Homeಮುಖಪುಟಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಈ ಅಪಘಾತಕ್ಕೆ ಆರೋಪಿ ಬಿಜೆಪಿ ಶಾಸಕನ ಕೈವಾಡವಿದೆ ಎಂದು ಕೇಳಿಬರುತ್ತಿದ್ದು, ಈ ಹಿಂದೆ ಸಂತ್ರಸ್ಥೆ ತಂದೇ ಜೈಲಲ್ಲೇ ಮೃತಪಟ್ಟಿದ್ದೂ ಕೂಡ ಈಗ ಮುನ್ನಲೆಗೆ ಬಂದಿದೆ.

- Advertisement -
- Advertisement -

ಉನ್ನಾಂವ್ ಅತ್ಯಾಚಾರಕ್ಕೆ ಒಳಗಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂತ್ರಸ್ತೆಯನ್ನೇ ಕೊಲ್ಲುವ ಭಯಾನಕ ಯತ್ನ ನಿನ್ನೆ ನಡೆದಿದೆ. ಈ ಅತ್ಯಾಚಾರದ ಪ್ರಮುಖ ಆರೋಪಿ ಉತ್ತರಪ್ರದೇಶದ ಬಿಜೆಪಿ ಶಾಸಕನಾಗಿದ್ದಾನೆ. ಈ ಹಿಂದೆಯೇ ಸಂತ್ರಸ್ತೆಯ ತಂದೆ ಜೈಲಿನಲ್ಲೇ ಅನುಮಾನಾಸ್ಪಾದವಾಗಿ ನಿಧನ ಹೊಂದಿದರು ಎಂಬ ವಿಷಯಗಳನ್ನು ಗಣನೆಗೆ ತೆಗೆದುಕೊಂಡಾಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸರ್ಕಾರ ಆರೋಪಿಯನ್ನು ರಕ್ಷಿಸುವ ಯತ್ನವನ್ನು ಮೊದಲಿಂದಲೂ ಮಾಡುತ್ತಲೇ ಬಂದಿದೆ ಎಂಬ ಅನುಮಾನಗಳಿಗೆ ಪುಷ್ಠಿ ಸಿಗುವಂತಿದೆ….

ಅಪಘಾತವೋ, ಕೊಲೆಯ ಸಂಚೋ?
ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ಉನ್ನಾಂವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಲ್ಲಿದ್ದರೆ, ಆಕೆಯ ಇಬ್ಬರು ಸಂಬಂಧಿಕರು ಅಪಘಾತದಲ್ಲಿ ನಿಧನರಾಗಿದ್ದಾರೆ.

ಅತ್ಯಾಚಾರ ಪ್ರಕರಣ ನಡೆದ ಸಂದರ್ಭದಿಂದ ಇಲ್ಲಿವರೆಗೂ ನಡೆದ ಘಟನೆಗಳು ಮತ್ತು ಉತ್ತರಪ್ರದೇಶ ಸರ್ಕಾರ ಆರೋಪಿ ಶಾಸಕ ಕುಲದೀಪ್ ಪರವಾಗಿ ನಿಲ್ಲುತ್ತಲೇ ಬಂದಿವೆ. ಹಾಗಾಗಿ ಸಂತ್ರಸ್ತೆಯ ತಂದೆ ಜೈಲಿನಲ್ಲಿ ಅನುಮಾನಾಸ್ಪಾದವಾಗಿ ಮರಣ ಹೊದಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ, ರವಿವಾರ ನಡೆದದ್ದು ಅಪಘಾತವಲ್ಲ, ಕೊಲೆ ಯತ್ನ ಎಂಬುದು ಸ್ಪಷ್ಟವಾಗುತ್ತದೆ.

