್ನು ಜಾಹಿರಾತುಗಳಲ್ಲಿ ಹಾಕುವ ಮೂಲಕ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪತ್ರಕರ್ತರೊಬ್ಬರು ಜಾಹೀರಾತು ನೀಡಿದವರಿಗೆ ಪ್ರಶ್ನಿಸಿದ್ದಾರೆ.

ಜಾಹೀರಾತನ್ನು ಕೊಟ್ಟಿದ್ದ ಉಗು ಪಂಚಾಯತ್ ಅಧ್ಯಕ್ಷ ಮತ್ತು ವಕೀಲ ಅನುಜ್ ಕುಮಾರ್ ದೀಕ್ಷಿತ್, ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವನ್ನು ಹೊಂದಿಲ್ಲ . “ಕುಲದೀಪ್ ಸಿಂಗ್ ನಮ್ಮ ಪ್ರದೇಶದ ಶಾಸಕರಾಗಿದ್ದಾರೆ ಮತ್ತು ಆದ್ದರಿಂದ ಅವರ ಚಿತ್ರವಿದೆ. ನಾನು ಯಾವುದೇ ಪಕ್ಷವನ್ನು ಜಾಹೀರಾತಿನಲ್ಲಿ ಉಲ್ಲೇಖಿಸಿಲ್ಲ. ಅವರು ಶಾಸಕರಾಗುವವರೆಗೂ ನಾವು ಅವರ ಚಿತ್ರಗಳನ್ನು ಹಾಕುತ್ತೇವೆ” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕಳೆದ ವಾರ ದೆಹಲಿ ನ್ಯಾಯಾಲಯವು ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸಿತ್ತು. ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲೂ ಆತನನ್ನು ಆರೋಪಿಯನ್ನಾಗಿಸಿದ್ದು ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿ ಕೋರ್ಟ್ ಗೆ ವರ್ಗಾಹಿಸಿದೆ ಮತ್ತು ಪ್ರತಿದಿನವೂ ವಿಚಾರಣೆ ನಡೆಸುತ್ತಿದೆ.

ಉನ್ನಾವೋ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಕಳೆದ ತಿಂಗಳು ಮಾರಣಾಂತಿಕ ಅಪಘಾತ ನಡೆದ ನಂತರ ಅದು ಸಹ ಈ ಶಾಸಕನ ಪಿತೂರಿ ಎಂದು ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರನ್ನು ದೆಹಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಹಳಷ್ಟು ದೇಶಗಳಲ್ಲಿ ಜನರಿಗೆ ಕೇವಲ ಸ್ವಾತಂತ್ರ್ಯವಲ್ಲ ಸ್ವೇಚ್ಛಾಚಾರಕ್ಕೂ ಅವಕಾಶವಿದೆ. ಆದರೆ ಅಲ್ಲಿ ಸಾರ್ವಜನಿಕ ಜೀವನದಲ್ಲಿರುವ ಆಳುವವರು, ಜನಪ್ರತಿನಿಧಿಗಳು ಮಾತ್ರ ಬಹಳ ಚಾರತ್ರ್ಯವಂತರಾಗಿ ನಡೆದುಕೊಳ್ಳಬೇಕಿರುತ್ತದೆ. ಯಾವುದೇ ಒಂದು ಸಣ್ಣ ಆರೋಪ ಕೇಳಿಬಂದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಅದರೆ ನಮ್ಮ ದೇಶದಲ್ಲಿ ಇಂತಹ ನಡೆತೆಗೆಟ್ಟ, ಮಾನಗೆಟ್ಟ ಶಾಸಕರು ಸಿಗುತ್ತಾರೆ ಮಾತ್ರವಲ್ಲ ಅವರ ಭಾವಚಿತ್ರ ನಮ್ಮ ಮನೆಗೆ ತಲುಪುವ ದಿನಪತ್ರಿಕೆ ಮುಖಪುಟದಲ್ಲಿ ದೊಡ್ಡದಾಗಿ ಮಿಂಚುತ್ತಿರುತ್ತದೆ!!! ಈಗ ಹೇಳಿ ಇದು ಭಾರತದಲ್ಲಿ ಮಾತ್ರ ಸಾಧ್ಯ ಅಲ್ಲವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...