Homeಮುಖಪುಟಹಿಂದೆಂದೂ ಕಂಡರಿಯದ 'ವಂಚನೆ'ಯ ಮೂಲಕ ಮಹಾರಾಷ್ಟ್ರ ಚುನಾವಣೆ ಬಿಜೆಪಿ ಗೆದ್ದಿದೆ: ಮಲ್ಲಿಕಾರ್ಜುನ ಖರ್ಗೆ

ಹಿಂದೆಂದೂ ಕಂಡರಿಯದ ‘ವಂಚನೆ’ಯ ಮೂಲಕ ಮಹಾರಾಷ್ಟ್ರ ಚುನಾವಣೆ ಬಿಜೆಪಿ ಗೆದ್ದಿದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಹಿಂದೆಂದೂ ಕಂಡರಿಯದ ‘ಮೋಸ’ದ ಮೂಲಕ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆರೋಪಿಸಿದ್ದು, ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕೆಂದು ತೀವ್ರವಾಗಿ ವಾದ ಮಂಡಿಸಿದ್ದಾರೆ. ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಎಐಸಿಸಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಮೋದಿ ಸರ್ಕಾರವು ತನ್ನ ಆಪ್ತ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಆಸ್ತಿಗಳನ್ನು ‘ಮಾರಾಟ’ ಮಾಡುತ್ತಿದ್ದು, ಪ್ರಜಾಪ್ರಭುತ್ವವನ್ನು ನಿಧಾನವಾಗಿ ಕೊನೆಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ಇಡೀ ಜಗತ್ತು ಇವಿಎಂಗಳಿಂದ ಬ್ಯಾಲೆಟ್ ಪೇಪರ್‌ಗೆ ಬದಲಾಗುತ್ತಿದೆ. ಆದರೆ ನಾವು ಇವಿಎಂಗಳನ್ನು ಬಳಸುತ್ತಿದ್ದೇವೆ. ಇದೆಲ್ಲವೂ ವಂಚನೆ. ಅವರು ಅದನ್ನು ಸಾಬೀತುಪಡಿಸಲು ನಮ್ಮನ್ನು ಕೇಳುತ್ತಾರೆ. ನೀವು ಆಡಳಿತ ಪಕ್ಷಕ್ಕೆ ಪ್ರಯೋಜನಕಾರಿಯಾಗುವ ಮತ್ತು ವಿರೋಧ ಪಕ್ಷವನ್ನು ಅನಾನುಕೂಲಕ್ಕೆ ಒಳಪಡಿಸುವ ತಂತ್ರಗಳನ್ನು ರೂಪಿಸಿದ್ದೀರಿ” ಎಂದು ಖರ್ಗೆ ಹೇಳಿದ್ದಾರೆ.

ಅದಾಗ್ಯೂ, ಈ ದೇಶದ ಯುವಕರು ಧ್ವನಿಯೆತ್ತಿ ‘ನಮಗೆ ಬ್ಯಾಲೆಟ್ ಪೇಪರ್ ಬೇಕು ಎಂದು ಹೇಳುತ್ತಾರೆ’ ಎಂದು ಅವರು ಸಬರಮತಿ ನದಿಯ ದಡದಲ್ಲಿ ನಡೆಯುತ್ತಿರುವ ಪಕ್ಷದ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಏನಾಯಿತು. ಈ ಬಗ್ಗೆ ನಾವು ಎಲ್ಲೆಡೆ ಈ ಧ್ವನಿ ಎತ್ತಿದ್ದೇವೆ. ರಾಹುಲ್ ಗಾಂಧಿ ಈ ವಿಷಯವನ್ನು ತೀವ್ರವಾಗಿ ಎತ್ತಿದ್ದೇವೆ. ಅವರು ಯಾವ ರೀತಿಯ ಮತದಾರರ ಪಟ್ಟಿಯನ್ನು ಮಾಡಿದ್ದಾರೆ? ಮಹಾರಾಷ್ಟ್ರ ಚುನಾವಣೆ ವಂಚನೆಯಾಗಿದ್ದು, ಹರಿಯಾಣದಲ್ಲೂ ಅದೇ ಸಂಭವಿಸಿದೆ” ಎಂದು ಖರ್ಗೆ ಹೇಳಿದ್ದಾರೆ.

