Homeಮುಖಪುಟಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು - ಪ್ರತಿಭಟನೆ

ಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು – ಪ್ರತಿಭಟನೆ

- Advertisement -
- Advertisement -

ನಿರಂತರ ಲೈಂಗಿಕ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಪ್ರಾಣ ಕಳೆದುಕೊಂಡಿರುವ ಅಮಾನವೀಯ, ಅನ್ಯಾಯದ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

ಚೆನ್ನೈನ ಪೂನಮಲ್ಲಿ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ತರಗತಿ ಪ್ರಾಧ್ಯಾಪಕನೊಬ್ಬನಿಂದ ನಿರಂತರ ಲೈಂಗಿಕ ಕಿರುಕುಳ ಅನುಭವಿಸಿ, ಮನನೊಂದು ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ತನಗೆ ಅನ್ಯಾಯವಾಗಿದೆ, ನನಗೆ ನ್ಯಾಯ ಕೊಡಿಸಿ ಎಂದು ಆಕೆ ಪತ್ರ ಬರೆದಿಟ್ಟಿದ್ದಾರೆ. ಆದರೆ, ತನ್ನ ಸಾವಿಗೆ ಯಾರು ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿಲ್ಲ.

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ ಆಗದಿರಲಿ, ಸಾಯುವುದು ಬಿಟ್ಟರೆ ಬೇರೇನೂ ನನಗೆ ಉಳಿದಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಶಾಲೆ ಸೇರಿದಂತೆ ಯಾವುದೇ ಸ್ಥಳವೂ ಹೆಣ್ಣಿಗೆ ಸುರಕ್ಷಿತವಲ್ಲ. ಶಿಕ್ಷಕರನ್ನೂ, ಸಂಬಂಧಿಗಳನ್ನೂ ನಂಬಬೇಡಿ. ಈ ಸಮಾಜವನ್ನೂ ನಂಬಬೇಡಿ. ನನಗೆ ಕೆಲವು ಘಟನೆಗಳು ದುಸ್ವಪ್ನದಂತೆ ಕಾಡುತ್ತಿವೆ. ನನಗೆ ನಿದ್ರೆ ಮಾಡುಲೂ ಆಗುತ್ತಿಲ್ಲ. ಓದಿನ ಮೇಲೆ ಗಮನವನ್ನು ಕೇಂದ್ರೀಕರಿಸಲೂ ಸಾಧ್ಯವಾಗುತ್ತಿಲ್ಲ. ತನ್ನ ಸಾವಿನ ನಂತರವಾದರೂ ಇಂಥಹ ಲೈಂಗಿಕ ಕಿರುಕುಳಗಳು ನಿಲ್ಲಲಿ ಎಂದು ವಿದ್ಯಾರ್ಥಿನಿ ಬರೆದಿದ್ದಾರೆ.

ಆಕೆಯ ಡೆತ್‌ನೋಟ್‌ ಪಡೆದುಕೊಂಡು ಮಂಗಾಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಕಾಲೇಜಿನ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಆತನೇ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎಂದು ಕಾಲೇಜಿನಲ್ಲಿ ಓದುತ್ತಿದ್ದ ಇತರ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. 

ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವಿನ ನಂತರ, ಕಾಲೇಜಿನ ವಿದ್ಯಾರ್ಥಿಗಳು ಆರೋಪಿತ ಪ್ರಾಧ್ಯಾಪಕ ಅಬ್ರಹಾಂ ಅಲೆಕ್ಸ್ ಎಂಬುವವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆತನ ಅಸಭ್ಯ ವರ್ತನಗಳ ಬಗ್ಗೆ ಈ ಹಿಂದೆಯೇ ದೂರು ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ಆತನ ವಿರುದ್ದ ಕ್ರಮ ಕೈಗೊಳ್ಳಲಿಲ್ಲ. ಆತನ್ನು ಬಂಧಿಸಬೇಕು. ಆತನಿಗೆ ಶಿಕ್ಷೆಯಾಗಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: 2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hi sir,
    I am daily follower of your gauri.com
    Thank you so much for your valuable information about reality and fact check

    So now I am requesting you that like me so many friends of mine they have lost money in receiving so many offer messages from fake channels

    So you want take it serious and collect information about it in your way publish in Gauri.com

    Thank you

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...