Homeಮುಖಪುಟಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕನಿಗೆ ಮಧ್ಯಂತರ ಜಾಮೀನು

ಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕನಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಹೊಸದಿಲ್ಲಿ: ಉತ್ತರಪ್ರದೇಶದ ಉನ್ನವೋದಲ್ಲಿ 2017ರಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ನಿಗೆ ವೈದ್ಯಕೀಯ ನೆಲೆಯಲ್ಲಿ 2 ವಾರಗಳ ಕಾಲ ದಿಲ್ಲಿ ಹೈಕೋರ್ಟ್  ಇಂದು (ಗುರುವಾರ) ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ಅವರ ನೇತೃತ್ವದ ಪೀಠವು ಈ ಮಧ್ಯಂತರ ಜಾಮೀನನ್ನು ಮಂಜೂರುಗೊಳಿಸಿ, ಸೆಂಗಾರ್ ಅವರು ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲಾಗಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದ ಇತಿಹಾಸ ಮತ್ತು ಅರ್ಜಿದಾರರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ, ಅರ್ಜಿದಾರರನ್ನು ಎರಡು ವಾರಗಳವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಮೂರ್ತಿ ಅಮಿತ್ ಶರ್ಮಾ ಅವರು ಹೇಳಿದ್ದಾರೆ.

ನ್ಯಾಯಾಲಯವು ಏಮ್ಸ್‌ನ ವೈದ್ಯಕೀಯ ಮಂಡಳಿಯಿಂದ ವರದಿಯನ್ನು ಕೇಳಿದೆ ಮತ್ತು ಡಿಸೆಂಬರ್ 20 ರಂದು ಈ ಕುರಿತು ವಿಚಾರಣೆಯನ್ನು ನಿಗಧಿಪಡಿಸಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿ ಇನ್ನೂ ಹೈಕೋರ್ಟ್‌ನ ಇನ್ನೊಂದು ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ.

ಸೆಂಗಾರ್  ಕಣ್ಣಿನ ಪೊರೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿದ್ದರು.

ಈ ಮನವಿಯನ್ನು ಸಂತ್ರಸ್ತೆಯ ವಕೀಲರು ಸೇರಿದಂತೆ ಸಿಬಿಐ ವಿರೋಧಿಸಿತ್ತು. ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿರುವ ಮೇಲ್ಮನವಿಯು ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.

ಜೀವಾವಧಿ ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಡಿಸೆಂಬರ್ 2019 ರ ತೀರ್ಪನ್ನು ರದ್ದುಗೊಳಿಸುವಂತೆ ಅವರು ಕೋರಿದ್ದಾರೆ.

2017ರಲ್ಲಿ ಬಾಲಕಿ ಅಪ್ರಾಪ್ತಳಾಗಿದ್ದಾಗ ಉನ್ನವೋದಲ್ಲಿ ಭಾರೀ ಪ್ರಭಾವ ಹೊಂದಿದ್ದ ಬಿಜೆಪಿಯ  ಸೆಂಗರ್ ಎಂಬಾತ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದನು. ಇದು ದೇಶದೆಲ್ಲೆಡೆ ಭಾರೀ ಸುದ್ದಿಯನ್ನುಂಟು ಮಾಡಿತ್ತು.

ಮಾರ್ಚ್ 13, 2020 ರಂದು, ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸಿದ್ದರೆ, ಸೆಂಗಾರ್ ಅವರ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣವೊಂದರಲ್ಲಿ ಸೆಂಗಾರ್ ಅವರ ಆಜ್ಞೆಯ ಮೇರೆಗೆ ಬಂಧಿಸಲಾಯಿತು. ಅವರು ಏಪ್ರಿಲ್ 9, 2018 ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳನ್ನು ಆಗಸ್ಟ್ 1, 2019 ರಂದು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಲಾಗಿತು.

ಇದನ್ನೂ ಓದಿ….ಹೋಟೆಲ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...