ಬಿಜೆಪಿ 90% ರಷ್ಟು ಸ್ಥಾನಗಳನ್ನು ಗೆದ್ದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಇದು ಹಿಂದೆಂದೂ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. “ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದಂತಹ ವಂಚನೆ ಪ್ರಜಾಪ್ರಭುತ್ವವನ್ನು ನಾಶಮಾಡುವ ಗುರಿಯನ್ನು ಹೊಂದಿದೆ. ನಾವು ಅನ್ನು ಕಂಡುಹಿಡಿಯಲಿದ್ದು, ಕಳ್ಳ ಯಾವತ್ತಿದ್ದರೂ ಸಿಕ್ಕಿಬೀಳುತ್ತಾನೆ. ನಮ್ಮ ವಕೀಲರು ಮತ್ತು ನಾಯಕರು ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಳೆದ 11 ವರ್ಷಗಳಲ್ಲಿ ಆಡಳಿತ ಪಕ್ಷವು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ, ಸರ್ಕಾರವು ಸಂಸತ್ತಿನ ಬಜೆಟ್ ಅಧಿವೇಶನವನ್ನು ತಮ್ಮ ಇಚ್ಛೆಯಂತೆ ನಡೆಸಿದೆ ಎಂದು ಅವರು ಆರೋಪಿಸಿದ್ದಾರೆ. “ಸಾಂವಿಧಾನಿಕ ಸಂಸ್ಥೆಗಳು ಮತ್ತು ತತ್ವಗಳ ಮೇಲೆ ದಾಳಿ ನಡೆಯುತ್ತಿದ್ದು, ಅವುಗಳನ್ನು ರಕ್ಷಿಸಲು ನಾವು ಹೋರಾಡಬೇಕಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

“ಸ್ಪೀಕರ್ ಪ್ರತಿಪಕ್ಷ ನಾಯಕನ ಹೆಸರನ್ನು ಉಲ್ಲೇಖಿಸುತ್ತಾರೆ, ಆದರೆ ಅವರನ್ನು ಮಾತನಾಡಲು ಬಿಡಲಿಲ್ಲ. ಇದು ಪ್ರಜಾಪ್ರಭುತ್ವದಲ್ಲಿ ನಾಚಿಕೆಗೇಡಿನ ಸಂಗತಿ. ಪ್ರತಿಪಕ್ಷ ನಾಯಕರನ್ನು ಮಾತನಾಡಲು ಬಿಡದ ನೀವು ಜನರು ಧ್ವನಿ ಎತ್ತಲು ಹೇಗೆ ಬಿಡುತ್ತೀರಿ” ಎಂದು ಖರ್ಗೆ ಹೇಳಿದ್ದಾರೆ. ಜನರ ಸಮಸ್ಯೆಗಳನ್ನು ಚರ್ಚಿಸುವ ಬದಲು, ಸರ್ಕಾರವು ತನ್ನ ಕೋಮು ಧ್ರುವೀಕರಣದ ಕಾರ್ಯಸೂಚಿಗಾಗಿ ತಡರಾತ್ರಿಯವರೆಗೆ ಚರ್ಚೆ ನಡೆಸಿತು ಎಂದು ವಕ್ಫ್ (ತಿದ್ದುಪಡಿ) ಮಸೂದೆಯ ಮೇಲಿನ ಚರ್ಚೆಯನ್ನು ಉಲ್ಲೇಖಿಸಿ ಖರ್ಗೆ ಹೇಳಿದ್ದಾರೆ.

ಮಣಿಪುರದ ಕುರಿತು ಚರ್ಚೆ ಬೆಳಿಗ್ಗೆ 4 ಗಂಟೆಗೆ ನಡೆಯಿತು ಮತ್ತು ಮರುದಿನ ಅದನ್ನು ನಡೆಸಬೇಕೆಂದು ತಾವು ವಿನಂತಿಸಿದರು ಸರ್ಕಾರ ಅದಕ್ಕೆ ಒಪ್ಪಲಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರವು ಏನನ್ನೊ ಮರೆಮಾಡಲು ಬಯಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ. “ಪ್ರಜಾಪ್ರಭುತ್ವವನ್ನು ನಿಧಾನ-ನಿಧಾನವಾಗಿ ಮುಗಿಸಲಾಗುತ್ತಿದೆ” ಎಂದು ಖರ್ಗೆ ಆರೋಪಿಸಿದ್ದಾರೆ. ಹಿಂದೆಂದೂ ಕಂಡರಿಯದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...