Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...