Homeಮುಖಪುಟಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದ ಶಿಕ್ಷೆಯ ಅಮಾನತಿಗೆ ಕೋರಿದ ಅಪರಾಧಿ ಸೆಂಗಾರ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದ ಶಿಕ್ಷೆಯ ಅಮಾನತಿಗೆ ಕೋರಿದ ಅಪರಾಧಿ ಸೆಂಗಾರ್

- Advertisement -
- Advertisement -

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ತನಗೆ ವಿಧಿಸಲಾದ 10 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಉಚ್ಚಾಟಿತ ಬಿಜೆಪಿ ನಾಯಕ, ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸೆಂಗಾರ್ ಗುರುವಾರ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಶಿಕ್ಷೆಯ ವಿರುದ್ಧದ ಮೇಲ್ಮನವಿಯನ್ನು ಹೈಕೋರ್ಟ್ ಇನ್ನೂ ತೀರ್ಮಾನಿಸದಿದ್ದರೂ, ತಾನು ಈಗಾಗಲೇ ಗಣನೀಯ ಅವಧಿಯನ್ನು ಜೈಲಿನಲ್ಲಿ ಕಳೆದಿದ್ದೇನೆ ಎಂಬ ಕಾರಣಕ್ಕಾಗಿ ಈ ಶಿಕ್ಷೆಯನ್ನು ಹಿಂಪಡೆಯುವಂತೆ ಸೆಂಗಾರ್ ಕೋರಿದ್ದಾರೆ. ಉನ್ನಾವೋ ಅತ್ಯಾಚಾರ

ವೈದ್ಯಕೀಯ ಕಾರಣಗಳಿಗಾಗಿ ಜನವರಿ 20 ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಬಿಜೆಪಿಯ ಮಾಜಿ ಶಾಸಕರೂ ಆಗಿರುವ ಸೆಂಗಾರ್ ಅವರು, ಜನವರಿ 24 ರಂದು ಏಮ್ಸ್‌ನಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಯಲಿರುವ ಕಾರಣ ಬಿಡುಗಡೆ ಅವಧಿಯನ್ನು ವಿಸ್ತರಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ಅರ್ಜಿಯನ್ನು ಜನವರಿ 17 ರಂದು ವಿಚಾರಣೆಗೆ ಪಟ್ಟಿ ಮಾಡಿದ ನ್ಯಾಯಮೂರ್ತಿ ವಿಕಾಸ್ ಮಹಾಜನ್, ಸೆಂಗಾರ್ ಅವರ ವಕೀಲರನ್ನು ಕೆಲವು ಆದೇಶಗಳನ್ನು ದಾಖಲಿಸುವಂತೆ ಕೇಳಿಕೊಂಡಿದ್ದಾರೆ ಮತ್ತು ಅವರ ವೈದ್ಯಕೀಯ ದಾಖಲೆಯನ್ನು ಪರಿಶೀಲಿಸಲು ಕೇಂದ್ರ ತನಿಖಾ ದಳವನ್ನು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಂಗಾರ್ ಪರ ಹಾಜರಾದ ಹಿರಿಯ ವಕೀಲರು, ಸೆಕ್ಷನ್ 304 ಭಾಗ (ii) (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಅಡಿಯಲ್ಲಿನ ಅಪರಾಧಕ್ಕೆ 10 ವರ್ಷಗಳ ಜೈಲು ಶಿಕ್ಷೆಯ ಜೊತೆಗೆ, ವಿಚಾರಣಾ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಇತರ ಅಪರಾಧಗಳಿಗೆ ಒಂದು ತಿಂಗಳಿನಿಂದ ಏಳು ವರ್ಷಗಳವರೆಗೆ ಕಡಿಮೆ ಶಿಕ್ಷೆಯನ್ನು ವಿಧಿಸಿದೆ ಎಂದು ಹೇಳಿದ್ದಾರೆ. ಉನ್ನಾವೋ ಅತ್ಯಾಚಾರ

