Homeಮುಖಪುಟಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಈ ಅಪಘಾತಕ್ಕೆ ಆರೋಪಿ ಬಿಜೆಪಿ ಶಾಸಕನ ಕೈವಾಡವಿದೆ ಎಂದು ಕೇಳಿಬರುತ್ತಿದ್ದು, ಈ ಹಿಂದೆ ಸಂತ್ರಸ್ಥೆ ತಂದೇ ಜೈಲಲ್ಲೇ ಮೃತಪಟ್ಟಿದ್ದೂ ಕೂಡ ಈಗ ಮುನ್ನಲೆಗೆ ಬಂದಿದೆ.

- Advertisement -
- Advertisement -

ಉನ್ನಾಂವ್ ಅತ್ಯಾಚಾರಕ್ಕೆ ಒಳಗಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂತ್ರಸ್ತೆಯನ್ನೇ ಕೊಲ್ಲುವ ಭಯಾನಕ ಯತ್ನ ನಿನ್ನೆ ನಡೆದಿದೆ. ಈ ಅತ್ಯಾಚಾರದ ಪ್ರಮುಖ ಆರೋಪಿ ಉತ್ತರಪ್ರದೇಶದ ಬಿಜೆಪಿ ಶಾಸಕನಾಗಿದ್ದಾನೆ. ಈ ಹಿಂದೆಯೇ ಸಂತ್ರಸ್ತೆಯ ತಂದೆ ಜೈಲಿನಲ್ಲೇ ಅನುಮಾನಾಸ್ಪಾದವಾಗಿ ನಿಧನ ಹೊಂದಿದರು ಎಂಬ ವಿಷಯಗಳನ್ನು ಗಣನೆಗೆ ತೆಗೆದುಕೊಂಡಾಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸರ್ಕಾರ ಆರೋಪಿಯನ್ನು ರಕ್ಷಿಸುವ ಯತ್ನವನ್ನು ಮೊದಲಿಂದಲೂ ಮಾಡುತ್ತಲೇ ಬಂದಿದೆ ಎಂಬ ಅನುಮಾನಗಳಿಗೆ ಪುಷ್ಠಿ ಸಿಗುವಂತಿದೆ….

ಅಪಘಾತವೋ, ಕೊಲೆಯ ಸಂಚೋ?
ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ಉನ್ನಾಂವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಲ್ಲಿದ್ದರೆ, ಆಕೆಯ ಇಬ್ಬರು ಸಂಬಂಧಿಕರು ಅಪಘಾತದಲ್ಲಿ ನಿಧನರಾಗಿದ್ದಾರೆ.

ಅತ್ಯಾಚಾರ ಪ್ರಕರಣ ನಡೆದ ಸಂದರ್ಭದಿಂದ ಇಲ್ಲಿವರೆಗೂ ನಡೆದ ಘಟನೆಗಳು ಮತ್ತು ಉತ್ತರಪ್ರದೇಶ ಸರ್ಕಾರ ಆರೋಪಿ ಶಾಸಕ ಕುಲದೀಪ್ ಪರವಾಗಿ ನಿಲ್ಲುತ್ತಲೇ ಬಂದಿವೆ. ಹಾಗಾಗಿ ಸಂತ್ರಸ್ತೆಯ ತಂದೆ ಜೈಲಿನಲ್ಲಿ ಅನುಮಾನಾಸ್ಪಾದವಾಗಿ ಮರಣ ಹೊದಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ, ರವಿವಾರ ನಡೆದದ್ದು ಅಪಘಾತವಲ್ಲ, ಕೊಲೆ ಯತ್ನ ಎಂಬುದು ಸ್ಪಷ್ಟವಾಗುತ್ತದೆ.

