Homeಕರ್ನಾಟಕದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

ದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

- Advertisement -
- Advertisement -

ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಘಟನೆ ವಿವರ:

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...