Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...