Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...