ರಾಯ್‍ಬರೇಲಿ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನನ್ನು ನೋಡಲು ಸನತ್ರಸ್ತ ಯುವತಿ ಪ್ರಯಾಣಿಸುವಾಗ ಈ ‘ಅಪಘಾತ’ ನಡೆದಿದ್ದು ಸಂಶಯಗಳನ್ನು ಹುಟ್ಟು ಹಾಕಿದೆ. ಅಪಘಾತದಲ್ಲಿ ಸಂತ್ರಸ್ತೆಯ ಚಿಕ್ಕಮ್ಮ, ಆಕೆಯ ಸಹೋದರಿ ಮೃತರಾಗಿದ್ದು, ಸಂತ್ರಸ್ತೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅತ್ಯಾಚಾರ ಪ್ರಕರಣದ ಬಳಿಕ ನಡೆದ ಘಟನೆಗಳನ್ನು ನೋಡುತ್ತ ಹೋದರೆ ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲುವ ಯತ್ನ ಎಂಬುದು ಮನದಟ್ಟಾಗುತ್ತದೆ. ಹೀಗಾಗಿಯೇ ಉತ್ತರಪ್ರದೇಶದ ವಿರೋಧ ಪಕ್ಷಗಳು ಇಲ್ಲಿ ಫೆಡೆರಲ್ ತನಿಖೆ ಆಗಬೇಕೆಂದು ಆಗ್ರಹಿಸಿದ್ದು ಸಮಂಜಸವಾಗಿಯೇ ಇದೆ.

ಆರೋಪಿ ಬಿಜೆಪಿ ಶಾಸಕ ಕುಲದೀಪ ಸಿಂಗ್ ಸೆಂಗಾರ್ ತುಂಬ ಪ್ರಭಾವಿಯಾಗಿದ್ದು, ಆರಂಭದಲ್ಲಿ ಈತನ ಪರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೇ ಮಾತಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದನ್ನು ಗಮನಿಸಬಹುದು. ಏಪ್ರಿಲ್ 8, 2018ರಂದು ಆರೋಪಿ ಶಾಸಕ ಕುಲದೀಪ್ ಮನೆ ಮುಂದೆ ಸಂತ್ರಸ್ತ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ. ಆ ಕಾರಣಕ್ಕೆ ಇದು ದೇಶದ ಗಮನ ಸೆಳೆಯುವಂತಾಗಿದ್ದು.

ಶಾಸಕನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಸಂತ್ರಸ್ತೆಯ ತಂದೆಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿಯೇ ಶಾಸಕನ ಸಹೋದರರು ಆಕೆಯ ತಂದೆಯ ಮೇಲೆ ಮಾರಣಾಂತಿ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ನಂತರ ಆಕೆಯ ತಂದೆ ಕಸ್ಟಡಿಯಲ್ಲೆ ನಿಧನ ಹೊಂದಿದರು.

ಇನ್ನು ಕಾರಿಗೆ ಗುದ್ದಿರುವ ಲಾರಿಯ ನಂಬರ್ ಪ್ಲೇಟ್ ಅನ್ನೇ ಕಪ್ಪು ಬಣ್ಣ ಬಳಿದು ಅಳಿಸಲಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ನಂತರ ವ್ಯಾಪಕ ಖಂಡನೆ ವ್ಯಕ್ತವಾದ ಪರಿಣಾಮ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೀಗೆ ಎಲ್ಲ ಘಟನಾವಳಿಗಳನ್ನು ಗಮನಿಸಿದರೆ ಕೇಸನ್ನು ಮುಚ್ಚು ಹಾಕಲು ಆರೋಪಿ ಶಾಸಕ ಕುಲದೀಪ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಯತ್ನಿಸುತ್ತಿದ್ದಾರೆ ಎಂಬ ಅನುಮಾನಗಳು ಮೂಡಿವೆ. ಇದಕ್ಕೆ ರಾಷ್ಟ್ರೀಯ ಬಿಜೆಪಿ ನಾಯಕರ ಬೆಂಬಲವೂ ಇದ್ದಂತಿದೆ. ಅಮಿತ್ ಶಾ ಕೇಸಿಗೆ ಸಂಬಂಧಿಸಿದಂತೆ ಸಂಭವಿಸಿದ ‘ಅಸಹಜ’ ಸಾವುಗಳನ್ನು ಗಮನಿಸಿದರೆ, ತಮ್ಮ ಪಾಪಕೃತ್ಯಗಳನ್ನು ಮುಚ್ಚಿ ಹಾಕಲು ಈ ದುರುಳರೆಲ್ಲ ಎಂತಹ ಹೇಯ ಕೃತ್ಯಕ್ಕೂ ಕೈ ಹಾಕಬಲ್ಲರು ಎಂಬ ಅನುಮಾನ ಮೂಡದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...