ರಾಯ್‍ಬರೇಲಿ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನನ್ನು ನೋಡಲು ಸನತ್ರಸ್ತ ಯುವತಿ ಪ್ರಯಾಣಿಸುವಾಗ ಈ ‘ಅಪಘಾತ’ ನಡೆದಿದ್ದು ಸಂಶಯಗಳನ್ನು ಹುಟ್ಟು ಹಾಕಿದೆ. ಅಪಘಾತದಲ್ಲಿ ಸಂತ್ರಸ್ತೆಯ ಚಿಕ್ಕಮ್ಮ, ಆಕೆಯ ಸಹೋದರಿ ಮೃತರಾಗಿದ್ದು, ಸಂತ್ರಸ್ತೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅತ್ಯಾಚಾರ ಪ್ರಕರಣದ ಬಳಿಕ ನಡೆದ ಘಟನೆಗಳನ್ನು ನೋಡುತ್ತ ಹೋದರೆ ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲುವ ಯತ್ನ ಎಂಬುದು ಮನದಟ್ಟಾಗುತ್ತದೆ. ಹೀಗಾಗಿಯೇ ಉತ್ತರಪ್ರದೇಶದ ವಿರೋಧ ಪಕ್ಷಗಳು ಇಲ್ಲಿ ಫೆಡೆರಲ್ ತನಿಖೆ ಆಗಬೇಕೆಂದು ಆಗ್ರಹಿಸಿದ್ದು ಸಮಂಜಸವಾಗಿಯೇ ಇದೆ.

ಆರೋಪಿ ಬಿಜೆಪಿ ಶಾಸಕ ಕುಲದೀಪ ಸಿಂಗ್ ಸೆಂಗಾರ್ ತುಂಬ ಪ್ರಭಾವಿಯಾಗಿದ್ದು, ಆರಂಭದಲ್ಲಿ ಈತನ ಪರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೇ ಮಾತಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದನ್ನು ಗಮನಿಸಬಹುದು. ಏಪ್ರಿಲ್ 8, 2018ರಂದು ಆರೋಪಿ ಶಾಸಕ ಕುಲದೀಪ್ ಮನೆ ಮುಂದೆ ಸಂತ್ರಸ್ತ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ. ಆ ಕಾರಣಕ್ಕೆ ಇದು ದೇಶದ ಗಮನ ಸೆಳೆಯುವಂತಾಗಿದ್ದು.

ಶಾಸಕನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಸಂತ್ರಸ್ತೆಯ ತಂದೆಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿಯೇ ಶಾಸಕನ ಸಹೋದರರು ಆಕೆಯ ತಂದೆಯ ಮೇಲೆ ಮಾರಣಾಂತಿ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ನಂತರ ಆಕೆಯ ತಂದೆ ಕಸ್ಟಡಿಯಲ್ಲೆ ನಿಧನ ಹೊಂದಿದರು.

ಇನ್ನು ಕಾರಿಗೆ ಗುದ್ದಿರುವ ಲಾರಿಯ ನಂಬರ್ ಪ್ಲೇಟ್ ಅನ್ನೇ ಕಪ್ಪು ಬಣ್ಣ ಬಳಿದು ಅಳಿಸಲಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ನಂತರ ವ್ಯಾಪಕ ಖಂಡನೆ ವ್ಯಕ್ತವಾದ ಪರಿಣಾಮ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೀಗೆ ಎಲ್ಲ ಘಟನಾವಳಿಗಳನ್ನು ಗಮನಿಸಿದರೆ ಕೇಸನ್ನು ಮುಚ್ಚು ಹಾಕಲು ಆರೋಪಿ ಶಾಸಕ ಕುಲದೀಪ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಯತ್ನಿಸುತ್ತಿದ್ದಾರೆ ಎಂಬ ಅನುಮಾನಗಳು ಮೂಡಿವೆ. ಇದಕ್ಕೆ ರಾಷ್ಟ್ರೀಯ ಬಿಜೆಪಿ ನಾಯಕರ ಬೆಂಬಲವೂ ಇದ್ದಂತಿದೆ. ಅಮಿತ್ ಶಾ ಕೇಸಿಗೆ ಸಂಬಂಧಿಸಿದಂತೆ ಸಂಭವಿಸಿದ ‘ಅಸಹಜ’ ಸಾವುಗಳನ್ನು ಗಮನಿಸಿದರೆ, ತಮ್ಮ ಪಾಪಕೃತ್ಯಗಳನ್ನು ಮುಚ್ಚಿ ಹಾಕಲು ಈ ದುರುಳರೆಲ್ಲ ಎಂತಹ ಹೇಯ ಕೃತ್ಯಕ್ಕೂ ಕೈ ಹಾಕಬಲ್ಲರು ಎಂಬ ಅನುಮಾನ ಮೂಡದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...