Homeಕರ್ನಾಟಕಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದಲ್ಲಿ ಅನರ್ಹರ ಮತಬೇಟೆ: ಏನಿರಬಹುದು ಫಲಿತಾಂಶ?

- Advertisement -
- Advertisement -

ಒಂದೆಡೆ ಪ್ರವಾಹದಿಂದ ಮನೆಮಠ ಕಳೆದುಕೊಂಡಿರುವ ಸಂತ್ರಸ್ತರು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ದೊರೆತ ಜನಾದೇಶವನ್ನು ಮೂರು ಕಾಸಿಗೆ ಹರಾಜಿಗಿಟ್ಟು, ಇದ್ದ ಸರಕಾರವನ್ನು ಉರುಳಿಸಿ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಹೊಸ ಸರಕಾರ ಸ್ಥಾಪನೆ ಮಾಡಲು ಕಾರಣರಾದ ಅನರ್ಹರೆಂಬ ಬಿರುದಾಂಕಿತ ಜನಪ್ರತಿನಿಧಿಗಳು ಮತ್ತೆ ಮತ ಭಿಕ್ಷೆಗೆ ಇಳಿದಿದ್ದಾರೆ.

ಅಥಣಿ

ಕಳೆದ ಬಾರಿ ಸೋತರೂ ಹೈಕಮಾಂಡ್ ಕೃಪೆಯಿಂದ ಉಪಮುಖ್ಯಮಂತ್ರಿಯಾಗಿ ಎಲ್ಲರ ಕಣ್ಣು ಕುಕ್ಕುತ್ತಿರುವ ಲಕ್ಷ್ಮಣ ಸವದಿಗೆ ಈ ಚುನಾವಣೆ ಬಿಸಿತುಪ್ಪವಾಗಿದೆ. ಯಾರ ಕೈಯಲ್ಲಿ ಸೋಲನುಭವಿಸಿದ್ದರೊ ಅವರನ್ನೆ ಗೆಲ್ಲಿಸುವ ಜವಾಬ್ದಾರಿ ಈಗ ಸವದಿ ಮೇಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹೇಶ್ ಕುಮಟಳ್ಳಿ ಹೆಸರಿಗೆ ಅಭ್ಯರ್ಥಿ. ಚುನಾವಣೆ ಮಾಡುತ್ತಿರುವವರು ಇನ್ನಾರೊ. ಹೀಗಾಗಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‍ನ ಗಜಾನನ ಮಂಗಸೂಳಿಗೆ ಗೊಂದಲದ ಲಾಭವಾದರೆ ಆಶ್ಚರ್ಯವಿಲ್ಲ. ಇಲ್ಲಿ ಯಾರೇ ಗೆದ್ದರೂ ಸೋಲುವುದು ಲಕ್ಷ್ಮಣ ಸವದಿಯೇ. ಯಾಕೆಂದರೆ ಕುಮಟಳ್ಳಿ ಗೆಲ್ಲಿಸಿದರೆ ಕ್ಷೇತ್ರ ಕೈತಪ್ಪುತ್ತದೆ. ಸೋಲಿಸಿದರೆ ಉಪ ಮುಖ್ಯಮಂತ್ರಿ ಪಟ್ಟ. ಇವುಗಳ ಮಧ್ಯೆ ಆಯ್ಕೆ ಬಲು ಕಷ್ಟ.

