Homeಮುಖಪುಟಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಘಾತ: ಸಿಬಿಐ ತನಿಖೆ ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಘಾತ: ಸಿಬಿಐ ತನಿಖೆ ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

- Advertisement -
- Advertisement -

2019 ರಲ್ಲಿ ನಡೆದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತದಲ್ಲಿ ಯಾರ ಕೈವಾಡವೂ ಇಲ್ಲ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದ ತನಿಖೆಯನ್ನು ದೆಹಲಿ ನ್ಯಾಯಾಲಯವು ಎತ್ತಿಹಿಡಿದಿದೆ.

2019 ರಲ್ಲಿ ರಾಯ್ ಬರೇಲಿಯಲ್ಲಿ ಅತ್ಯಾಚಾರ ಸಂತ್ರಸ್ತೆ, ಆಕೆಯ ಕುಟುಂಬ ಮತ್ತು ವಕೀಲರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅತಿ ವೇಗದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಂತ್ರೆಸ್ತೆಯ ಇಬ್ಬರು ಚಿಕ್ಕಮ್ಮಂದಿರು ಸಾವನ್ನಪ್ಪಿದ್ದರು. ಸಂತ್ರಸ್ತೆ ಮತ್ತು ವಕೀಲರು ತೀವ್ರವಾಗಿ ಗಾಯಗೊಂಡಿದ್ದರು.

ಕಾರು ಅಪಘಾತದಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಜೀವಾವದಿ ಶಿಕ್ಷೆಗೆ ಗುರಿಯಾಗಿರುವ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮತ್ತು 9 ಮಂದಿಯ ಕೈವಾಡವಿದೆ ಎಂದು ಸಂತ್ರಸ್ತೆ ಕುಟುಂಬ ದೂರು ದಾಖಲಿಸಿತ್ತು. ಹೀಗಾಗಿ ಕುಲದೀಪ್ ಸಿಂಗ್ ಸೆಂಗಾರ್ ಮತ್ತು 9 ಮಂದಿ ಮೇಲೆ ಕೊಲೆ ಪ್ರಕರಣ ದಾಖಲಾಗಿತ್ತು.

ಈ ಆರೋಪಗಳನ್ನು ತಳ್ಳಿಹಾಕಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧರ್ಮೇಶ್ ಶರ್ಮಾ, ದೂರುದಾರರ ಆಕ್ಷೇಪಣೆಗಳು ರೋಮಾಂಚಕ ಕಥೆಯಂತಿವೆ. ಆದರೆ ಅವು ಕೇವಲ ಅಂದಾಜು ಮತ್ತು ಊಹೆಗಳನ್ನು ಆಧರಿಸಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

 

ಸಿಬಿಐ ನಡೆಸಿದ ತನಿಖೆಯು ನಿಷ್ಠೆ, ನಿಖರತೆ ಮತ್ತು ಪ್ರಾಮಾಣಿಕತೆಯನ್ನು ಅನುಮಾನಿಸಲು ಯಾವುದೇ ಆಧಾರಗಳಿಲ್ಲ. ಕಾರು ಅಪಘಾತ ಘಟನೆಯ ಸಮರ್ಥನೀಯ ಸಂಗತಿಯನ್ನು ಸಂಸ್ಥೆ ಹೊರಹಾಕಿದೆ ಎಂದು ನ್ಯಾಯಾಧೀಶರು  ಹೇಳಿದ್ದಾರೆ.

ಘಟನೆಯಲ್ಲಿ ಕುಲದೀಪ್ ಸೆಂಗಾರ್ ಸೇರಿದಂತೆ ಟ್ರಕ್ ಚಾಲಕ ಅಥವಾ ಕ್ಲೀನರ್ ಅಥವಾ ಟ್ರಕ್ ಮಾಲೀಕರ ನಡುವೆ ಕ್ರಿಮಿನಲ್ ಪಿತೂರಿಯ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ತನಿಖಾ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.

“ಆರೋಪಿತ ವ್ಯಕ್ತಿಗಳ ವಿರುದ್ಧ ಯಾವುದೇ ಪ್ರಕರಣವಿಲ್ಲ, ಆದ್ದರಿಂದ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 302 (ಕೊಲೆ) ಮತ್ತು 307 (ಕೊಲೆ ಯತ್ನ) ದ ಪ್ರಕರಣಗಳಿಲ್ಲ” ಎಂದು ಜುಲೈ 31 ರ ಆದೇಶದಲ್ಲಿ ನ್ಯಾಯಾಧೀಶ ಧರ್ಮೇಶ್ ಶರ್ಮಾ ಹೇಳಿದ್ದಾರೆ. ಜೊತೆಗೆ ಟ್ರಕ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ನಡೆದಿದೆ ಎಂದು ಆರೋಪಗಳನ್ನು ಮಾಡಲಾಗಿದೆ.

ಮಾರ್ಚ್ 4, 2020 ರಂದು ನ್ಯಾಯಾಂಗ ಬಂಧನದಲ್ಲಿದ್ದ ಅತ್ಯಾಚಾರ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಸೆಂಗಾರ್, ಆತನ ಸಹೋದರ ಮತ್ತು ಇತರ ಐವರು ಸಹಚರರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಡಿಸೆಂಬರ್ 20, 2019 ರಂದು, ಸೆಂಗರ್‌ಗೆ 2017 ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದೆ.


ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....