Homeಕರ್ನಾಟಕದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

ದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

- Advertisement -
- Advertisement -

ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಘಟನೆ ವಿವರ:

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...