Homeಮುಖಪುಟಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಈ ಅಪಘಾತಕ್ಕೆ ಆರೋಪಿ ಬಿಜೆಪಿ ಶಾಸಕನ ಕೈವಾಡವಿದೆ ಎಂದು ಕೇಳಿಬರುತ್ತಿದ್ದು, ಈ ಹಿಂದೆ ಸಂತ್ರಸ್ಥೆ ತಂದೇ ಜೈಲಲ್ಲೇ ಮೃತಪಟ್ಟಿದ್ದೂ ಕೂಡ ಈಗ ಮುನ್ನಲೆಗೆ ಬಂದಿದೆ.

- Advertisement -
- Advertisement -

ಉನ್ನಾಂವ್ ಅತ್ಯಾಚಾರಕ್ಕೆ ಒಳಗಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂತ್ರಸ್ತೆಯನ್ನೇ ಕೊಲ್ಲುವ ಭಯಾನಕ ಯತ್ನ ನಿನ್ನೆ ನಡೆದಿದೆ. ಈ ಅತ್ಯಾಚಾರದ ಪ್ರಮುಖ ಆರೋಪಿ ಉತ್ತರಪ್ರದೇಶದ ಬಿಜೆಪಿ ಶಾಸಕನಾಗಿದ್ದಾನೆ. ಈ ಹಿಂದೆಯೇ ಸಂತ್ರಸ್ತೆಯ ತಂದೆ ಜೈಲಿನಲ್ಲೇ ಅನುಮಾನಾಸ್ಪಾದವಾಗಿ ನಿಧನ ಹೊಂದಿದರು ಎಂಬ ವಿಷಯಗಳನ್ನು ಗಣನೆಗೆ ತೆಗೆದುಕೊಂಡಾಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸರ್ಕಾರ ಆರೋಪಿಯನ್ನು ರಕ್ಷಿಸುವ ಯತ್ನವನ್ನು ಮೊದಲಿಂದಲೂ ಮಾಡುತ್ತಲೇ ಬಂದಿದೆ ಎಂಬ ಅನುಮಾನಗಳಿಗೆ ಪುಷ್ಠಿ ಸಿಗುವಂತಿದೆ….

ಅಪಘಾತವೋ, ಕೊಲೆಯ ಸಂಚೋ?
ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ಉನ್ನಾಂವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಲ್ಲಿದ್ದರೆ, ಆಕೆಯ ಇಬ್ಬರು ಸಂಬಂಧಿಕರು ಅಪಘಾತದಲ್ಲಿ ನಿಧನರಾಗಿದ್ದಾರೆ.

ಅತ್ಯಾಚಾರ ಪ್ರಕರಣ ನಡೆದ ಸಂದರ್ಭದಿಂದ ಇಲ್ಲಿವರೆಗೂ ನಡೆದ ಘಟನೆಗಳು ಮತ್ತು ಉತ್ತರಪ್ರದೇಶ ಸರ್ಕಾರ ಆರೋಪಿ ಶಾಸಕ ಕುಲದೀಪ್ ಪರವಾಗಿ ನಿಲ್ಲುತ್ತಲೇ ಬಂದಿವೆ. ಹಾಗಾಗಿ ಸಂತ್ರಸ್ತೆಯ ತಂದೆ ಜೈಲಿನಲ್ಲಿ ಅನುಮಾನಾಸ್ಪಾದವಾಗಿ ಮರಣ ಹೊದಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ, ರವಿವಾರ ನಡೆದದ್ದು ಅಪಘಾತವಲ್ಲ, ಕೊಲೆ ಯತ್ನ ಎಂಬುದು ಸ್ಪಷ್ಟವಾಗುತ್ತದೆ.

