Homeಮುಖಪುಟಬೆಂಕಿಗೆ ಆಹುತಿಯಾಗಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು: ತ್ವರಿತ ವಿಚಾರಣೆಗೆ ಸಿಎಂ ಆದೇಶ

ಬೆಂಕಿಗೆ ಆಹುತಿಯಾಗಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು: ತ್ವರಿತ ವಿಚಾರಣೆಗೆ ಸಿಎಂ ಆದೇಶ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೊದಲ್ಲಿ ಬೆಂಕಿ ದಾಳಿಗೆ ಒಳಗಾಗಿದ್ದ 23 ವರ್ಷದ ಅತ್ಯಾಚಾರ ಸಂತ್ರಸ್ತೆ ನಿನ್ನೆ ತಡರಾತ್ರಿ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗುರುವಾರ ಆಕೆ ದೂರು ನೀಡಿದ್ದ ಆರೋಪಿಗಳು ಬೆಂಕಿ ಹಚ್ಚಿದ ನಂತರ ಶೇಕಡಾ 90 ರಷ್ಟು ಸುಟ್ಟಗಾಯಗಳಿಗೆ ಒಳಗಾಗಿದ್ದ ಮಹಿಳೆ ಎರಡು ದಿನ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕಡೆಗೂ ನಿನ್ನೆ ರಾತ್ರಿ 11: 40 ಕ್ಕೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.

“ಅವಳು ರಾತ್ರಿ 11: 10 ಕ್ಕೆ ಹೃದಯ ಸ್ತಂಭನದಿಂದ ಬಳಲುತ್ತಿದ್ದಳು ಮತ್ತು ನಾವು ಅವಳನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಿದೆವು, ಆದರೆ ಅವಳು ಬದುಕುಳಿಯಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 11:40 ಕ್ಕೆ ಅವಳು ತೀರಿಕೊಂಡಳು” ಎಂದು ಸಫ್ದರ್ಜಂಗ್ ಆಸ್ಪತ್ರೆಯ ಬರ್ನ್ಸ್ ಮತ್ತು ಪ್ಲಾಸ್ಟಿಕ್ ವಿಭಾಗದ ಮುಖ್ಯಸ್ಥ ಡಾ.ಶಾಲಭ್ ಕುಮಾರ್ ಹೇಳಿದ್ದಾರೆ.

ಮಹಿಳೆಯ ಶವವನ್ನು ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ಅಲ್ಲಿ ಶವಪರೀಕ್ಷೆ ನಡೆಸಲಾಗುವುದು, ನಂತರ ಆಕೆಯ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಶವಪರೀಕ್ಷೆಯ ವರದಿಗಳನ್ನು ಪೊಲೀಸರಿಗೆ ನೀಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಂತ್ರಸ್ತೆ ಬೆಂಕಿಗೆ ಆಹುತಿಯಾಗಿ ತನ್ನ ಸುಟ್ಟ ಸ್ಥಿತಿಯಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗ ಇನ್ನು ಪ್ರಜ್ಞಾ ಸ್ಥಿತಿಯಲ್ಲಿದ್ದ ಕಾರಣ ಎಲ್ಲಾ ಐದು ದಾಳಿಕೋರರನ್ನು ಗುರುತಿಸಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.

“ಬೆಳಿಗ್ಗೆ 4 ಗಂಟೆಗೆ ನಾನು ರಾಯ್‌ ಬರೇಲಿಗೆ ರೈಲು ಹಿಡಿಯಲು ಸ್ಥಳೀಯ ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದೆ. ಐದು ಜನರು ನನಗಾಗಿ ಕಾಯುತ್ತಿದ್ದರು. ಅವರು ನನ್ನನ್ನು ಸುತ್ತುವರೆದು ಮೊದಲು ಕಾಲಿಗೆ ಕೋಲಿನಿಂದ ಹೊಡೆದರು ಮತ್ತು ನನ್ನ ಕುತ್ತಿಗೆಗೆ ಚಾಕುವಿನಿಂದ ಇರಿದರು. ನಂತರ ಅವರು ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು” ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾರೆ.

ದಾಳಿಕೋರರಲ್ಲಿ ಒಬ್ಬನಾಗಿದ್ದ ಆಕೆಯ ಅತ್ಯಾಚಾರಿ ಆರೋಪಿ ಶಿವಂ ತ್ರಿವೇದಿ ಐದು ದಿನಗಳ ಹಿಂದೆ ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನಾಪತ್ತೆಯಾಗಿದ್ದ ಅವನ ಸಹ ಆರೋಪಿ ಶುಭಮ್ ತ್ರಿವೇದಿ ಕೂಡ ದಾಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಎಲ್ಲಾ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಮಹಿಳೆಯ ಸಾವಿನಿಂದ ಬಹಳ ದುಃಖಿತನಾಗಿದ್ದೇನೆ. ಕೂಡಲೇ ಫಾಸ್ಟ್‌ ಟ್ರಾಕ್‌ ಕೋರ್ಟ್‌‌ನಲ್ಲಿ ತ್ವರಿತ ವಿಚಾರಣೆಗೆ ಆದೇಶಿಸುತ್ತೇನೆ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...