Homeಮುಖಪುಟಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಈ ಅಪಘಾತಕ್ಕೆ ಆರೋಪಿ ಬಿಜೆಪಿ ಶಾಸಕನ ಕೈವಾಡವಿದೆ ಎಂದು ಕೇಳಿಬರುತ್ತಿದ್ದು, ಈ ಹಿಂದೆ ಸಂತ್ರಸ್ಥೆ ತಂದೇ ಜೈಲಲ್ಲೇ ಮೃತಪಟ್ಟಿದ್ದೂ ಕೂಡ ಈಗ ಮುನ್ನಲೆಗೆ ಬಂದಿದೆ.

- Advertisement -
- Advertisement -

ಉನ್ನಾಂವ್ ಅತ್ಯಾಚಾರಕ್ಕೆ ಒಳಗಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂತ್ರಸ್ತೆಯನ್ನೇ ಕೊಲ್ಲುವ ಭಯಾನಕ ಯತ್ನ ನಿನ್ನೆ ನಡೆದಿದೆ. ಈ ಅತ್ಯಾಚಾರದ ಪ್ರಮುಖ ಆರೋಪಿ ಉತ್ತರಪ್ರದೇಶದ ಬಿಜೆಪಿ ಶಾಸಕನಾಗಿದ್ದಾನೆ. ಈ ಹಿಂದೆಯೇ ಸಂತ್ರಸ್ತೆಯ ತಂದೆ ಜೈಲಿನಲ್ಲೇ ಅನುಮಾನಾಸ್ಪಾದವಾಗಿ ನಿಧನ ಹೊಂದಿದರು ಎಂಬ ವಿಷಯಗಳನ್ನು ಗಣನೆಗೆ ತೆಗೆದುಕೊಂಡಾಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸರ್ಕಾರ ಆರೋಪಿಯನ್ನು ರಕ್ಷಿಸುವ ಯತ್ನವನ್ನು ಮೊದಲಿಂದಲೂ ಮಾಡುತ್ತಲೇ ಬಂದಿದೆ ಎಂಬ ಅನುಮಾನಗಳಿಗೆ ಪುಷ್ಠಿ ಸಿಗುವಂತಿದೆ….

ಅಪಘಾತವೋ, ಕೊಲೆಯ ಸಂಚೋ?
ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ಉನ್ನಾಂವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಲ್ಲಿದ್ದರೆ, ಆಕೆಯ ಇಬ್ಬರು ಸಂಬಂಧಿಕರು ಅಪಘಾತದಲ್ಲಿ ನಿಧನರಾಗಿದ್ದಾರೆ.

ಅತ್ಯಾಚಾರ ಪ್ರಕರಣ ನಡೆದ ಸಂದರ್ಭದಿಂದ ಇಲ್ಲಿವರೆಗೂ ನಡೆದ ಘಟನೆಗಳು ಮತ್ತು ಉತ್ತರಪ್ರದೇಶ ಸರ್ಕಾರ ಆರೋಪಿ ಶಾಸಕ ಕುಲದೀಪ್ ಪರವಾಗಿ ನಿಲ್ಲುತ್ತಲೇ ಬಂದಿವೆ. ಹಾಗಾಗಿ ಸಂತ್ರಸ್ತೆಯ ತಂದೆ ಜೈಲಿನಲ್ಲಿ ಅನುಮಾನಾಸ್ಪಾದವಾಗಿ ಮರಣ ಹೊದಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ, ರವಿವಾರ ನಡೆದದ್ದು ಅಪಘಾತವಲ್ಲ, ಕೊಲೆ ಯತ್ನ ಎಂಬುದು ಸ್ಪಷ್ಟವಾಗುತ್ತದೆ.

