Homeಕರ್ನಾಟಕದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

ದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

- Advertisement -
- Advertisement -

ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಘಟನೆ ವಿವರ:

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...