ಕಾಗವಾಡಕಳೆದ ಬಾರಿಯ ಎದುರಾಳಿಗಳು ಈ ಬಾರಿಯೂ ಮುಖಾಮುಖಿಯಾಗಿದ್ದಾರೆ. ಒಂದೇ ವ್ಯತ್ಯಾಸ ಪಕ್ಷ ಮತ್ತು ಚಿನ್ಹೆ ಅದಲು ಬದಲು. ಕಾಂಗ್ರೆಸ್‍ನ ಶ್ರೀಮಂತ ಪಾಟೀಲ್ ಈ ಬಾರಿ ಅನರ್ಹನೆಂಬ ಹಣೆಪಟ್ಟಿಯೊಂದಿಗೆ ಬಿಜೆಪಿ ಅಭ್ಯರ್ಥಿ. ಜನರ ತಿರಸ್ಕಾರಕ್ಕೆ ಗುರಿಯಾಗಿದ್ದ ರಾಜು ಕಾಗೆ ಈಗ ಕಾಂಗ್ರೆಸ್‍ನ ಹುರಿಯಾಳು. ಇಲ್ಲಿ ಯಾರೇ ಗೆದ್ದರೂ ಅಂತರ ಬಲು ಕಡಿಮೆ.

ಹಿರೇಕೆರೂರುಆಪರೇಷನ್ ಕಮಲಕ್ಕೆ ನಾನು ಬೀಳುವುದಿಲ್ಲವೆನ್ನುತ್ತಲೆ ಕಮಲದ ಗಾಳಕ್ಕೆ ಬಿದ್ದ ಮಾಜಿ ಪೊಲೀಸ್ ಹಾಲಿ ರಾಜಕೀಯ ನಟ ಬಿ.ಸಿ.ಪಾಟೀಲ್‍ರ ಮಂತ್ರಿ ಪದವಿ ಆಸೆಗಾಗಿ ಹಿರೇಕೆರೂರಿನಲ್ಲಿ ಮತ್ತೆ ಚುನಾವಣೆ ಬಂದೊದಗಿದೆ. ಖಾಕಿ ಬಿಟ್ಟು ಖಾದಿ ಹಾಕಿದ್ದ ಪಾಟೀಲರು ಈ ಬಾರಿ ಅದರ ಮೇಲೆ ಕೇಸರಿ ಶಾಲು ಹೊದ್ದಿದ್ದಾರೆ. ಅವರ ಎದುರಾಳಿ ಇನ್ನೊಬ್ಬ ಲಿಂಗಾಯತ ಬನ್ನಿಕೋಡ್ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ 555 ಮತಗಳಿಂದ ಸೋತಿದ್ದ ಬಿಜೆಪಿಯ ಯು.ಬಿ.ಬಣಕಾರ ಈ ಬಾರಿ ಭಿನ್ನಮತವನ್ನು ಹೊರಗಡೆ ತೋರಿಲ್ಲವಾದರು ಒಳಗೆ ಕನ್ನ ಕೊರೆಯಲ್ಲ ಅಂತ ಹೇಳೊಕಾಗಲ್ಲ.

ರಾಣಿಬೆನ್ನೂರಅದೃಷ್ಟ ಒಲಿದರೆ ಒದಕೊಂಡು ಬರುತ್ತದೆ ಅಂತಾರೆ. ಇದು ರಾಣಿಬೆನ್ನೂರ ಕ್ಷೇತ್ರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಯಾಕೆಂದರೆ ಮೊದಲು ಅದೃಷ್ಟ ಕೈ ಹಿಡಿದಿದ್ದು ಆರ್.ಶಂಕರ್‌ಗೆ ಸಮ್ಮಿಶ್ರ ಸರಕಾರದಲ್ಲಿ ಎರಡೆರಡು ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ನಂತರ ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹತೆ ಪಟ್ಟಕಟ್ಟಿಕೊಂಡು ಹೆಸರೂ ಕೆಡಿಸಿಕೊಂಡು ಟಿಕೆಟ್ ಪಡೆಯಲೂ ವಿಫಲರಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ತಾವೇ ಬೆಂಕಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಶಂಕರ್ ಬದಲು BJP ಇಲ್ಲಿಂದ ಪೂಜಾರಿ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಹಳೆಹುಲಿ K.B ಕೋಳಿವಾಡರನ್ನು ಮತ್ತೊಮ್ಮೆ ಅದೃಷ್ಟದ ಬಾಗಿಲ ಬಳಿ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...