Homeಮುಖಪುಟಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

- Advertisement -
- Advertisement -

ದೇಶದಾದ್ಯಂತ ಲೋಕಸಭೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಎರಡು ಹಂತಗಳ ಮತದಾನ ಮುಗಿದಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳ ಮತದಾನವೂ ಏಪ್ರಿಲ್ 26ರಂದು ನಡೆದಿದೆ.

ಈ ನಡುವೆ ಗುಜರಾತ್‌ನ ಸೂರತ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರವನ್ನು ಮೂವರು ಸೂಚಕರ ಸಹಿ ಇಲ್ಲಾ ಎಂಬ ಕಾರಣ ನೀಡಿ ಜಿಲ್ಲಾ ಚುನಾವಣಾಧಿಕಾರಿ ಏಪ್ರಿಲ್ 21 ರಂದು ತಿರಸ್ಕರಿಸಿದ್ದರು. ಅದೇ ಕಾರಣ ನೀಡಿ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನೂ ಅಧಿಕಾರಿಗಳು ತಿರಸ್ಕರಿಸಿದ್ದರು. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಇಲ್ಲದಂತಾಯಿತು.

ನಂತರ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂತೆಗೆಕೊಂಡರು. ಏಪ್ರಿಲ್ 22, 2024 ರಂದು ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ‘ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು. ಮೇ 7ರಂದು ಕ್ಷೇತ್ರದಲ್ಲಿ ಮತದಾನ ನಡೆಯಬೇಕಿತ್ತು. ಅದಕ್ಕೂ ಎರಡು ವಾರಗಳ ಮೊದಲು ಈ ಬೆಳವಣಿಗೆ ನಡೆದಿದೆ.

ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳು ಇಲ್ಲದಿದ್ದರೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಸಾಮಾನ್ಯ ಪ್ರಕ್ರಿಯೆ. ಸೂರತ್‌ನಲ್ಲಿ ಹಾಗೆಯೇ ನಡೆದಿದೆ. ಆದರೆ, ಇಲ್ಲಿ ಯೋಜಿತ ಕುತಂತ್ರ ಮಾಡಿ ಬಿಜೆಪಿ ಅಭ್ಯರ್ಥಿಗೆ ಪ್ರತಿಸ್ಪರ್ಧಿಗಳು ಇಲ್ಲದಂತೆ ಮಾಡಲಾಗಿದೆಯಾ? ಎಂಬ ಅನುಮಾನ ಮೂಡಿದೆ.

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದವರು ಆ ಸಹಿ ತಮ್ಮದಲ್ಲ ಎಂದು ಹೇಳಿದ್ದರಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಇಲ್ಲಿ ಕುತೂಹಲಕಾರಿ ಅಂಶವೆಂದರೆ, ಕಾಂಗ್ರೆಸ್‌ ಅಭ್ಯರ್ಥಿಯ ನಾಪಪತ್ರಕ್ಕೆ ಸಹಿ ಹಾಕಿವರು ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರರು. ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಬದಲಿ ಅಭ್ಯರ್ಥಿಯ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದು ಹೇಳಿದ್ದರಿಂದ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ.

ಇಲ್ಲಿ ಅನುಮಾನಕ್ಕೆ ಕಾರಣವಾದ ಅಂಶವೇನೆಂದರೆ, ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರನೇ ಸಹಿ ನಮ್ಮದಲ್ಲ ಎಂದಿರುವುದು ಯಾಕೆ? ಹಾಗಾದರೆ, ಅವರು ಸಹಿ ಹಾಕದೆ ಇನ್ಯಾರು ಸಹಿ ಹಾಕಿದರು? ಒಂದು ವೇಳೆ ಸಹಿ ಅವರದ್ದೇ ಆದರೂ ನಮ್ಮದಲ್ಲ ಎಂದಿರುವುದು ಯಾಕೆ? ಈ ವಿಚಾರಗಳು ಅಭ್ಯರ್ಥಿಗೆ ಗೊತ್ತಿಲ್ಲವೇ? ಲೋಕಸಭೆ ಚುನಾವಣೆಯಂತಹ ಅತ್ಯಂತ ಮಹತ್ವದ ಸ್ಪರ್ಧೆಯಲ್ಲಿ ಅಭ್ಯರ್ಥಿ ಇಷ್ಟೊಂದು ನಿರ್ಲಕ್ಷ್ಯ ವಹಿಸಲು ಸಾಧ್ಯವೇ ಎಂಬುದಾಗಿದೆ.

ಬದಲಿ ಅಭ್ಯರ್ಥಿಯದ್ದೂ ಇದೇ ಕಥೆ. ಅವರ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದಿದ್ದರು. ಹಾಗಾದರೆ, ನಿಜವಾಗಿಯೂ ಸೂಚಕರ ಸಹಿ ಫೋರ್ಜರಿ ಮಾಡಲಾಗಿತ್ತಾ? ಒಂದು ವೇಳೆ ಮಾಡಿದ್ದರೂ ಯಾಕೆ? ಅಭ್ಯರ್ಥಿಯ ಗಮನಕ್ಕೆ ಬಾರದೆ ಇದು ನಡೆಯಿತಾ? ಎಂಬ ಪ್ರಶ್ನೆಗಳು ಮೂಡುತ್ತವೆ.

