Homeಮುಖಪುಟಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕನಿಗೆ ಮಧ್ಯಂತರ ಜಾಮೀನು

ಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕನಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಹೊಸದಿಲ್ಲಿ: ಉತ್ತರಪ್ರದೇಶದ ಉನ್ನವೋದಲ್ಲಿ 2017ರಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ನಿಗೆ ವೈದ್ಯಕೀಯ ನೆಲೆಯಲ್ಲಿ 2 ವಾರಗಳ ಕಾಲ ದಿಲ್ಲಿ ಹೈಕೋರ್ಟ್  ಇಂದು (ಗುರುವಾರ) ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ಅವರ ನೇತೃತ್ವದ ಪೀಠವು ಈ ಮಧ್ಯಂತರ ಜಾಮೀನನ್ನು ಮಂಜೂರುಗೊಳಿಸಿ, ಸೆಂಗಾರ್ ಅವರು ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲಾಗಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದ ಇತಿಹಾಸ ಮತ್ತು ಅರ್ಜಿದಾರರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ, ಅರ್ಜಿದಾರರನ್ನು ಎರಡು ವಾರಗಳವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಮೂರ್ತಿ ಅಮಿತ್ ಶರ್ಮಾ ಅವರು ಹೇಳಿದ್ದಾರೆ.

ನ್ಯಾಯಾಲಯವು ಏಮ್ಸ್‌ನ ವೈದ್ಯಕೀಯ ಮಂಡಳಿಯಿಂದ ವರದಿಯನ್ನು ಕೇಳಿದೆ ಮತ್ತು ಡಿಸೆಂಬರ್ 20 ರಂದು ಈ ಕುರಿತು ವಿಚಾರಣೆಯನ್ನು ನಿಗಧಿಪಡಿಸಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿ ಇನ್ನೂ ಹೈಕೋರ್ಟ್‌ನ ಇನ್ನೊಂದು ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ.

ಸೆಂಗಾರ್  ಕಣ್ಣಿನ ಪೊರೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿದ್ದರು.

ಈ ಮನವಿಯನ್ನು ಸಂತ್ರಸ್ತೆಯ ವಕೀಲರು ಸೇರಿದಂತೆ ಸಿಬಿಐ ವಿರೋಧಿಸಿತ್ತು. ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿರುವ ಮೇಲ್ಮನವಿಯು ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.

ಜೀವಾವಧಿ ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಡಿಸೆಂಬರ್ 2019 ರ ತೀರ್ಪನ್ನು ರದ್ದುಗೊಳಿಸುವಂತೆ ಅವರು ಕೋರಿದ್ದಾರೆ.

2017ರಲ್ಲಿ ಬಾಲಕಿ ಅಪ್ರಾಪ್ತಳಾಗಿದ್ದಾಗ ಉನ್ನವೋದಲ್ಲಿ ಭಾರೀ ಪ್ರಭಾವ ಹೊಂದಿದ್ದ ಬಿಜೆಪಿಯ  ಸೆಂಗರ್ ಎಂಬಾತ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದನು. ಇದು ದೇಶದೆಲ್ಲೆಡೆ ಭಾರೀ ಸುದ್ದಿಯನ್ನುಂಟು ಮಾಡಿತ್ತು.

ಮಾರ್ಚ್ 13, 2020 ರಂದು, ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸಿದ್ದರೆ, ಸೆಂಗಾರ್ ಅವರ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣವೊಂದರಲ್ಲಿ ಸೆಂಗಾರ್ ಅವರ ಆಜ್ಞೆಯ ಮೇರೆಗೆ ಬಂಧಿಸಲಾಯಿತು. ಅವರು ಏಪ್ರಿಲ್ 9, 2018 ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳನ್ನು ಆಗಸ್ಟ್ 1, 2019 ರಂದು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಲಾಗಿತು.

ಇದನ್ನೂ ಓದಿ….ಹೋಟೆಲ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...