“ಇದು ಶಿಕ್ಷೆಯನ್ನು ಅಮಾನತುಗೊಳಿಸುವ ಅರ್ಜಿಯಾಗಿದೆ. ಮೇಲ್ಮನವಿ ಸಲ್ಲಿಸಿದ ಶಿಕ್ಷೆಯು ವಾಸ್ತವಿಕವಾಗಿ ಮುಗಿದಿದೆ. (ಜೈಲಿನಲ್ಲಿ) ಅನುಭವಿಸಿದ ನಿಜವಾದ ಅವಧಿ ಎಂಟು ವರ್ಷ ಮತ್ತು ಒಂದು ತಿಂಗಳು. ನನ್ನ ವಿರುದ್ಧ 9 ಆರೋಪಗಳಿದ್ದವು… ನಾನು (10 ವರ್ಷಗಳಲ್ಲಿ) ಒಂದನ್ನು ಹೊರತುಪಡಿಸಿ ಎಲ್ಲಾ ಶಿಕ್ಷೆಗಳನ್ನು ಅನುಭವಿಸಿದ್ದೇನೆ…” ಎಂದು ಸೆಂಗಾರ್ ಪರ ಹಿರಿಯ ವಕೀಲರು ಹೇಳಿದ್ದಾರೆ.

ಸೆಂಗಾರ್ ಅವರ ಅರ್ಜಿಯನ್ನು ಸಿಬಿಐ ಪರ ವಕೀಲರು ವಿರೋಧಿಸಿದ್ದು, ಸೆಂಗಾರ್ “ಪ್ರಮುಖ ಆರೋಪಿ”ಯಾಗಿದ್ದಾರೆ ಎಂದು ವಾದಿಸಿದ್ದಾರೆ. ಅವರನ್ನು ಬಿಡುಗಡೆ ಮಾಡಿದರೆ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆಯಾಗಿ ಪರಿಣಮಿಸುತ್ತದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಇದೇ ರೀತಿಯ ಅಮಾನತು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಜೊತೆಗೆ ಶಸ್ತ್ರಚಿಕಿತ್ಸೆಯ ಮಧ್ಯಂತರ ಅಮಾನತು ವಿಷಯಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್‌ನ ವಿಭಾಗೀಯ ಪೀಠವು ಕಳೆದ ತಿಂಗಳು ಅವರಿಗೆ ಯಾವುದೇ ವಿಸ್ತರಣೆಯನ್ನು ನೀಡಲಾಗುವುದಿಲ್ಲ ಎಂದು ಹೇಳಿತ್ತು ಎಂದು ಸಿಬಿಐ ವಕೀಲರು ತಿಳಿಸಿದ್ದಾರೆ.

ಈ ವೇಳೆ ಸೆಂಗಾರ್ ಅವರ ವಕೀಲರು ವಾದಿಸಿ, ಈ ಹಂತದಲ್ಲಿ ಶಿಕ್ಷೆಯ ಅಮಾನತು ಪ್ರಯೋಜನವನ್ನು ಪಡೆಯಲು ಕಾನೂನುಬದ್ಧವಾಗಿ ಅರ್ಹರಾಗಿದ್ದಾರೆ ಮತ್ತು ಯಾವುದೇ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸಲು ಅವರು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂಓದಿ:  ನೆಲಮಂಗಲ| 45 ವರ್ಷದ ದಲಿತ ಕಾರ್ಮಿಕನ ಥಳಿಸಿ ಕೊಲೆ; ಪತ್ರಕರ್ತ ಸೇರಿ ಇಬ್ಬರ ಬಂಧನ

ನೆಲಮಂಗಲ| 45 ವರ್ಷದ ದಲಿತ ಕಾರ್ಮಿಕನ ಥಳಿಸಿ ಕೊಲೆ; ಪತ್ರಕರ್ತ ಸೇರಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...