HomeUncategorizedಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ''ಗೇಮ್ ಚೇಂಜರ್'' ಎಂದು ಶ್ಲಾಘಿಸಿದ ಎನ್‌ಸಿಪಿ

ಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ ಎನ್‌ಸಿಪಿ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಅಭೂತಪೂರ್ವ ಗೆಲುವಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಮತ್ತು ಅದರ ಮಿತ್ರ ಪಕ್ಷ ಎನ್‌ಸಿಪಿ ಭಾನುವಾರ ಶ್ಲಾಘಿಸಿದೆ.

ಇಂದೋರ್‌ನ 18 ನೇ ಶತಮಾನದ ಆಡಳಿತಗಾರ್ತಿ ಮತ್ತು ಧನಗರ್ ಸಮುದಾಯದ (ಕರ್ನಾಟಕದ ಕುರುಬ ಸಮುದಾಯದ) ಪ್ರಮುಖ ಮುಖ ಅಹಲ್ಯಾ ದೇವಿ ಹೋಳ್ಕರ್ ಅವರ ಜನ್ಮದಿನವನ್ನು ಆಚರಿಸಲು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಹಾಗಾಗಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಭಾನುವಾರ ಭೇಟಿ ನೀಡಿದ್ದರು.

ಈ ವೇಳೆ ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭೆಯ ಸಂಸದೆ ಸುಪ್ರಿಯಾ ಸುಳೆ ಅವರು – ಸಿದ್ದರಾಮಯ್ಯ ಅವರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ್ದಾರೆ. ”ನೀವು ಈ ಯುದ್ಧವನ್ನು [ಚುನಾವಣೆಯಲ್ಲಿ] ಹೋರಾಡಿದ ರೀತಿ ನೋಡಿ ನಮಗೆ ಹೆಮ್ಮೆ ಎನಿಸುತ್ತದೆ ಎಂದು ಸುಪ್ರಿಯಾ ಸುಳೆ ಹೇಳಿದರು.

”ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭೂತಪೂರ್ವವಾಗಿ ಗೆಲುವು ಕಂಡಿರುವುದು ನಮಗೆ ಹೆಚ್ಚಿನ ವಿಶ್ವಾಸವನ್ನು ಮೂಡಿಸಿದೆ. ಏಕೆಂದರೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಾಗಿದೆ ಎಂದಾದರೆ, ಮುಂದೆ ಮಹಾರಾಷ್ಟ್ರ ಮತ್ತು ಇಡೀ ದೇಶದಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎನ್ನುವ ವಿಶ್ವಾಸ ಮೂಡಿದೆ. ನೀವು ನಿಜವಾಗಿಯೂ ಗೇಮ್ ಚೇಂಜರ್ ಆಗಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.

ಸುಪ್ರಿಯಾ ಸುಳೆ ಅವರ ಮಾತುಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ”ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ರಾಜ್ಯದಲ್ಲಿ ಉಚಿತ ಬಸ್ ಯೋಜನೆ [ಗುರ್ಹಾ ಶಕ್ತಿ] ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕುಟುಂಬದ ಮುಖ್ಯಸ್ಥರಿಗೆ [ಗೃಹ ಲಕ್ಷ್ಮಿ] ತಿಂಗಳಿಗೆ 2,000 ರೂ.ಗಳನ್ನು ನೀಡುವ ಕರ್ನಾಟಕದ ಯೋಜನೆಗಳನ್ನು ಅನುಕರಿಸುವಂತೆ ನಾನು ಶರದ್ ಪವಾರ್ ಅವರನ್ನು ಒತ್ತಾಯಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದಲ್ಲೇ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ರವಿವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರು ಕನ್ನಡದಲ್ಲಿಯೇ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಸಾಂಗ್ಲಿಯಲ್ಲಿ ಮಾತನಾಡಿ, ”ಈ ಭಾಗದಲ್ಲಿ ಸಾಕಷ್ಟು ಕನ್ನಡ ಮಾತನಾಡುವವರಿದ್ದೀರಿ ಮಹಾರಾಷ್ಟ್ರ ಕಾಂಗ್ರೆಸ್ ಅನ್ನು ಒಗ್ಗೂಡಿಸಿ ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕರೆ ಕೊಟ್ಟರು.

”1947ರಲ್ಲಿ ಸಾಧಿಸಿದ ಸ್ವಾತಂತ್ರ್ಯಕ್ಕಾಗಿ ನಾವು ಕಾಂಗ್ರೆಸ್ ಸದಸ್ಯರಾಗಿದ್ದೆವು. ಇಂದು ನಾವು ಕೋಮುವಾದಿ ಮತ್ತು ಭ್ರಷ್ಟ ಬಿಜೆಪಿಯ ಹಿಡಿತದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಾಗಿದೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದರು.

ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಅವರನ್ನು ಮಹಾರಾಷ್ಟ್ರದಿಂದ ಬೇರು ಸಮೇತ ಕಿತ್ತೊಗೆಯಬೇಕು ಎಂದು ಸಿದ್ದರಾಮಯ್ಯ ಟೀಕಿಸಿದರು.

”ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಪಡೆಯುತ್ತಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿಚಾರವನ್ನು ನಾನು ಮತ್ತು ಡಿಕೆ ಶಿವಕುಮಾರ್ ಅವರು ಪ್ರತಿ ಹಳ್ಳಿಗೆ ತಲುಪಿಸಿದೆವು.ಹಾಗಾಗಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆದು, ಕಾಂಗ್ರೆಸ್ ಅನ್ನು ಮರಳಿ ಅಧಿಕಾರಕ್ಕೆ ತರಲು ನಿರ್ಧರಿಸಿದರು. ಫಡ್ನವಿಸ್ ಶಿಂಧೆ ಸರ್ಕಾರ ಕೂಡ ಅಷ್ಟೇ ಭ್ರಷ್ಟವಾಗಿದೆ. ಹಾಗಾಗಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ” ಎಂದು ಸಿದ್ದರಾಮಯ್ಯ ಗುಡಗಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಬಂದರೆ, ಕರ್ನಾಟಕದ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದು ಕರ್ನಾಟಕ ಬಿಜೆಪಿ ನಂಬಿತ್ತು. ಆದರೆ ಜನರು ಬುದ್ದಿವಂತರು, ಅವರು ನಮಗೆ ಮತ ನೀಡಿದರು. ವಾಸ್ತವವಾಗಿ, ಮೋದಿ ರ್ಯಾಲಿ ಅಥವಾ ರೋಡ್‌ಶೋ ನಡೆಸಿದ ಪ್ರತಿಯೊಂದು ಸ್ಥಳದಲ್ಲೂ ಕಾಂಗ್ರೆಸ್ ಗೆದ್ದಿದೆ. ಇದು ಮೋದಿ ಮ್ಯಾಜಿಕ್ ಮರೆಯಾಗುತ್ತಿರುವುದನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....