Homeಮುಖಪುಟಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು...

ಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು ಭಾರತದಲ್ಲಿ ಮಾತ್ರ ಸಾಧ್ಯ..

- Advertisement -
- Advertisement -

ಉನ್ನಾವೋದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಯತ್ನದ ಆರೋಪಿ, ಸದಕ್ಕೆ ಜೈಲುವಾಸಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಿಂದಿ ದಿನಪತ್ರಿಕೆಯ ಸ್ಥಳೀಯ ಆವೃತ್ತಿಯ ಪೂರ್ಣ ಪುಟದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಸೆಂಗಾರ್, ಉನ್ನಾವೊದಲ್ಲಿನ ಉಗೂ ಪ್ರದೇಶದ ಪಂಚಾಯತ್ ಅಧ್ಯಕ್ಷರು ಧನಸಹಾಯ ನೀಡಿದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಆಗಸ್ಟ್ 15 ರಂದು ರಕ್ಷಾ ಬಂಧನ್ ಹಬ್ಬದ ಸಲುವಾಗಿ ಅಲ್ಲಿನ ನಿವಾಸಿಗಳನ್ನು ಹಾರೈಸುವ ಉದ್ದೇಶದಿಂದ ಕೂಡಿದ ಜಾಹೀರಾತುಗಳಲ್ಲಿ ಸೆಂಗಾರ್ ಅವರ ಪತ್ನಿಯ ಫೋಟೋಗಳೂ ಸಹ ಇವೆ.

ಈ ಶಾಸಕನ ಮೇಲೆ ಹಲವಾರು ಆರೋಪಗಳಿವೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆಯತ್ನ, ಸಾಕ್ಷ್ಯ ನಾಶ, ಆಕೆಯ ತಂದೆಯ ಕೊಲೆ, ಅಧಿಕಾರ ದುರುಪಯೋಗ ಸೇರಿ ಹಲವು ಮೊಕದ್ದಮೆಗಳು ಸಹ ದಾಖಲಾಗಿ ದೇಶದ ಗಮನಸೆಳೆದಿವೆ. ಇಂತಹ ಕುಖ್ಯಾತ ಶಾಸಕನ ಭಾವಚಿತ್ರವನ್ನು ಜಾಹಿರಾತುಗಳಲ್ಲಿ ಹಾಕುವ ಮೂಲಕ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪತ್ರಕರ್ತರೊಬ್ಬರು ಜಾಹೀರಾತು ನೀಡಿದವರಿಗೆ ಪ್ರಶ್ನಿಸಿದ್ದಾರೆ.

ಜಾಹೀರಾತನ್ನು ಕೊಟ್ಟಿದ್ದ ಉಗು ಪಂಚಾಯತ್ ಅಧ್ಯಕ್ಷ ಮತ್ತು ವಕೀಲ ಅನುಜ್ ಕುಮಾರ್ ದೀಕ್ಷಿತ್, ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವನ್ನು ಹೊಂದಿಲ್ಲ . “ಕುಲದೀಪ್ ಸಿಂಗ್ ನಮ್ಮ ಪ್ರದೇಶದ ಶಾಸಕರಾಗಿದ್ದಾರೆ ಮತ್ತು ಆದ್ದರಿಂದ ಅವರ ಚಿತ್ರವಿದೆ. ನಾನು ಯಾವುದೇ ಪಕ್ಷವನ್ನು ಜಾಹೀರಾತಿನಲ್ಲಿ ಉಲ್ಲೇಖಿಸಿಲ್ಲ. ಅವರು ಶಾಸಕರಾಗುವವರೆಗೂ ನಾವು ಅವರ ಚಿತ್ರಗಳನ್ನು ಹಾಕುತ್ತೇವೆ” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕಳೆದ ವಾರ ದೆಹಲಿ ನ್ಯಾಯಾಲಯವು ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸಿತ್ತು. ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲೂ ಆತನನ್ನು ಆರೋಪಿಯನ್ನಾಗಿಸಿದ್ದು ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿ ಕೋರ್ಟ್ ಗೆ ವರ್ಗಾಹಿಸಿದೆ ಮತ್ತು ಪ್ರತಿದಿನವೂ ವಿಚಾರಣೆ ನಡೆಸುತ್ತಿದೆ.

ಉನ್ನಾವೋ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಕಳೆದ ತಿಂಗಳು ಮಾರಣಾಂತಿಕ ಅಪಘಾತ ನಡೆದ ನಂತರ ಅದು ಸಹ ಈ ಶಾಸಕನ ಪಿತೂರಿ ಎಂದು ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರನ್ನು ದೆಹಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಹಳಷ್ಟು ದೇಶಗಳಲ್ಲಿ ಜನರಿಗೆ ಕೇವಲ ಸ್ವಾತಂತ್ರ್ಯವಲ್ಲ ಸ್ವೇಚ್ಛಾಚಾರಕ್ಕೂ ಅವಕಾಶವಿದೆ. ಆದರೆ ಅಲ್ಲಿ ಸಾರ್ವಜನಿಕ ಜೀವನದಲ್ಲಿರುವ ಆಳುವವರು, ಜನಪ್ರತಿನಿಧಿಗಳು ಮಾತ್ರ ಬಹಳ ಚಾರತ್ರ್ಯವಂತರಾಗಿ ನಡೆದುಕೊಳ್ಳಬೇಕಿರುತ್ತದೆ. ಯಾವುದೇ ಒಂದು ಸಣ್ಣ ಆರೋಪ ಕೇಳಿಬಂದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಅದರೆ ನಮ್ಮ ದೇಶದಲ್ಲಿ ಇಂತಹ ನಡೆತೆಗೆಟ್ಟ, ಮಾನಗೆಟ್ಟ ಶಾಸಕರು ಸಿಗುತ್ತಾರೆ ಮಾತ್ರವಲ್ಲ ಅವರ ಭಾವಚಿತ್ರ ನಮ್ಮ ಮನೆಗೆ ತಲುಪುವ ದಿನಪತ್ರಿಕೆ ಮುಖಪುಟದಲ್ಲಿ ದೊಡ್ಡದಾಗಿ ಮಿಂಚುತ್ತಿರುತ್ತದೆ!!! ಈಗ ಹೇಳಿ ಇದು ಭಾರತದಲ್ಲಿ ಮಾತ್ರ ಸಾಧ್ಯ ಅಲ್ಲವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...