Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...