Homeಮುಖಪುಟಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

‘ಪಿಕ್ಷರ್ ಅಭಿ ಬಾಕಿ ಹೈ : 26ಕ್ಕೆ ಏನಾಗುತ್ತೋ ನಮ್ಮ ಕೈಲಿಲ್ಲ, ಅದು ದೇವರಾಟ’ ಎಂದು ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ ದೀಪ್ ಸಿಧು ವಾರ ಮೊದಲೇ ಹೇಳಿದ್ದ.

- Advertisement -
- Advertisement -

ಜನವರಿ 20 ರಂದು, ಗಣರಾಜ್ಯೋತ್ಸವಕ್ಕೆ ಒಂದು ವಾರ ಮೊದಲು, ದೆಹಲಿ ಪೊಲೀಸರು ಮತ್ತು ಕೃಷಿ ಸಂಘಗಳು ಟ್ರ‍್ಯಾಕ್ಟರ್ ಪೆರೇಡ್‌ನ ಭದ್ರತಾ ನಿಯಮಗಳ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭ. ಆಗ ದೀಪ್ ಸಿಧು, ಫೇಸ್‌ಬುಕ್‌ನಲ್ಲಿ ಲೈವ್‌ಸ್ಟ್ರೀಮ್‌ಗೆ ಹೋಗಿ, ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರನ್ನು ಉದ್ದೇಶಿಸಿ ಹೇಳಿದ್ದ: “ಪಿಕ್ಷರ್ ತೋ ಅಭಿ ಬಾಕಿ ಹೈ ದೋಸ್ತ್” ಎಂದು.

ಜನವರಿ 23 ರಂದು, ಪಂಜಾಬಿ ಭಾಷೆಯಲ್ಲಿದ್ದ ವೆಬ್ ಚಾನೆಲ್ ಸಂದರ್ಶನವನ್ನು ಹಂಚಿಕೊಂಡ. ಅದರಲ್ಲಿ “ಜನವರಿ 26 ರಂದು ಏನಾಗಬಹುದು ಎಂಬುದನ್ನು ನಾವು ಯೋಜಿಸಲು ಸಾಧ್ಯವಿಲ್ಲ. ಇದು ನಮ್ಮ ಲೆಕ್ಕಾಚಾರವನ್ನು ಮೀರಿದ್ದು. ಇದು ಅನಿರೀಕ್ಷಿತವಾದುದು. ಇದು ಸರ್ವಶಕ್ತನಿಗೆ ಬಿಟ್ಟಿದ್ದು. ಜನವರಿ 26 ರಂದು ಏನಾಗುತ್ತದೆ ಎಂದು ನಾವು ಮನುಷ್ಯರು ಏನನ್ನೂ ಹೇಳಲಾರೆವು” ಎಂದಿದ್ದ.

ಪ್ರತಿಭಟನೆಯೊಳಕ್ಕೆ ನುಸುಳಿದಾಗಿನಿಂದ ಈತ ಇಂತಹ ಪ್ರಚೋದನಾಕಾರಿ ಕೆಲಸಗಳನ್ನೇ ಮಾಡುತ್ತ ಬಂದಿದ್ದಾನೆ. ಇದೀಗ ಆತನ ಹಳೆಯ ಪೋಸ್ಟ್‌ಗಳು, ಸಂದಶಗಳಲ್ಲಿ ಗೊತ್ತಾಗುತ್ತಿದೆ,  ಈತ ಸದಾ ಯುವಕರ ಗುಂಪುಗಳನ್ನು ಪ್ರಚೊದಿಸುತ್ತ ಬಂದಿದ್ದಾನೆ ಎಂದು.

ಜನವರಿ 19 ರಂದು, ಸಿಧು ಬಿಕೆಯು (ಹರಿಯಾಣ) ಅಧ್ಯಕ್ಷ ಗುರ್ನಮ್ ಸಿಂಗ್ ಚದುನಿ ಮತ್ತು ತನ್ನನ್ನು ಸಮರ್ಥಿಸಿಕೊಂಡಿದ್ದ. ಎಸ್‌ಕೆಎಂ ಸದಸ್ಯರಾದ ಬಿಕೆಯುನ ಚದುನಿ ಅವರು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ರೈತ ಸಂಘಗಳು ಆರೋಪಿಸಿದ್ದವು. ಆಗ ಚದುನಿ ಪರ ಮಾತನಾಡಿದ್ದ ದೀಪ್ ಸಿಧು, ರಾಜಕೀಯ ಪಕ್ಷಗಳ ಜೊತೆ ಮಾತಾಡಿದರೇನು ತಪ್ಪು ಎಂದು ಸಮರ್ಥೀಸಿಕೊಂಡು ಸಂದೇಶಗಳನ್ನು ಹಾಕಿದ್ದ.

ಜ.25ರಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯನ್ನು ಬೆಂಬಲಿಸಿ, ನಿಗದಿಯಾಗದ ಬೇರೆ ಮಾರ್ಗದಲ್ಲಿ ರ‍್ಯಾಲಿ ಮಾಡಲು ಬಯಸುವವರು, ಕಿಸಾನ್ ಮಜ್ದೂರ್ ಸಮಿತಿಯ ರ‍್ಯಾಲಿಯ ಜೊತೆ ಬನ್ನಿ ಎಂದು ರೈತರನ್ನು ನೇರವಾಗಿ ಪ್ರಚೋದಿಸುತ್ತಿದ್ದ.

ಹಲವು ಸಲ ಹಲವಾರು ರೈತ ನಾಯಕರು ಮತ್ತು ಸಾಮಾನ್ಯ ರೈತರು ಈತನ ಪ್ರಚೋದನಕಾರಿ ಮಾತುಗಳಿಗೆ ಆಕ್ಷೇಪ ಎತ್ತಿದ್ದರು. ಹಾಗಾಗಿ ಆತನನ್ನು ಹೋರಾಟದಿಂದ ಊರ ಇಟ್ಟಿದ್ದರು. ಪಂಜಾಬ್‌ನಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದಾಗ ಆತನಿಗೆ ಚೀಮಾರಿ ಹಾಕಿದ್ದರು. ಆತ ಸಿಂಘುವಿನಿಂದ ಸ್ವಲ್ಪ ದೂರದಲ್ಲಿ ಹೋರಾಟ ಹಮ್ಮಿಕೊಂಡಿದ್ದ.


ಇದನ್ನೂ ಓದಿ; ಯಾವುದೇ ಆತಂಕವಿಲ್ಲ, ಶಾಂತಿಯುತ ದಿಟ್ಟ ಹೋರಾಟ ಮುಂದುವರೆದಿದೆ: ರೈತ ಮುಖಂಡರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...