Homeಮುಖಪುಟಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು - ಪ್ರತಿಭಟನೆ

ಲೈಂಗಿಕ ದೌರ್ಜನ್ಯಕ್ಕೊಳಗಾದ ಚೆನ್ನೈ ವಿದ್ಯಾರ್ಥಿನಿಯ ಅಸಹಜ ಸಾವು – ಪ್ರತಿಭಟನೆ

- Advertisement -
- Advertisement -

ನಿರಂತರ ಲೈಂಗಿಕ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಪ್ರಾಣ ಕಳೆದುಕೊಂಡಿರುವ ಅಮಾನವೀಯ, ಅನ್ಯಾಯದ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

ಚೆನ್ನೈನ ಪೂನಮಲ್ಲಿ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ತರಗತಿ ಪ್ರಾಧ್ಯಾಪಕನೊಬ್ಬನಿಂದ ನಿರಂತರ ಲೈಂಗಿಕ ಕಿರುಕುಳ ಅನುಭವಿಸಿ, ಮನನೊಂದು ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ತನಗೆ ಅನ್ಯಾಯವಾಗಿದೆ, ನನಗೆ ನ್ಯಾಯ ಕೊಡಿಸಿ ಎಂದು ಆಕೆ ಪತ್ರ ಬರೆದಿಟ್ಟಿದ್ದಾರೆ. ಆದರೆ, ತನ್ನ ಸಾವಿಗೆ ಯಾರು ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿಲ್ಲ.

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ ಆಗದಿರಲಿ, ಸಾಯುವುದು ಬಿಟ್ಟರೆ ಬೇರೇನೂ ನನಗೆ ಉಳಿದಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಶಾಲೆ ಸೇರಿದಂತೆ ಯಾವುದೇ ಸ್ಥಳವೂ ಹೆಣ್ಣಿಗೆ ಸುರಕ್ಷಿತವಲ್ಲ. ಶಿಕ್ಷಕರನ್ನೂ, ಸಂಬಂಧಿಗಳನ್ನೂ ನಂಬಬೇಡಿ. ಈ ಸಮಾಜವನ್ನೂ ನಂಬಬೇಡಿ. ನನಗೆ ಕೆಲವು ಘಟನೆಗಳು ದುಸ್ವಪ್ನದಂತೆ ಕಾಡುತ್ತಿವೆ. ನನಗೆ ನಿದ್ರೆ ಮಾಡುಲೂ ಆಗುತ್ತಿಲ್ಲ. ಓದಿನ ಮೇಲೆ ಗಮನವನ್ನು ಕೇಂದ್ರೀಕರಿಸಲೂ ಸಾಧ್ಯವಾಗುತ್ತಿಲ್ಲ. ತನ್ನ ಸಾವಿನ ನಂತರವಾದರೂ ಇಂಥಹ ಲೈಂಗಿಕ ಕಿರುಕುಳಗಳು ನಿಲ್ಲಲಿ ಎಂದು ವಿದ್ಯಾರ್ಥಿನಿ ಬರೆದಿದ್ದಾರೆ.

ಆಕೆಯ ಡೆತ್‌ನೋಟ್‌ ಪಡೆದುಕೊಂಡು ಮಂಗಾಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಕಾಲೇಜಿನ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಆತನೇ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎಂದು ಕಾಲೇಜಿನಲ್ಲಿ ಓದುತ್ತಿದ್ದ ಇತರ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. 

ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವಿನ ನಂತರ, ಕಾಲೇಜಿನ ವಿದ್ಯಾರ್ಥಿಗಳು ಆರೋಪಿತ ಪ್ರಾಧ್ಯಾಪಕ ಅಬ್ರಹಾಂ ಅಲೆಕ್ಸ್ ಎಂಬುವವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆತನ ಅಸಭ್ಯ ವರ್ತನಗಳ ಬಗ್ಗೆ ಈ ಹಿಂದೆಯೇ ದೂರು ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ಆತನ ವಿರುದ್ದ ಕ್ರಮ ಕೈಗೊಳ್ಳಲಿಲ್ಲ. ಆತನ್ನು ಬಂಧಿಸಬೇಕು. ಆತನಿಗೆ ಶಿಕ್ಷೆಯಾಗಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: 2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hi sir,
    I am daily follower of your gauri.com
    Thank you so much for your valuable information about reality and fact check

    So now I am requesting you that like me so many friends of mine they have lost money in receiving so many offer messages from fake channels

    So you want take it serious and collect information about it in your way publish in Gauri.com

    Thank you

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...