ರಾಯ್‍ಬರೇಲಿ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನನ್ನು ನೋಡಲು ಸನತ್ರಸ್ತ ಯುವತಿ ಪ್ರಯಾಣಿಸುವಾಗ ಈ ‘ಅಪಘಾತ’ ನಡೆದಿದ್ದು ಸಂಶಯಗಳನ್ನು ಹುಟ್ಟು ಹಾಕಿದೆ. ಅಪಘಾತದಲ್ಲಿ ಸಂತ್ರಸ್ತೆಯ ಚಿಕ್ಕಮ್ಮ, ಆಕೆಯ ಸಹೋದರಿ ಮೃತರಾಗಿದ್ದು, ಸಂತ್ರಸ್ತೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅತ್ಯಾಚಾರ ಪ್ರಕರಣದ ಬಳಿಕ ನಡೆದ ಘಟನೆಗಳನ್ನು ನೋಡುತ್ತ ಹೋದರೆ ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲುವ ಯತ್ನ ಎಂಬುದು ಮನದಟ್ಟಾಗುತ್ತದೆ. ಹೀಗಾಗಿಯೇ ಉತ್ತರಪ್ರದೇಶದ ವಿರೋಧ ಪಕ್ಷಗಳು ಇಲ್ಲಿ ಫೆಡೆರಲ್ ತನಿಖೆ ಆಗಬೇಕೆಂದು ಆಗ್ರಹಿಸಿದ್ದು ಸಮಂಜಸವಾಗಿಯೇ ಇದೆ.

ಆರೋಪಿ ಬಿಜೆಪಿ ಶಾಸಕ ಕುಲದೀಪ ಸಿಂಗ್ ಸೆಂಗಾರ್ ತುಂಬ ಪ್ರಭಾವಿಯಾಗಿದ್ದು, ಆರಂಭದಲ್ಲಿ ಈತನ ಪರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೇ ಮಾತಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದನ್ನು ಗಮನಿಸಬಹುದು. ಏಪ್ರಿಲ್ 8, 2018ರಂದು ಆರೋಪಿ ಶಾಸಕ ಕುಲದೀಪ್ ಮನೆ ಮುಂದೆ ಸಂತ್ರಸ್ತ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ. ಆ ಕಾರಣಕ್ಕೆ ಇದು ದೇಶದ ಗಮನ ಸೆಳೆಯುವಂತಾಗಿದ್ದು.

ಶಾಸಕನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಸಂತ್ರಸ್ತೆಯ ತಂದೆಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿಯೇ ಶಾಸಕನ ಸಹೋದರರು ಆಕೆಯ ತಂದೆಯ ಮೇಲೆ ಮಾರಣಾಂತಿ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ನಂತರ ಆಕೆಯ ತಂದೆ ಕಸ್ಟಡಿಯಲ್ಲೆ ನಿಧನ ಹೊಂದಿದರು.

ಇನ್ನು ಕಾರಿಗೆ ಗುದ್ದಿರುವ ಲಾರಿಯ ನಂಬರ್ ಪ್ಲೇಟ್ ಅನ್ನೇ ಕಪ್ಪು ಬಣ್ಣ ಬಳಿದು ಅಳಿಸಲಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ನಂತರ ವ್ಯಾಪಕ ಖಂಡನೆ ವ್ಯಕ್ತವಾದ ಪರಿಣಾಮ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೀಗೆ ಎಲ್ಲ ಘಟನಾವಳಿಗಳನ್ನು ಗಮನಿಸಿದರೆ ಕೇಸನ್ನು ಮುಚ್ಚು ಹಾಕಲು ಆರೋಪಿ ಶಾಸಕ ಕುಲದೀಪ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಯತ್ನಿಸುತ್ತಿದ್ದಾರೆ ಎಂಬ ಅನುಮಾನಗಳು ಮೂಡಿವೆ. ಇದಕ್ಕೆ ರಾಷ್ಟ್ರೀಯ ಬಿಜೆಪಿ ನಾಯಕರ ಬೆಂಬಲವೂ ಇದ್ದಂತಿದೆ. ಅಮಿತ್ ಶಾ ಕೇಸಿಗೆ ಸಂಬಂಧಿಸಿದಂತೆ ಸಂಭವಿಸಿದ ‘ಅಸಹಜ’ ಸಾವುಗಳನ್ನು ಗಮನಿಸಿದರೆ, ತಮ್ಮ ಪಾಪಕೃತ್ಯಗಳನ್ನು ಮುಚ್ಚಿ ಹಾಕಲು ಈ ದುರುಳರೆಲ್ಲ ಎಂತಹ ಹೇಯ ಕೃತ್ಯಕ್ಕೂ ಕೈ ಹಾಕಬಲ್ಲರು ಎಂಬ ಅನುಮಾನ ಮೂಡದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...