HomeUncategorizedಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ''ಗೇಮ್ ಚೇಂಜರ್'' ಎಂದು ಶ್ಲಾಘಿಸಿದ ಎನ್‌ಸಿಪಿ

ಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ ಎನ್‌ಸಿಪಿ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಅಭೂತಪೂರ್ವ ಗೆಲುವಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಮತ್ತು ಅದರ ಮಿತ್ರ ಪಕ್ಷ ಎನ್‌ಸಿಪಿ ಭಾನುವಾರ ಶ್ಲಾಘಿಸಿದೆ.

ಇಂದೋರ್‌ನ 18 ನೇ ಶತಮಾನದ ಆಡಳಿತಗಾರ್ತಿ ಮತ್ತು ಧನಗರ್ ಸಮುದಾಯದ (ಕರ್ನಾಟಕದ ಕುರುಬ ಸಮುದಾಯದ) ಪ್ರಮುಖ ಮುಖ ಅಹಲ್ಯಾ ದೇವಿ ಹೋಳ್ಕರ್ ಅವರ ಜನ್ಮದಿನವನ್ನು ಆಚರಿಸಲು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಹಾಗಾಗಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಭಾನುವಾರ ಭೇಟಿ ನೀಡಿದ್ದರು.

ಈ ವೇಳೆ ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭೆಯ ಸಂಸದೆ ಸುಪ್ರಿಯಾ ಸುಳೆ ಅವರು – ಸಿದ್ದರಾಮಯ್ಯ ಅವರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ್ದಾರೆ. ”ನೀವು ಈ ಯುದ್ಧವನ್ನು [ಚುನಾವಣೆಯಲ್ಲಿ] ಹೋರಾಡಿದ ರೀತಿ ನೋಡಿ ನಮಗೆ ಹೆಮ್ಮೆ ಎನಿಸುತ್ತದೆ ಎಂದು ಸುಪ್ರಿಯಾ ಸುಳೆ ಹೇಳಿದರು.

”ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭೂತಪೂರ್ವವಾಗಿ ಗೆಲುವು ಕಂಡಿರುವುದು ನಮಗೆ ಹೆಚ್ಚಿನ ವಿಶ್ವಾಸವನ್ನು ಮೂಡಿಸಿದೆ. ಏಕೆಂದರೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಾಗಿದೆ ಎಂದಾದರೆ, ಮುಂದೆ ಮಹಾರಾಷ್ಟ್ರ ಮತ್ತು ಇಡೀ ದೇಶದಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎನ್ನುವ ವಿಶ್ವಾಸ ಮೂಡಿದೆ. ನೀವು ನಿಜವಾಗಿಯೂ ಗೇಮ್ ಚೇಂಜರ್ ಆಗಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.

ಸುಪ್ರಿಯಾ ಸುಳೆ ಅವರ ಮಾತುಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ”ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ರಾಜ್ಯದಲ್ಲಿ ಉಚಿತ ಬಸ್ ಯೋಜನೆ [ಗುರ್ಹಾ ಶಕ್ತಿ] ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕುಟುಂಬದ ಮುಖ್ಯಸ್ಥರಿಗೆ [ಗೃಹ ಲಕ್ಷ್ಮಿ] ತಿಂಗಳಿಗೆ 2,000 ರೂ.ಗಳನ್ನು ನೀಡುವ ಕರ್ನಾಟಕದ ಯೋಜನೆಗಳನ್ನು ಅನುಕರಿಸುವಂತೆ ನಾನು ಶರದ್ ಪವಾರ್ ಅವರನ್ನು ಒತ್ತಾಯಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದಲ್ಲೇ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ರವಿವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರು ಕನ್ನಡದಲ್ಲಿಯೇ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಸಾಂಗ್ಲಿಯಲ್ಲಿ ಮಾತನಾಡಿ, ”ಈ ಭಾಗದಲ್ಲಿ ಸಾಕಷ್ಟು ಕನ್ನಡ ಮಾತನಾಡುವವರಿದ್ದೀರಿ ಮಹಾರಾಷ್ಟ್ರ ಕಾಂಗ್ರೆಸ್ ಅನ್ನು ಒಗ್ಗೂಡಿಸಿ ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕರೆ ಕೊಟ್ಟರು.

”1947ರಲ್ಲಿ ಸಾಧಿಸಿದ ಸ್ವಾತಂತ್ರ್ಯಕ್ಕಾಗಿ ನಾವು ಕಾಂಗ್ರೆಸ್ ಸದಸ್ಯರಾಗಿದ್ದೆವು. ಇಂದು ನಾವು ಕೋಮುವಾದಿ ಮತ್ತು ಭ್ರಷ್ಟ ಬಿಜೆಪಿಯ ಹಿಡಿತದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಾಗಿದೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದರು.

ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಅವರನ್ನು ಮಹಾರಾಷ್ಟ್ರದಿಂದ ಬೇರು ಸಮೇತ ಕಿತ್ತೊಗೆಯಬೇಕು ಎಂದು ಸಿದ್ದರಾಮಯ್ಯ ಟೀಕಿಸಿದರು.

”ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಪಡೆಯುತ್ತಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿಚಾರವನ್ನು ನಾನು ಮತ್ತು ಡಿಕೆ ಶಿವಕುಮಾರ್ ಅವರು ಪ್ರತಿ ಹಳ್ಳಿಗೆ ತಲುಪಿಸಿದೆವು.ಹಾಗಾಗಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆದು, ಕಾಂಗ್ರೆಸ್ ಅನ್ನು ಮರಳಿ ಅಧಿಕಾರಕ್ಕೆ ತರಲು ನಿರ್ಧರಿಸಿದರು. ಫಡ್ನವಿಸ್ ಶಿಂಧೆ ಸರ್ಕಾರ ಕೂಡ ಅಷ್ಟೇ ಭ್ರಷ್ಟವಾಗಿದೆ. ಹಾಗಾಗಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ” ಎಂದು ಸಿದ್ದರಾಮಯ್ಯ ಗುಡಗಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಬಂದರೆ, ಕರ್ನಾಟಕದ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದು ಕರ್ನಾಟಕ ಬಿಜೆಪಿ ನಂಬಿತ್ತು. ಆದರೆ ಜನರು ಬುದ್ದಿವಂತರು, ಅವರು ನಮಗೆ ಮತ ನೀಡಿದರು. ವಾಸ್ತವವಾಗಿ, ಮೋದಿ ರ್ಯಾಲಿ ಅಥವಾ ರೋಡ್‌ಶೋ ನಡೆಸಿದ ಪ್ರತಿಯೊಂದು ಸ್ಥಳದಲ್ಲೂ ಕಾಂಗ್ರೆಸ್ ಗೆದ್ದಿದೆ. ಇದು ಮೋದಿ ಮ್ಯಾಜಿಕ್ ಮರೆಯಾಗುತ್ತಿರುವುದನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...