Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...