Homeಕರ್ನಾಟಕದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

ದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

- Advertisement -
- Advertisement -

ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಘಟನೆ ವಿವರ:

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...