Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...