Homeಮುಖಪುಟಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು...

ಉನ್ನಾವೋ ಅತ್ಯಾಚಾರ ಆರೋಪಿ ಶಾಸಕ ಪಿಎಂ ಮತ್ತು ಸಿಎಂ ಅವರೊಂದಿಗೆ ಪೂರ್ಣ ಪುಟ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು ಭಾರತದಲ್ಲಿ ಮಾತ್ರ ಸಾಧ್ಯ..

- Advertisement -
- Advertisement -

ಉನ್ನಾವೋದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಯತ್ನದ ಆರೋಪಿ, ಸದಕ್ಕೆ ಜೈಲುವಾಸಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಿಂದಿ ದಿನಪತ್ರಿಕೆಯ ಸ್ಥಳೀಯ ಆವೃತ್ತಿಯ ಪೂರ್ಣ ಪುಟದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಸೆಂಗಾರ್, ಉನ್ನಾವೊದಲ್ಲಿನ ಉಗೂ ಪ್ರದೇಶದ ಪಂಚಾಯತ್ ಅಧ್ಯಕ್ಷರು ಧನಸಹಾಯ ನೀಡಿದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಆಗಸ್ಟ್ 15 ರಂದು ರಕ್ಷಾ ಬಂಧನ್ ಹಬ್ಬದ ಸಲುವಾಗಿ ಅಲ್ಲಿನ ನಿವಾಸಿಗಳನ್ನು ಹಾರೈಸುವ ಉದ್ದೇಶದಿಂದ ಕೂಡಿದ ಜಾಹೀರಾತುಗಳಲ್ಲಿ ಸೆಂಗಾರ್ ಅವರ ಪತ್ನಿಯ ಫೋಟೋಗಳೂ ಸಹ ಇವೆ.

ಈ ಶಾಸಕನ ಮೇಲೆ ಹಲವಾರು ಆರೋಪಗಳಿವೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆಯತ್ನ, ಸಾಕ್ಷ್ಯ ನಾಶ, ಆಕೆಯ ತಂದೆಯ ಕೊಲೆ, ಅಧಿಕಾರ ದುರುಪಯೋಗ ಸೇರಿ ಹಲವು ಮೊಕದ್ದಮೆಗಳು ಸಹ ದಾಖಲಾಗಿ ದೇಶದ ಗಮನಸೆಳೆದಿವೆ. ಇಂತಹ ಕುಖ್ಯಾತ ಶಾಸಕನ ಭಾವಚಿತ್ರವನ್ನು ಜಾಹಿರಾತುಗಳಲ್ಲಿ ಹಾಕುವ ಮೂಲಕ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪತ್ರಕರ್ತರೊಬ್ಬರು ಜಾಹೀರಾತು ನೀಡಿದವರಿಗೆ ಪ್ರಶ್ನಿಸಿದ್ದಾರೆ.

ಜಾಹೀರಾತನ್ನು ಕೊಟ್ಟಿದ್ದ ಉಗು ಪಂಚಾಯತ್ ಅಧ್ಯಕ್ಷ ಮತ್ತು ವಕೀಲ ಅನುಜ್ ಕುಮಾರ್ ದೀಕ್ಷಿತ್, ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವನ್ನು ಹೊಂದಿಲ್ಲ . “ಕುಲದೀಪ್ ಸಿಂಗ್ ನಮ್ಮ ಪ್ರದೇಶದ ಶಾಸಕರಾಗಿದ್ದಾರೆ ಮತ್ತು ಆದ್ದರಿಂದ ಅವರ ಚಿತ್ರವಿದೆ. ನಾನು ಯಾವುದೇ ಪಕ್ಷವನ್ನು ಜಾಹೀರಾತಿನಲ್ಲಿ ಉಲ್ಲೇಖಿಸಿಲ್ಲ. ಅವರು ಶಾಸಕರಾಗುವವರೆಗೂ ನಾವು ಅವರ ಚಿತ್ರಗಳನ್ನು ಹಾಕುತ್ತೇವೆ” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕಳೆದ ವಾರ ದೆಹಲಿ ನ್ಯಾಯಾಲಯವು ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸಿತ್ತು. ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲೂ ಆತನನ್ನು ಆರೋಪಿಯನ್ನಾಗಿಸಿದ್ದು ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿ ಕೋರ್ಟ್ ಗೆ ವರ್ಗಾಹಿಸಿದೆ ಮತ್ತು ಪ್ರತಿದಿನವೂ ವಿಚಾರಣೆ ನಡೆಸುತ್ತಿದೆ.

ಉನ್ನಾವೋ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಕಳೆದ ತಿಂಗಳು ಮಾರಣಾಂತಿಕ ಅಪಘಾತ ನಡೆದ ನಂತರ ಅದು ಸಹ ಈ ಶಾಸಕನ ಪಿತೂರಿ ಎಂದು ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರನ್ನು ದೆಹಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಹಳಷ್ಟು ದೇಶಗಳಲ್ಲಿ ಜನರಿಗೆ ಕೇವಲ ಸ್ವಾತಂತ್ರ್ಯವಲ್ಲ ಸ್ವೇಚ್ಛಾಚಾರಕ್ಕೂ ಅವಕಾಶವಿದೆ. ಆದರೆ ಅಲ್ಲಿ ಸಾರ್ವಜನಿಕ ಜೀವನದಲ್ಲಿರುವ ಆಳುವವರು, ಜನಪ್ರತಿನಿಧಿಗಳು ಮಾತ್ರ ಬಹಳ ಚಾರತ್ರ್ಯವಂತರಾಗಿ ನಡೆದುಕೊಳ್ಳಬೇಕಿರುತ್ತದೆ. ಯಾವುದೇ ಒಂದು ಸಣ್ಣ ಆರೋಪ ಕೇಳಿಬಂದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಅದರೆ ನಮ್ಮ ದೇಶದಲ್ಲಿ ಇಂತಹ ನಡೆತೆಗೆಟ್ಟ, ಮಾನಗೆಟ್ಟ ಶಾಸಕರು ಸಿಗುತ್ತಾರೆ ಮಾತ್ರವಲ್ಲ ಅವರ ಭಾವಚಿತ್ರ ನಮ್ಮ ಮನೆಗೆ ತಲುಪುವ ದಿನಪತ್ರಿಕೆ ಮುಖಪುಟದಲ್ಲಿ ದೊಡ್ಡದಾಗಿ ಮಿಂಚುತ್ತಿರುತ್ತದೆ!!! ಈಗ ಹೇಳಿ ಇದು ಭಾರತದಲ್ಲಿ ಮಾತ್ರ ಸಾಧ್ಯ ಅಲ್ಲವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...