ಸ್ವತಂತ್ರ ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆಸಿದ ಬಿಜೆಪಿ?

ಕಾಂಗ್ರೆಸ್‌ನ ಮುಖ್ಯ ಅಭ್ಯರ್ಥಿ ಮತ್ತು ಬದಲಿ ಅಭ್ಯರ್ಥಿ ಇಬ್ಬರ ನಾಮಪತ್ರವೂ ತಿರಸ್ಕೃತಗೊಂಡ ಬಳಿಕ, ಚುನಾವಣಾ ಕಣದಲ್ಲಿದ್ದ ಒಬ್ಬರು ಬಿಎಸ್‌ಪಿ ಮತ್ತು 8 ಮಂದಿ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂತೆಗೆದುಕೊಂಡಿದ್ದರು. ಈ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಇಲ್ಲದೆ ಆಯ್ಕೆಯಾಗಲು ದಾರಿ ಮಾಡಿ ಕೊಟ್ಟಿದ್ದರು. ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಒಂದೇ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಇಲ್ಲಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂತೆಗೆಸುವ ಮೂಲಕ ತನ್ನ ಅಭ್ಯರ್ಥಿಯ ಗೆಲುವಿಗೆ ದಾರಿ ಮಾಡಿಕೊಟ್ಟಿತ್ತು ಎಂಬ ಮಾತುಗಳು ಆರಂಭದಲ್ಲಿ ಕೇಳಿ ಬಂದಿತ್ತು. ಇದನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್ ತಾವ್ಡೆ ಏಪ್ರಿಲ್ 23ರಂದು ಒಪ್ಪಿಕೊಂಡಿದ್ದಾರೆ. “ಸೂರತ್‌ನಲ್ಲಿ ಸ್ವತಂತ್ರ ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ನಾವು ಕೇಳಿಕೊಂಡಿದ್ದೆವು” ಎಂದು ತಾವ್ಡೆ ಹೇಳಿದ್ದಾರೆ.

ಅಭ್ಯರ್ಥಿಯನ್ನು ಉಚ್ಚಾಟಿಸಿದ ಕಾಂಗ್ರೆಸ್‌ :

ಬಿಜೆಪಿ ಅಭ್ಯರ್ಥಿಯ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ನಾಪತ್ತೆಯಾಗಿದ್ದರು. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಕೆಲ ವರದಿಗಳು ಬಿಜೆಪಿಯವರು ನೀಲೇಶ್ ಅವರನ್ನು ಅಪಹರಿಸಿದ್ದಾರೆಯೇ? ಎಂಬ ಅನುಮಾನ ವ್ಯಕ್ತಪಡಿಸಿತ್ತು. ಕುಂಭಾಣಿ ಬಿಜೆಪಿ ರೂಪಿಸಿದ ಸಂಚಿನ ಪಾಲುದಾರ ಎಂಬ ಆರೋಪಗಳೂ ಕೇಳಿ ಬಂದಿತ್ತು.

ಈ ಎಲ್ಲಾ ಗೊಂದಲಗಳ ನಡುವೆ ನೀಲೇಶ್ ಕುಂಭಾಣಿಯನ್ನು ಕಾಂಗ್ರೆಸ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ನೀಲೇಶ್ ಕುಂಭಾಣಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ, ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಪಕ್ಷ ಸಾಕಷ್ಟು ಸಮಯವನ್ನು ಒದಗಿಸಿತ್ತು. ಆದರೆ, ನೀವು ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ” ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ವಿಡಿಯೋ ಸಂದೇಶವೊಂದರಲ್ಲಿ ಕುಂಭಾಣಿ ಅವರು ತಾನು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ. “ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ. ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದಾರೆ.

‘ಮ್ಯಾಚ್ ಫಿಕ್ಸಿಂಗ್’ ಎಂದ ಜೈರಾಮ್ ರಮೇಶ್

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಯ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತೀವ್ರ ಕಳವಳ, ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.

ಮೋದಿಯವರ ‘ಅನ್ಯಾಯ ಕಾಲ’ದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ ‘ಮ್ಯಾಚ್-ಫಿಕ್ಸ್’ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಮ್ಮ ಚುನಾವಣೆಗಳು, ನಮ್ಮ ಪ್ರಜಾಪ್ರಭುತ್ವ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಲ್ಲವೂ ಅಪಾಯದಲ್ಲಿದೆ. ಇದು ನಮ್ಮ ಜೀವಮಾನದ ಪ್ರಮುಖ ಚುನಾವಣೆ!” ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...