ರಾಯ್‍ಬರೇಲಿ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನನ್ನು ನೋಡಲು ಸನತ್ರಸ್ತ ಯುವತಿ ಪ್ರಯಾಣಿಸುವಾಗ ಈ ‘ಅಪಘಾತ’ ನಡೆದಿದ್ದು ಸಂಶಯಗಳನ್ನು ಹುಟ್ಟು ಹಾಕಿದೆ. ಅಪಘಾತದಲ್ಲಿ ಸಂತ್ರಸ್ತೆಯ ಚಿಕ್ಕಮ್ಮ, ಆಕೆಯ ಸಹೋದರಿ ಮೃತರಾಗಿದ್ದು, ಸಂತ್ರಸ್ತೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅತ್ಯಾಚಾರ ಪ್ರಕರಣದ ಬಳಿಕ ನಡೆದ ಘಟನೆಗಳನ್ನು ನೋಡುತ್ತ ಹೋದರೆ ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲುವ ಯತ್ನ ಎಂಬುದು ಮನದಟ್ಟಾಗುತ್ತದೆ. ಹೀಗಾಗಿಯೇ ಉತ್ತರಪ್ರದೇಶದ ವಿರೋಧ ಪಕ್ಷಗಳು ಇಲ್ಲಿ ಫೆಡೆರಲ್ ತನಿಖೆ ಆಗಬೇಕೆಂದು ಆಗ್ರಹಿಸಿದ್ದು ಸಮಂಜಸವಾಗಿಯೇ ಇದೆ.

ಆರೋಪಿ ಬಿಜೆಪಿ ಶಾಸಕ ಕುಲದೀಪ ಸಿಂಗ್ ಸೆಂಗಾರ್ ತುಂಬ ಪ್ರಭಾವಿಯಾಗಿದ್ದು, ಆರಂಭದಲ್ಲಿ ಈತನ ಪರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೇ ಮಾತಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದನ್ನು ಗಮನಿಸಬಹುದು. ಏಪ್ರಿಲ್ 8, 2018ರಂದು ಆರೋಪಿ ಶಾಸಕ ಕುಲದೀಪ್ ಮನೆ ಮುಂದೆ ಸಂತ್ರಸ್ತ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ. ಆ ಕಾರಣಕ್ಕೆ ಇದು ದೇಶದ ಗಮನ ಸೆಳೆಯುವಂತಾಗಿದ್ದು.

ಶಾಸಕನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಸಂತ್ರಸ್ತೆಯ ತಂದೆಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿಯೇ ಶಾಸಕನ ಸಹೋದರರು ಆಕೆಯ ತಂದೆಯ ಮೇಲೆ ಮಾರಣಾಂತಿ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ನಂತರ ಆಕೆಯ ತಂದೆ ಕಸ್ಟಡಿಯಲ್ಲೆ ನಿಧನ ಹೊಂದಿದರು.

ಇನ್ನು ಕಾರಿಗೆ ಗುದ್ದಿರುವ ಲಾರಿಯ ನಂಬರ್ ಪ್ಲೇಟ್ ಅನ್ನೇ ಕಪ್ಪು ಬಣ್ಣ ಬಳಿದು ಅಳಿಸಲಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ನಂತರ ವ್ಯಾಪಕ ಖಂಡನೆ ವ್ಯಕ್ತವಾದ ಪರಿಣಾಮ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೀಗೆ ಎಲ್ಲ ಘಟನಾವಳಿಗಳನ್ನು ಗಮನಿಸಿದರೆ ಕೇಸನ್ನು ಮುಚ್ಚು ಹಾಕಲು ಆರೋಪಿ ಶಾಸಕ ಕುಲದೀಪ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಯತ್ನಿಸುತ್ತಿದ್ದಾರೆ ಎಂಬ ಅನುಮಾನಗಳು ಮೂಡಿವೆ. ಇದಕ್ಕೆ ರಾಷ್ಟ್ರೀಯ ಬಿಜೆಪಿ ನಾಯಕರ ಬೆಂಬಲವೂ ಇದ್ದಂತಿದೆ. ಅಮಿತ್ ಶಾ ಕೇಸಿಗೆ ಸಂಬಂಧಿಸಿದಂತೆ ಸಂಭವಿಸಿದ ‘ಅಸಹಜ’ ಸಾವುಗಳನ್ನು ಗಮನಿಸಿದರೆ, ತಮ್ಮ ಪಾಪಕೃತ್ಯಗಳನ್ನು ಮುಚ್ಚಿ ಹಾಕಲು ಈ ದುರುಳರೆಲ್ಲ ಎಂತಹ ಹೇಯ ಕೃತ್ಯಕ್ಕೂ ಕೈ ಹಾಕಬಲ್ಲರು ಎಂಬ ಅನುಮಾನ ಮೂಡದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...