Homeಮುಖಪುಟಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು - ಪ್ರತಿಭಟನೆ

ಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು – ಪ್ರತಿಭಟನೆ

- Advertisement -
- Advertisement -

ನಿರಂತರ ಲೈಂಗಿಕ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಪ್ರಾಣ ಕಳೆದುಕೊಂಡಿರುವ ಅಮಾನವೀಯ, ಅನ್ಯಾಯದ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

ಚೆನ್ನೈನ ಪೂನಮಲ್ಲಿ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ತರಗತಿ ಪ್ರಾಧ್ಯಾಪಕನೊಬ್ಬನಿಂದ ನಿರಂತರ ಲೈಂಗಿಕ ಕಿರುಕುಳ ಅನುಭವಿಸಿ, ಮನನೊಂದು ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ತನಗೆ ಅನ್ಯಾಯವಾಗಿದೆ, ನನಗೆ ನ್ಯಾಯ ಕೊಡಿಸಿ ಎಂದು ಆಕೆ ಪತ್ರ ಬರೆದಿಟ್ಟಿದ್ದಾರೆ. ಆದರೆ, ತನ್ನ ಸಾವಿಗೆ ಯಾರು ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿಲ್ಲ.

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ ಆಗದಿರಲಿ, ಸಾಯುವುದು ಬಿಟ್ಟರೆ ಬೇರೇನೂ ನನಗೆ ಉಳಿದಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಶಾಲೆ ಸೇರಿದಂತೆ ಯಾವುದೇ ಸ್ಥಳವೂ ಹೆಣ್ಣಿಗೆ ಸುರಕ್ಷಿತವಲ್ಲ. ಶಿಕ್ಷಕರನ್ನೂ, ಸಂಬಂಧಿಗಳನ್ನೂ ನಂಬಬೇಡಿ. ಈ ಸಮಾಜವನ್ನೂ ನಂಬಬೇಡಿ. ನನಗೆ ಕೆಲವು ಘಟನೆಗಳು ದುಸ್ವಪ್ನದಂತೆ ಕಾಡುತ್ತಿವೆ. ನನಗೆ ನಿದ್ರೆ ಮಾಡುಲೂ ಆಗುತ್ತಿಲ್ಲ. ಓದಿನ ಮೇಲೆ ಗಮನವನ್ನು ಕೇಂದ್ರೀಕರಿಸಲೂ ಸಾಧ್ಯವಾಗುತ್ತಿಲ್ಲ. ತನ್ನ ಸಾವಿನ ನಂತರವಾದರೂ ಇಂಥಹ ಲೈಂಗಿಕ ಕಿರುಕುಳಗಳು ನಿಲ್ಲಲಿ ಎಂದು ವಿದ್ಯಾರ್ಥಿನಿ ಬರೆದಿದ್ದಾರೆ.

ಆಕೆಯ ಡೆತ್‌ನೋಟ್‌ ಪಡೆದುಕೊಂಡು ಮಂಗಾಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಕಾಲೇಜಿನ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಆತನೇ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎಂದು ಕಾಲೇಜಿನಲ್ಲಿ ಓದುತ್ತಿದ್ದ ಇತರ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. 

ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವಿನ ನಂತರ, ಕಾಲೇಜಿನ ವಿದ್ಯಾರ್ಥಿಗಳು ಆರೋಪಿತ ಪ್ರಾಧ್ಯಾಪಕ ಅಬ್ರಹಾಂ ಅಲೆಕ್ಸ್ ಎಂಬುವವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆತನ ಅಸಭ್ಯ ವರ್ತನಗಳ ಬಗ್ಗೆ ಈ ಹಿಂದೆಯೇ ದೂರು ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ಆತನ ವಿರುದ್ದ ಕ್ರಮ ಕೈಗೊಳ್ಳಲಿಲ್ಲ. ಆತನ್ನು ಬಂಧಿಸಬೇಕು. ಆತನಿಗೆ ಶಿಕ್ಷೆಯಾಗಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: 2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hi sir,
    I am daily follower of your gauri.com
    Thank you so much for your valuable information about reality and fact check

    So now I am requesting you that like me so many friends of mine they have lost money in receiving so many offer messages from fake channels

    So you want take it serious and collect information about it in your way publish in Gauri.com

    Thank you

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....