Homeಮುಖಪುಟಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು - ಪ್ರತಿಭಟನೆ

ಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು – ಪ್ರತಿಭಟನೆ

- Advertisement -
- Advertisement -

ನಿರಂತರ ಲೈಂಗಿಕ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಪ್ರಾಣ ಕಳೆದುಕೊಂಡಿರುವ ಅಮಾನವೀಯ, ಅನ್ಯಾಯದ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

ಚೆನ್ನೈನ ಪೂನಮಲ್ಲಿ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ತರಗತಿ ಪ್ರಾಧ್ಯಾಪಕನೊಬ್ಬನಿಂದ ನಿರಂತರ ಲೈಂಗಿಕ ಕಿರುಕುಳ ಅನುಭವಿಸಿ, ಮನನೊಂದು ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ತನಗೆ ಅನ್ಯಾಯವಾಗಿದೆ, ನನಗೆ ನ್ಯಾಯ ಕೊಡಿಸಿ ಎಂದು ಆಕೆ ಪತ್ರ ಬರೆದಿಟ್ಟಿದ್ದಾರೆ. ಆದರೆ, ತನ್ನ ಸಾವಿಗೆ ಯಾರು ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿಲ್ಲ.

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ ಆಗದಿರಲಿ, ಸಾಯುವುದು ಬಿಟ್ಟರೆ ಬೇರೇನೂ ನನಗೆ ಉಳಿದಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಶಾಲೆ ಸೇರಿದಂತೆ ಯಾವುದೇ ಸ್ಥಳವೂ ಹೆಣ್ಣಿಗೆ ಸುರಕ್ಷಿತವಲ್ಲ. ಶಿಕ್ಷಕರನ್ನೂ, ಸಂಬಂಧಿಗಳನ್ನೂ ನಂಬಬೇಡಿ. ಈ ಸಮಾಜವನ್ನೂ ನಂಬಬೇಡಿ. ನನಗೆ ಕೆಲವು ಘಟನೆಗಳು ದುಸ್ವಪ್ನದಂತೆ ಕಾಡುತ್ತಿವೆ. ನನಗೆ ನಿದ್ರೆ ಮಾಡುಲೂ ಆಗುತ್ತಿಲ್ಲ. ಓದಿನ ಮೇಲೆ ಗಮನವನ್ನು ಕೇಂದ್ರೀಕರಿಸಲೂ ಸಾಧ್ಯವಾಗುತ್ತಿಲ್ಲ. ತನ್ನ ಸಾವಿನ ನಂತರವಾದರೂ ಇಂಥಹ ಲೈಂಗಿಕ ಕಿರುಕುಳಗಳು ನಿಲ್ಲಲಿ ಎಂದು ವಿದ್ಯಾರ್ಥಿನಿ ಬರೆದಿದ್ದಾರೆ.

ಆಕೆಯ ಡೆತ್‌ನೋಟ್‌ ಪಡೆದುಕೊಂಡು ಮಂಗಾಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಕಾಲೇಜಿನ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಆತನೇ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎಂದು ಕಾಲೇಜಿನಲ್ಲಿ ಓದುತ್ತಿದ್ದ ಇತರ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. 

ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವಿನ ನಂತರ, ಕಾಲೇಜಿನ ವಿದ್ಯಾರ್ಥಿಗಳು ಆರೋಪಿತ ಪ್ರಾಧ್ಯಾಪಕ ಅಬ್ರಹಾಂ ಅಲೆಕ್ಸ್ ಎಂಬುವವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆತನ ಅಸಭ್ಯ ವರ್ತನಗಳ ಬಗ್ಗೆ ಈ ಹಿಂದೆಯೇ ದೂರು ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ಆತನ ವಿರುದ್ದ ಕ್ರಮ ಕೈಗೊಳ್ಳಲಿಲ್ಲ. ಆತನ್ನು ಬಂಧಿಸಬೇಕು. ಆತನಿಗೆ ಶಿಕ್ಷೆಯಾಗಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: 2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hi sir,
    I am daily follower of your gauri.com
    Thank you so much for your valuable information about reality and fact check

    So now I am requesting you that like me so many friends of mine they have lost money in receiving so many offer messages from fake channels

    So you want take it serious and collect information about it in your way publish in Gauri.com

    Thank you

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...