Homeಮುಖಪುಟಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

‘ಪಿಕ್ಷರ್ ಅಭಿ ಬಾಕಿ ಹೈ : 26ಕ್ಕೆ ಏನಾಗುತ್ತೋ ನಮ್ಮ ಕೈಲಿಲ್ಲ, ಅದು ದೇವರಾಟ’ ಎಂದು ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ ದೀಪ್ ಸಿಧು ವಾರ ಮೊದಲೇ ಹೇಳಿದ್ದ.

- Advertisement -
- Advertisement -

ಜನವರಿ 20 ರಂದು, ಗಣರಾಜ್ಯೋತ್ಸವಕ್ಕೆ ಒಂದು ವಾರ ಮೊದಲು, ದೆಹಲಿ ಪೊಲೀಸರು ಮತ್ತು ಕೃಷಿ ಸಂಘಗಳು ಟ್ರ‍್ಯಾಕ್ಟರ್ ಪೆರೇಡ್‌ನ ಭದ್ರತಾ ನಿಯಮಗಳ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭ. ಆಗ ದೀಪ್ ಸಿಧು, ಫೇಸ್‌ಬುಕ್‌ನಲ್ಲಿ ಲೈವ್‌ಸ್ಟ್ರೀಮ್‌ಗೆ ಹೋಗಿ, ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರನ್ನು ಉದ್ದೇಶಿಸಿ ಹೇಳಿದ್ದ: “ಪಿಕ್ಷರ್ ತೋ ಅಭಿ ಬಾಕಿ ಹೈ ದೋಸ್ತ್” ಎಂದು.

ಜನವರಿ 23 ರಂದು, ಪಂಜಾಬಿ ಭಾಷೆಯಲ್ಲಿದ್ದ ವೆಬ್ ಚಾನೆಲ್ ಸಂದರ್ಶನವನ್ನು ಹಂಚಿಕೊಂಡ. ಅದರಲ್ಲಿ “ಜನವರಿ 26 ರಂದು ಏನಾಗಬಹುದು ಎಂಬುದನ್ನು ನಾವು ಯೋಜಿಸಲು ಸಾಧ್ಯವಿಲ್ಲ. ಇದು ನಮ್ಮ ಲೆಕ್ಕಾಚಾರವನ್ನು ಮೀರಿದ್ದು. ಇದು ಅನಿರೀಕ್ಷಿತವಾದುದು. ಇದು ಸರ್ವಶಕ್ತನಿಗೆ ಬಿಟ್ಟಿದ್ದು. ಜನವರಿ 26 ರಂದು ಏನಾಗುತ್ತದೆ ಎಂದು ನಾವು ಮನುಷ್ಯರು ಏನನ್ನೂ ಹೇಳಲಾರೆವು” ಎಂದಿದ್ದ.

ಪ್ರತಿಭಟನೆಯೊಳಕ್ಕೆ ನುಸುಳಿದಾಗಿನಿಂದ ಈತ ಇಂತಹ ಪ್ರಚೋದನಾಕಾರಿ ಕೆಲಸಗಳನ್ನೇ ಮಾಡುತ್ತ ಬಂದಿದ್ದಾನೆ. ಇದೀಗ ಆತನ ಹಳೆಯ ಪೋಸ್ಟ್‌ಗಳು, ಸಂದಶಗಳಲ್ಲಿ ಗೊತ್ತಾಗುತ್ತಿದೆ,  ಈತ ಸದಾ ಯುವಕರ ಗುಂಪುಗಳನ್ನು ಪ್ರಚೊದಿಸುತ್ತ ಬಂದಿದ್ದಾನೆ ಎಂದು.

ಜನವರಿ 19 ರಂದು, ಸಿಧು ಬಿಕೆಯು (ಹರಿಯಾಣ) ಅಧ್ಯಕ್ಷ ಗುರ್ನಮ್ ಸಿಂಗ್ ಚದುನಿ ಮತ್ತು ತನ್ನನ್ನು ಸಮರ್ಥಿಸಿಕೊಂಡಿದ್ದ. ಎಸ್‌ಕೆಎಂ ಸದಸ್ಯರಾದ ಬಿಕೆಯುನ ಚದುನಿ ಅವರು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ರೈತ ಸಂಘಗಳು ಆರೋಪಿಸಿದ್ದವು. ಆಗ ಚದುನಿ ಪರ ಮಾತನಾಡಿದ್ದ ದೀಪ್ ಸಿಧು, ರಾಜಕೀಯ ಪಕ್ಷಗಳ ಜೊತೆ ಮಾತಾಡಿದರೇನು ತಪ್ಪು ಎಂದು ಸಮರ್ಥೀಸಿಕೊಂಡು ಸಂದೇಶಗಳನ್ನು ಹಾಕಿದ್ದ.

ಜ.25ರಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯನ್ನು ಬೆಂಬಲಿಸಿ, ನಿಗದಿಯಾಗದ ಬೇರೆ ಮಾರ್ಗದಲ್ಲಿ ರ‍್ಯಾಲಿ ಮಾಡಲು ಬಯಸುವವರು, ಕಿಸಾನ್ ಮಜ್ದೂರ್ ಸಮಿತಿಯ ರ‍್ಯಾಲಿಯ ಜೊತೆ ಬನ್ನಿ ಎಂದು ರೈತರನ್ನು ನೇರವಾಗಿ ಪ್ರಚೋದಿಸುತ್ತಿದ್ದ.

ಹಲವು ಸಲ ಹಲವಾರು ರೈತ ನಾಯಕರು ಮತ್ತು ಸಾಮಾನ್ಯ ರೈತರು ಈತನ ಪ್ರಚೋದನಕಾರಿ ಮಾತುಗಳಿಗೆ ಆಕ್ಷೇಪ ಎತ್ತಿದ್ದರು. ಹಾಗಾಗಿ ಆತನನ್ನು ಹೋರಾಟದಿಂದ ಊರ ಇಟ್ಟಿದ್ದರು. ಪಂಜಾಬ್‌ನಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದಾಗ ಆತನಿಗೆ ಚೀಮಾರಿ ಹಾಕಿದ್ದರು. ಆತ ಸಿಂಘುವಿನಿಂದ ಸ್ವಲ್ಪ ದೂರದಲ್ಲಿ ಹೋರಾಟ ಹಮ್ಮಿಕೊಂಡಿದ್ದ.


ಇದನ್ನೂ ಓದಿ; ಯಾವುದೇ ಆತಂಕವಿಲ್ಲ, ಶಾಂತಿಯುತ ದಿಟ್ಟ ಹೋರಾಟ ಮುಂದುವರೆದಿದೆ: ರೈತ ಮುಖಂಡರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...