Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...