Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...