Homeಕರ್ನಾಟಕದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

ದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

- Advertisement -
- Advertisement -

ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಘಟನೆ ವಿವರ:

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...