HomeUncategorizedಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ''ಗೇಮ್ ಚೇಂಜರ್'' ಎಂದು ಶ್ಲಾಘಿಸಿದ ಎನ್‌ಸಿಪಿ

ಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ ಎನ್‌ಸಿಪಿ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಅಭೂತಪೂರ್ವ ಗೆಲುವಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಮತ್ತು ಅದರ ಮಿತ್ರ ಪಕ್ಷ ಎನ್‌ಸಿಪಿ ಭಾನುವಾರ ಶ್ಲಾಘಿಸಿದೆ.

ಇಂದೋರ್‌ನ 18 ನೇ ಶತಮಾನದ ಆಡಳಿತಗಾರ್ತಿ ಮತ್ತು ಧನಗರ್ ಸಮುದಾಯದ (ಕರ್ನಾಟಕದ ಕುರುಬ ಸಮುದಾಯದ) ಪ್ರಮುಖ ಮುಖ ಅಹಲ್ಯಾ ದೇವಿ ಹೋಳ್ಕರ್ ಅವರ ಜನ್ಮದಿನವನ್ನು ಆಚರಿಸಲು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಹಾಗಾಗಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಭಾನುವಾರ ಭೇಟಿ ನೀಡಿದ್ದರು.

ಈ ವೇಳೆ ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭೆಯ ಸಂಸದೆ ಸುಪ್ರಿಯಾ ಸುಳೆ ಅವರು – ಸಿದ್ದರಾಮಯ್ಯ ಅವರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ್ದಾರೆ. ”ನೀವು ಈ ಯುದ್ಧವನ್ನು [ಚುನಾವಣೆಯಲ್ಲಿ] ಹೋರಾಡಿದ ರೀತಿ ನೋಡಿ ನಮಗೆ ಹೆಮ್ಮೆ ಎನಿಸುತ್ತದೆ ಎಂದು ಸುಪ್ರಿಯಾ ಸುಳೆ ಹೇಳಿದರು.

”ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭೂತಪೂರ್ವವಾಗಿ ಗೆಲುವು ಕಂಡಿರುವುದು ನಮಗೆ ಹೆಚ್ಚಿನ ವಿಶ್ವಾಸವನ್ನು ಮೂಡಿಸಿದೆ. ಏಕೆಂದರೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಾಗಿದೆ ಎಂದಾದರೆ, ಮುಂದೆ ಮಹಾರಾಷ್ಟ್ರ ಮತ್ತು ಇಡೀ ದೇಶದಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎನ್ನುವ ವಿಶ್ವಾಸ ಮೂಡಿದೆ. ನೀವು ನಿಜವಾಗಿಯೂ ಗೇಮ್ ಚೇಂಜರ್ ಆಗಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.

ಸುಪ್ರಿಯಾ ಸುಳೆ ಅವರ ಮಾತುಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ”ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ರಾಜ್ಯದಲ್ಲಿ ಉಚಿತ ಬಸ್ ಯೋಜನೆ [ಗುರ್ಹಾ ಶಕ್ತಿ] ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕುಟುಂಬದ ಮುಖ್ಯಸ್ಥರಿಗೆ [ಗೃಹ ಲಕ್ಷ್ಮಿ] ತಿಂಗಳಿಗೆ 2,000 ರೂ.ಗಳನ್ನು ನೀಡುವ ಕರ್ನಾಟಕದ ಯೋಜನೆಗಳನ್ನು ಅನುಕರಿಸುವಂತೆ ನಾನು ಶರದ್ ಪವಾರ್ ಅವರನ್ನು ಒತ್ತಾಯಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದಲ್ಲೇ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ರವಿವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರು ಕನ್ನಡದಲ್ಲಿಯೇ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಸಾಂಗ್ಲಿಯಲ್ಲಿ ಮಾತನಾಡಿ, ”ಈ ಭಾಗದಲ್ಲಿ ಸಾಕಷ್ಟು ಕನ್ನಡ ಮಾತನಾಡುವವರಿದ್ದೀರಿ ಮಹಾರಾಷ್ಟ್ರ ಕಾಂಗ್ರೆಸ್ ಅನ್ನು ಒಗ್ಗೂಡಿಸಿ ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕರೆ ಕೊಟ್ಟರು.

”1947ರಲ್ಲಿ ಸಾಧಿಸಿದ ಸ್ವಾತಂತ್ರ್ಯಕ್ಕಾಗಿ ನಾವು ಕಾಂಗ್ರೆಸ್ ಸದಸ್ಯರಾಗಿದ್ದೆವು. ಇಂದು ನಾವು ಕೋಮುವಾದಿ ಮತ್ತು ಭ್ರಷ್ಟ ಬಿಜೆಪಿಯ ಹಿಡಿತದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಾಗಿದೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದರು.

ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಅವರನ್ನು ಮಹಾರಾಷ್ಟ್ರದಿಂದ ಬೇರು ಸಮೇತ ಕಿತ್ತೊಗೆಯಬೇಕು ಎಂದು ಸಿದ್ದರಾಮಯ್ಯ ಟೀಕಿಸಿದರು.

”ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಪಡೆಯುತ್ತಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿಚಾರವನ್ನು ನಾನು ಮತ್ತು ಡಿಕೆ ಶಿವಕುಮಾರ್ ಅವರು ಪ್ರತಿ ಹಳ್ಳಿಗೆ ತಲುಪಿಸಿದೆವು.ಹಾಗಾಗಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆದು, ಕಾಂಗ್ರೆಸ್ ಅನ್ನು ಮರಳಿ ಅಧಿಕಾರಕ್ಕೆ ತರಲು ನಿರ್ಧರಿಸಿದರು. ಫಡ್ನವಿಸ್ ಶಿಂಧೆ ಸರ್ಕಾರ ಕೂಡ ಅಷ್ಟೇ ಭ್ರಷ್ಟವಾಗಿದೆ. ಹಾಗಾಗಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ” ಎಂದು ಸಿದ್ದರಾಮಯ್ಯ ಗುಡಗಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಬಂದರೆ, ಕರ್ನಾಟಕದ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದು ಕರ್ನಾಟಕ ಬಿಜೆಪಿ ನಂಬಿತ್ತು. ಆದರೆ ಜನರು ಬುದ್ದಿವಂತರು, ಅವರು ನಮಗೆ ಮತ ನೀಡಿದರು. ವಾಸ್ತವವಾಗಿ, ಮೋದಿ ರ್ಯಾಲಿ ಅಥವಾ ರೋಡ್‌ಶೋ ನಡೆಸಿದ ಪ್ರತಿಯೊಂದು ಸ್ಥಳದಲ್ಲೂ ಕಾಂಗ್ರೆಸ್ ಗೆದ್ದಿದೆ. ಇದು ಮೋದಿ ಮ್ಯಾಜಿಕ್ ಮರೆಯಾಗುತ್ತಿರುವುದನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...