Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....