Homeಮುಖಪುಟಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

‘ಪಿಕ್ಷರ್ ಅಭಿ ಬಾಕಿ ಹೈ : 26ಕ್ಕೆ ಏನಾಗುತ್ತೋ ನಮ್ಮ ಕೈಲಿಲ್ಲ, ಅದು ದೇವರಾಟ’ ಎಂದು ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ ದೀಪ್ ಸಿಧು ವಾರ ಮೊದಲೇ ಹೇಳಿದ್ದ.

- Advertisement -
- Advertisement -

ಜನವರಿ 20 ರಂದು, ಗಣರಾಜ್ಯೋತ್ಸವಕ್ಕೆ ಒಂದು ವಾರ ಮೊದಲು, ದೆಹಲಿ ಪೊಲೀಸರು ಮತ್ತು ಕೃಷಿ ಸಂಘಗಳು ಟ್ರ‍್ಯಾಕ್ಟರ್ ಪೆರೇಡ್‌ನ ಭದ್ರತಾ ನಿಯಮಗಳ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭ. ಆಗ ದೀಪ್ ಸಿಧು, ಫೇಸ್‌ಬುಕ್‌ನಲ್ಲಿ ಲೈವ್‌ಸ್ಟ್ರೀಮ್‌ಗೆ ಹೋಗಿ, ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರನ್ನು ಉದ್ದೇಶಿಸಿ ಹೇಳಿದ್ದ: “ಪಿಕ್ಷರ್ ತೋ ಅಭಿ ಬಾಕಿ ಹೈ ದೋಸ್ತ್” ಎಂದು.

ಜನವರಿ 23 ರಂದು, ಪಂಜಾಬಿ ಭಾಷೆಯಲ್ಲಿದ್ದ ವೆಬ್ ಚಾನೆಲ್ ಸಂದರ್ಶನವನ್ನು ಹಂಚಿಕೊಂಡ. ಅದರಲ್ಲಿ “ಜನವರಿ 26 ರಂದು ಏನಾಗಬಹುದು ಎಂಬುದನ್ನು ನಾವು ಯೋಜಿಸಲು ಸಾಧ್ಯವಿಲ್ಲ. ಇದು ನಮ್ಮ ಲೆಕ್ಕಾಚಾರವನ್ನು ಮೀರಿದ್ದು. ಇದು ಅನಿರೀಕ್ಷಿತವಾದುದು. ಇದು ಸರ್ವಶಕ್ತನಿಗೆ ಬಿಟ್ಟಿದ್ದು. ಜನವರಿ 26 ರಂದು ಏನಾಗುತ್ತದೆ ಎಂದು ನಾವು ಮನುಷ್ಯರು ಏನನ್ನೂ ಹೇಳಲಾರೆವು” ಎಂದಿದ್ದ.

ಪ್ರತಿಭಟನೆಯೊಳಕ್ಕೆ ನುಸುಳಿದಾಗಿನಿಂದ ಈತ ಇಂತಹ ಪ್ರಚೋದನಾಕಾರಿ ಕೆಲಸಗಳನ್ನೇ ಮಾಡುತ್ತ ಬಂದಿದ್ದಾನೆ. ಇದೀಗ ಆತನ ಹಳೆಯ ಪೋಸ್ಟ್‌ಗಳು, ಸಂದಶಗಳಲ್ಲಿ ಗೊತ್ತಾಗುತ್ತಿದೆ,  ಈತ ಸದಾ ಯುವಕರ ಗುಂಪುಗಳನ್ನು ಪ್ರಚೊದಿಸುತ್ತ ಬಂದಿದ್ದಾನೆ ಎಂದು.

ಜನವರಿ 19 ರಂದು, ಸಿಧು ಬಿಕೆಯು (ಹರಿಯಾಣ) ಅಧ್ಯಕ್ಷ ಗುರ್ನಮ್ ಸಿಂಗ್ ಚದುನಿ ಮತ್ತು ತನ್ನನ್ನು ಸಮರ್ಥಿಸಿಕೊಂಡಿದ್ದ. ಎಸ್‌ಕೆಎಂ ಸದಸ್ಯರಾದ ಬಿಕೆಯುನ ಚದುನಿ ಅವರು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ರೈತ ಸಂಘಗಳು ಆರೋಪಿಸಿದ್ದವು. ಆಗ ಚದುನಿ ಪರ ಮಾತನಾಡಿದ್ದ ದೀಪ್ ಸಿಧು, ರಾಜಕೀಯ ಪಕ್ಷಗಳ ಜೊತೆ ಮಾತಾಡಿದರೇನು ತಪ್ಪು ಎಂದು ಸಮರ್ಥೀಸಿಕೊಂಡು ಸಂದೇಶಗಳನ್ನು ಹಾಕಿದ್ದ.

ಜ.25ರಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯನ್ನು ಬೆಂಬಲಿಸಿ, ನಿಗದಿಯಾಗದ ಬೇರೆ ಮಾರ್ಗದಲ್ಲಿ ರ‍್ಯಾಲಿ ಮಾಡಲು ಬಯಸುವವರು, ಕಿಸಾನ್ ಮಜ್ದೂರ್ ಸಮಿತಿಯ ರ‍್ಯಾಲಿಯ ಜೊತೆ ಬನ್ನಿ ಎಂದು ರೈತರನ್ನು ನೇರವಾಗಿ ಪ್ರಚೋದಿಸುತ್ತಿದ್ದ.

ಹಲವು ಸಲ ಹಲವಾರು ರೈತ ನಾಯಕರು ಮತ್ತು ಸಾಮಾನ್ಯ ರೈತರು ಈತನ ಪ್ರಚೋದನಕಾರಿ ಮಾತುಗಳಿಗೆ ಆಕ್ಷೇಪ ಎತ್ತಿದ್ದರು. ಹಾಗಾಗಿ ಆತನನ್ನು ಹೋರಾಟದಿಂದ ಊರ ಇಟ್ಟಿದ್ದರು. ಪಂಜಾಬ್‌ನಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದಾಗ ಆತನಿಗೆ ಚೀಮಾರಿ ಹಾಕಿದ್ದರು. ಆತ ಸಿಂಘುವಿನಿಂದ ಸ್ವಲ್ಪ ದೂರದಲ್ಲಿ ಹೋರಾಟ ಹಮ್ಮಿಕೊಂಡಿದ್ದ.


ಇದನ್ನೂ ಓದಿ; ಯಾವುದೇ ಆತಂಕವಿಲ್ಲ, ಶಾಂತಿಯುತ ದಿಟ್ಟ ಹೋರಾಟ ಮುಂದುವರೆದಿದೆ: ರೈತ ಮುಖಂಡರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...