Homeಮುಖಪುಟಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕನಿಗೆ ಮಧ್ಯಂತರ ಜಾಮೀನು

ಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕನಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಹೊಸದಿಲ್ಲಿ: ಉತ್ತರಪ್ರದೇಶದ ಉನ್ನವೋದಲ್ಲಿ 2017ರಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ನಿಗೆ ವೈದ್ಯಕೀಯ ನೆಲೆಯಲ್ಲಿ 2 ವಾರಗಳ ಕಾಲ ದಿಲ್ಲಿ ಹೈಕೋರ್ಟ್  ಇಂದು (ಗುರುವಾರ) ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ಅವರ ನೇತೃತ್ವದ ಪೀಠವು ಈ ಮಧ್ಯಂತರ ಜಾಮೀನನ್ನು ಮಂಜೂರುಗೊಳಿಸಿ, ಸೆಂಗಾರ್ ಅವರು ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲಾಗಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದ ಇತಿಹಾಸ ಮತ್ತು ಅರ್ಜಿದಾರರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ, ಅರ್ಜಿದಾರರನ್ನು ಎರಡು ವಾರಗಳವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಮೂರ್ತಿ ಅಮಿತ್ ಶರ್ಮಾ ಅವರು ಹೇಳಿದ್ದಾರೆ.

ನ್ಯಾಯಾಲಯವು ಏಮ್ಸ್‌ನ ವೈದ್ಯಕೀಯ ಮಂಡಳಿಯಿಂದ ವರದಿಯನ್ನು ಕೇಳಿದೆ ಮತ್ತು ಡಿಸೆಂಬರ್ 20 ರಂದು ಈ ಕುರಿತು ವಿಚಾರಣೆಯನ್ನು ನಿಗಧಿಪಡಿಸಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿ ಇನ್ನೂ ಹೈಕೋರ್ಟ್‌ನ ಇನ್ನೊಂದು ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ.

ಸೆಂಗಾರ್  ಕಣ್ಣಿನ ಪೊರೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿದ್ದರು.

ಈ ಮನವಿಯನ್ನು ಸಂತ್ರಸ್ತೆಯ ವಕೀಲರು ಸೇರಿದಂತೆ ಸಿಬಿಐ ವಿರೋಧಿಸಿತ್ತು. ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿರುವ ಮೇಲ್ಮನವಿಯು ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.

ಜೀವಾವಧಿ ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಡಿಸೆಂಬರ್ 2019 ರ ತೀರ್ಪನ್ನು ರದ್ದುಗೊಳಿಸುವಂತೆ ಅವರು ಕೋರಿದ್ದಾರೆ.

2017ರಲ್ಲಿ ಬಾಲಕಿ ಅಪ್ರಾಪ್ತಳಾಗಿದ್ದಾಗ ಉನ್ನವೋದಲ್ಲಿ ಭಾರೀ ಪ್ರಭಾವ ಹೊಂದಿದ್ದ ಬಿಜೆಪಿಯ  ಸೆಂಗರ್ ಎಂಬಾತ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದನು. ಇದು ದೇಶದೆಲ್ಲೆಡೆ ಭಾರೀ ಸುದ್ದಿಯನ್ನುಂಟು ಮಾಡಿತ್ತು.

ಮಾರ್ಚ್ 13, 2020 ರಂದು, ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸಿದ್ದರೆ, ಸೆಂಗಾರ್ ಅವರ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣವೊಂದರಲ್ಲಿ ಸೆಂಗಾರ್ ಅವರ ಆಜ್ಞೆಯ ಮೇರೆಗೆ ಬಂಧಿಸಲಾಯಿತು. ಅವರು ಏಪ್ರಿಲ್ 9, 2018 ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳನ್ನು ಆಗಸ್ಟ್ 1, 2019 ರಂದು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಲಾಗಿತು.

ಇದನ್ನೂ ಓದಿ….ಹೋಟೆಲ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...