Homeಮುಖಪುಟಉನ್ನಾವೋ ಅತ್ಯಾಚಾರ: ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ ಅಪರಾಧಿ ಎಂದು ಘೋಷಿಸಿದ ಕೋರ್ಟ್‌

ಉನ್ನಾವೋ ಅತ್ಯಾಚಾರ: ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ ಅಪರಾಧಿ ಎಂದು ಘೋಷಿಸಿದ ಕೋರ್ಟ್‌

- Advertisement -
- Advertisement -

ಉನ್ನಾವ್ ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ಟಿಸ್ ಹಜಾರಿ ನ್ಯಾಯಾಲಯ ಘೋಷಿಸಿದೆ.

2017ರಲ್ಲಿ 17ವರ್ಷದ ಬಾಲಕಿ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿಂದ ಲೈಂಗಿಕ ದೌರ್ಜನ್ಯವಾಗಿದೆಯೆಂದು ದೂರಿದ್ದಳು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) 5 (ಸಿ) ಮತ್ತು 6 ಸೆಕ್ಷನ್ ಅಡಿಯಲ್ಲಿ ಶಿಕ್ಷೆಗೊಳಪಡಿಸಲಿದೆ.

ಆತನ ಸಹವರ್ತಿ ಶಸಿ ಸಿಂಗ್‌ ಕೂಡ ಅಪರಾಧಿಯೆಂದು ಘೋಷಿಸಿರುವ ನ್ಯಾಯಾಲಯ ಡಿಸೆಂಬರ್‌ 19 ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಸಾಧ್ಯತೆಯಿದೆ.

2017ರಲ್ಲಿಯೇ ಸಂತ್ರಸ್ತೆ ದೂರು ನೀಡಿದ್ದರು ಸಹ ಪೊಲೀಸರ ಸಮರ್ಪಕವಾಗಿ ವಿಚಾರಣೆ ನಡೆಸಿರಲಿಲ್ಲ. ಬದಲಿಗೆ ಅಂದಿನಿಂದ ಆಕೆಯ ಮತ್ತು ಆಕೆಯ ಕುಟುಂಬದ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಆಕೆಯ ತಂದೆಯನ್ನು ಕಾನೂನುಬಾಹಿರವಾಗಿ ಶಶಸ್ತ್ರ ಹೊಂದಿದರೆಂಬ ಆರೋಪದಿಂದ ಬಂಧಿಸಲಾಗಿತ್ತು. ತದನಂತರ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾನಸ್ಪದವಾಗಿ ಸಾವನಪ್ಪಿದ್ದರು. ಅದಕ್ಕೂ ಮೊದಲು ಅವರಿಗೆ ಶಾಸಕನ ತಮ್ಮ ಅತುಲ್ ಸೆಂಗಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಇನ್ನು ಸಂತ್ರಸ್ತೆಯು ಉನ್ನಾವೊದಿಂದ ನ್ಯಾಯಾಲಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ರಾಯ್ ಬರೇಲಿಯಲ್ಲಿ ಅಪಘಾತಕ್ಕೀಡಾಗಿದ್ದಳು. ಆಗ ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನಪ್ಪಿದ್ದಾರೆ. ಆಕೆಯು ಸಹ ಸದ್ಯ ಆಸ್ಪತ್ರೆಯಲ್ಲಿದ್ದಾಳೆ.

ಇಲ್ಲಿ ಪೊಲೀಸರ ಪಕ್ಷಪಾತಿತನ, ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕನ ಹಣಬಲದಿಂದ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರ ಮನೆ ಮುಂದೆ ಪ್ರತಿಭಟಿಸಿದ್ದಳು. ಸಾರ್ವಜನಿಕರ ಆಕೆಗೆ ಬೆಂಬಲ ನೀಡಿದ್ದರು. ಆನಂತರವಷ್ಟೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಆತನ ಬಂಧನವಾದ ನಂತರವಷ್ಟೇ ಸಾಕಷ್ಟು ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಆತನ ಶಾಸಕ ಸ್ಥಾನದಿಂದ ಉಚ್ಚಾಟಿಸಿತ್ತು. ಈ ವರ್ಷ ಸುಪ್ರೀಂ ಕೋರ್ಟ್‌ 45 ದಿನದಲ್ಲಿ ವಿಚಾರಣೆ ನಡೆಸಬೇಕು ಮತ್ತು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ನೀಡಿತ್ತು.

ಅದರಂತೆ ತನಿಖೆ ಪೂರ್ಣಗೊಂಡಿದೆ. ಸಿಬಿಐ ನ್ಯಾಯಾಲಯದ ತನಿಖೆಯು ಅಂತಿಮ ಹಂತದಲ್ಲಿದ್ದು ಸಂತ್ರಸ್ತೆಗೆ ಕೊನೆಗೂ ನ್ಯಾಯ ಸಿಗುವ ಭರವಸೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...