Homeಮುಖಪುಟನೋಂದಣಿಯಾಗದ ಮದರಸಾಗಳಿಗೆ ದಿನಕ್ಕೆ ₹10,000 ದಂಡ ವಿಧಿಸಿದ ಆದಿತ್ಯನಾಥ್ ಸರ್ಕಾರ

ನೋಂದಣಿಯಾಗದ ಮದರಸಾಗಳಿಗೆ ದಿನಕ್ಕೆ ₹10,000 ದಂಡ ವಿಧಿಸಿದ ಆದಿತ್ಯನಾಥ್ ಸರ್ಕಾರ

- Advertisement -
- Advertisement -

ಮುಜಾಫರ್‌ನಗರದಲ್ಲಿ ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಮದರಸಾಗಳು ದಿನಕ್ಕೆ ₹10,000 ದಂಡ ತೆರಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮೂಲ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಸರಿಯಾದ ದಾಖಲಾತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಹತ್ತಕ್ಕೂ ಹೆಚ್ಚು ಮದರಸಾಗಳಿಗೆ ಮೂಲ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ನೋಟಿಸ್ ಜಾರಿ ಮಾಡಿದ್ದು, ಸೂಕ್ತ ದಾಖಲೆಗಳನ್ನು ನೀಡುವಂತೆ ಸೂಚಿಸಿದೆ.

ಉತ್ತರ ಪ್ರದೇಶದಲ್ಲಿ ಸುಮಾರು 24,000 ಮದರಸಾಗಳಿವೆ, ಅವುಗಳಲ್ಲಿ 16,000 ಮಾನ್ಯತೆ ಪಡೆದಿದ್ದು ಇನ್ನು 8,000 ಮದರಸಾಗಳು ಮಾನ್ಯತೆ ಪಡೆದಿಲ್ಲ ಎಂದು ಅಧಿಕಾರಿಗಳ ತಿಳಿಸಿದ್ದಾರೆ.

ನೋಟಿಸ್ ನೀಡಿರುವ ಮದರಸಾಗಳಿಗೆ ಆದೇಶ ಬಂದ ಮೂರು ದಿನಗಳೊಳಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

”ಮದರಸಾಗಳು ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ದಿನಕ್ಕೆ ₹10,000 ದಂಡ ವಿಧಿಸಲಾಗುವುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಶುಭಂ ಶುಕ್ಲಾ ಅವರು, ”ಇಲ್ಲಿ ನಡೆಯುತ್ತಿರುವ ನೂರಕ್ಕೂ ಹೆಚ್ಚು ಮದರಸಾಗಳು ಜಿಲ್ಲೆಯಲ್ಲಿ ನೋಂದಣಿ ಅಥವಾ ಮಾನ್ಯತೆ ಹೊಂದಿಲ್ಲ ಮತ್ತು ನಿಯಮಾವಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ತಮ್ಮ ಕಚೇರಿಗೆ ಮಾಹಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

ಮದರಸಾಗಳಿಗೆ ಶಿಕ್ಷಣ ಇಲಾಖೆಯ ನೀಡಿದ ನೋಟಿಸ್‌ನ್ನು “ಕಾನೂನುಬಾಹಿರ” ಎಂದು ಭಾರತೀಯ ಮುಸ್ಲಿಮರ ಸಂಘಟನೆಯಾದ ಜಮಿಯತ್ ಉಲಾಮಾ-ಇ-ಹಿಂದ್ ಹೇಳಿದೆ.

ಜಮಿಯತ್ ಉಲೇಮಾ-ಎ-ಹಿಂದ್‌ನ ಉತ್ತರ ಪ್ರದೇಶ ಘಟಕದ ಕಾರ್ಯದರ್ಶಿ ಮೌಲಾನಾ ಝಾಕಿರ್ ಹುಸೇನ್ ಮಾತನಾಡಿ, ”ರಾಜ್ಯದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲು ಅಕ್ರಮ ನೋಟಿಸ್‌ಗಳನ್ನು ನೀಡುವ ಮೂಲಕ ಕಿರುಕುಳ ನೀಡಲಾಗುತ್ತಿದೆ” ಎಂದು ಹೇಳಿದರು.

”ಮದರಸಾಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ದಿನಕ್ಕೆ ₹ 10,000 ದಂಡವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ” ಎಂದು ಹುಸೇನ್ ಹೇಳಿದರು.

”ರಾಜ್ಯದ ಸುಮಾರು 4,000 ಮದರಸಾಗಳನ್ನು ವಿದೇಶಿ ಹಣದಿಂದ ನಡೆಸಲಾಗುತ್ತಿದೆ ಎಂದು ಲಕ್ನೋದ ಹಿರಿಯ ಅಧಿಕಾರಿಯೊಬ್ಬರು ಆರೋಪ ಮಾಡಿದ್ದಾರೆ.

”4,000 ಮದರಸಾಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರವು ಮೂರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ, ಅವುಗಳಲ್ಲಿ ಹೆಚ್ಚಿನವು ಇಂಡೋ-ನೇಪಾಳ ಗಡಿಯಿಂದ ಬರುವ ಹಣದಿಂದ ನಡೆಯುತ್ತಿವೆ, ಅವು ವಿದೇಶದಿಂದ ಹಣವನ್ನು ಪಡೆಯುತ್ತಿವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

”ಅವರು ಪಡೆದ ಹಣವನ್ನು ಭಯೋತ್ಪಾದನೆ ಅಥವಾ ಬಲವಂತದ ಧಾರ್ಮಿಕ ಮತಾಂತರದಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗಿದೆಯೇ ಎಂದು ಎಸ್‌ಐಟಿ ಪರಿಶೀಲಿಸುತ್ತದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಕ್ತ ವರ್ಗಾವಣೆಯ ನಂತರ 14 ಮಕ್ಕಳಿಗೆ ಎಚ್‌ಐವಿ, ಹೆಪಟೈಟಿಸ್ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...