Homeಮುಖಪುಟಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

- Advertisement -
- Advertisement -

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, “ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?” ಎಂದು ಪ್ರಶ್ನಿಸಿ ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕಿದ್ದಾರೆ.

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು 2025 ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ.

ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದೆಹಲಿಯ ಇಂಡಿಯಾ ಗೇಟ್ ಬಳಿ ಸಂತ್ರಸ್ತೆ, ಆಕೆಯ ತಾಯಿ ಮತ್ತು ಸಹೋದರಿ ಪ್ರತಿಭಟಿಸಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ಎಳೆದೊಯ್ದು ತಮ್ಮ ವಾಹನಗಳಿಗೆ ಹತ್ತಿಸಿದ್ದರು.

ಈ ಕುರಿತು ಬುಧವಾರ (ಡಿ.24) ಮಾಧ್ಯಮದವರು ಸಚಿವ ರಾಜ್‌ಭರ್ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ರಾಜ್‌ಭರ್, “ಇಂಡಿಯಾ ಗೇಟ್? ಆಕೆಯ ಮನೆ ಇರುವುದು ಉನ್ನಾವೋದಲ್ಲಿ” (“India Gate? Ghar to unka Unnao hai”)ಎಂದು ಹೇಳಿದ್ದಾರೆ. ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ಗಹಗಹಿಸಿ ನಕ್ಕಿದ್ದಾರೆ.

“ಕುಲದೀಪ್ ಸಿಂಗ್ ಸೆಂಗಾರ್ ಸಂತ್ರಸ್ತೆಯ ಮನೆಯಿಂದ 5 ಕಿ.ಮೀ ದೂರ ಇರಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಆಕೆಗೆ ಭದ್ರತೆ ಒದಗಿಸುವಂತೆ ಸೂಚಿಸಿದೆ. ಹೀಗಿರುವಾಗ ದೆಹಲಿಯಲ್ಲಿ ಏಕೆ ಪ್ರತಿಭಟಿಸುತ್ತಿದ್ದಾರೆ? ಇಲ್ಲಿ ಭದ್ರತೆ ಕೊರತೆಯ ಪ್ರಶ್ನೆ ಎಲ್ಲಿದೆ? ಎಂದು ಕೇಳಿದ್ದಾರೆ.

ಉತ್ತರ ಪ್ರದೇಶ ಬಿಜೆಪಿಯ ಮಿತ್ರಪಕ್ಷ ಸುಹೇಲದೇವ್ ಭಾರತೀಯ ಸಮಾಜ ಪಾರ್ಟಿಯ (ಎಸ್ಬಿಎಸ್ಪಿ) ಮುಖ್ಯಸ್ಥರಾಗಿರುವ ಸಚಿವ ಓಂ ಪ್ರಕಾಶ್ ರಾಜ್‌ಭರ್‌ನ ಬೇಜವಬ್ದಾರಿ ಹೇಳಿಕೆ ಕುರಿತು ಪ್ರಶ್ನಿಸಲು ಸುದ್ದಿ ಸಂಸ್ಥೆಗಳು ಕರೆ ಮಾಡಿವೆ. ಆದರೆ, ಅವರು ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ. ರಾಜ್‌ಭರ್ ಅವರ ಮಗ ಹಾಗೂ ಎಸ್ಬಿಎಸ್ಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ರಾಜಭರ್ ಮಾತನಾಡಿ, ಹಾಗಾದರೆ ಓಂ ಪ್ರಕಾಶ್ ರಾಜಭರ್ ಅವರು ಈ ಬಗ್ಗೆ ಅಳಬೇಕು, ಅಂದರೆ ಸರಿಯಾಗುತ್ತದೆ. ಪ್ರಕರಣದಲ್ಲಿ ತನಿಖೆಯನ್ನು ಈಗಾಗಲೇ ನಡೆಸಲಾಗಿದೆ. ಕುಟುಂಬಕ್ಕೆ ಭದ್ರತೆಯ ಕುರಿತು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ. ಹೇಳುವುದೇನೂ ಬಾಕಿಯಿಲ್ಲ” ಎಂದಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...